ಚಿಕ್ಕಮಗಳೂರು : ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ತಡರಾತ್ರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ . ಸಿ.ಟಿ ರವಿಯನ್ನು ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಚುನಾವಣೆಯ ಹಿನ್ನೆಲೆಯಲ್ಲಿ ಸಿ.ಟಿ ರವಿ ಅನಾರೋಗ್ಯವನ್ನೂ ಲೆಕ್ಕಿಸದೇ ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದರು. ವಿಶ್ರಾಂತಿ ಕೊರತೆ ಹಿನ್ನೆಲೆಯಲ್ಲಿ ಸಿ.ಟಿ ರವಿ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದೆ.
ಕಳೆದ ಏಪ್ರಿಲ್ನಲ್ಲಿಯೂ ಸಿ.ಟಿ ರವಿ ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.