• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಕಾರ್ಯಕಾರಿಣಿ ‘ಸಬ್ ಚೆಂಗಾಸಿ’ ಎಂದರೂ, ಸಚಿವ ಈಶ್ವರಪ್ಪ ಕೆರಳಿದ್ದೇಕೆ?

Shivakumar by Shivakumar
December 30, 2021
in ಕರ್ನಾಟಕ, ರಾಜಕೀಯ
0
ಬಿಜೆಪಿ ಕಾರ್ಯಕಾರಿಣಿ ‘ಸಬ್ ಚೆಂಗಾಸಿ’ ಎಂದರೂ, ಸಚಿವ ಈಶ್ವರಪ್ಪ ಕೆರಳಿದ್ದೇಕೆ?
Share on WhatsAppShare on FacebookShare on Telegram

ನಾಯಕತ್ವ ಬದಲಾವಣೆಯ ಚರ್ಚೆಯ ನಡುವೆ ಹಲವು ನಿರೀಕ್ಷೆ ಮತ್ತು ಕುತೂಹಲದ ನಡುವೆ ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಮುಕ್ತಾಯ ಕಂಡಿದೆ.

ADVERTISEMENT

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ; ಹಾಲಿ ಸಿಎಂ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಘೋಷಿಸುವ ಮೂಲಕ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳಿಗೆ ಇತಿಶ್ರೀ ಹಾಡುವ ಯತ್ನ ಮಾಡಿದ್ದಾರೆ. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಡಳಿತಕ್ಕೆ ಫುಲ್ ಮಾರ್ಕ್ಸ್ ನೀಡಿರುವ ಅವರು, ಅತ್ಯುತ್ತಮ ಆಡಳಿತ ನಡೆಸುತ್ತಿದ್ದಾರೆ. ವರಿಷ್ಠರಿಗೆ ಸಂಪೂರ್ಣ ತೃಪ್ತಿ ಇದೆ ಎಂದಿದ್ದಾರೆ. ಹಾಗೇ ನಾಯಕತ್ವ ಬದಲಾವಣೆಯೂ ಸೇರಿದಂತೆ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ತರುವ ಹೇಳಿಕೆ ನೀಡಿದಲ್ಲಿ ಪಕ್ಷದ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಆರು ತಿಂಗಳ ಹಿಂದೆ ಬಿ ಎಸ್ ಯಡಿಯೂರಪ್ಪ ಪದಚ್ಯುತಿಗೆ ಮುನ್ನಾ ದಿನ ಕೂಡ ಅರುಣ್ ಸಿಂಗ್ ಅವರು ಇಂತಹದ್ದೇ ಯಥಾವತ್ತು ಡೈಲಾಗ್ ಹೊಡೆದಿದ್ದರು ಮತ್ತು ಆ ಬಳಿಕ ಆಗಿದ್ದು ಸಂಪೂರ್ಣ ತಿರುವು ಮುರುವು ಎಂಬುದನ್ನು ಸ್ಮರಿಸಿಕೊಂಡರೆ, ಉಸ್ತುವಾರಿಯ ಇಂತಹ ಮಾತುಗಳ ಗಂಭೀರತೆಯ ಕುರಿತು ಸ್ಪಷ್ಟತೆ ಸಿಗದೇ ಇರದು.

ಆದರೆ, ವಿಪರ್ಯಾಸವೆಂದರೆ ಕಾರ್ಯಕಾರಿಣಿಯ ಮಗ್ಗುಲಲ್ಲೇ ಹಿರಿಯ ಸಚಿವರು, ಸಿಎಂ ರಾಜಕೀಯ ಕಾರ್ಯದರ್ಶಿ, ಮಾಜಿ ಸಚಿವರು ಮತ್ತಿತರೆ ನಾಯಕರ ಮಾತುಗಳು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದಂತೆ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ. ಸಬ್ ಚೆಂಗಾಸಿ ಎಂಬ ಅವರ ಮಾತು ಕೇವಲ ಔಪಚಾರಿಕ ಮತ್ತು ಪಕ್ಷದ ಶಿಸ್ತಿನ ಶಿಷ್ಟಾಚಾರದ ಮಾತೆ ವಿನಃ ವಾಸ್ತವವಲ್ಲ ಎಂಬುದನ್ನು ಸಾರಿ ಹೇಳಿವೆ.

ಪ್ರಮುಖವಾಗಿ ನಾಯಕತ್ವ ಬದಲಾವಣೆಯ ವಿಷಯವನ್ನು ದಿಢೀರನೇ ಮುನ್ನೆಲೆ ತಂದ ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ ಮತ್ತು ಮುರುಗೇಶ್ ನಿರಾಣಿಯವರನ್ನು ಗುರಿಯಾಗಿಟ್ಟುಕೊಂಡೇ ಮಾತನಾಡಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಮತ್ತು ಬಿ ಎಸ್ ಯಡಿಯೂರಪ್ಪ ಆಪ್ತ ಎಂ ಪಿ ರೇಣುಕಾಚಾರ್ಯ, ಹಿರಿಯ ಸಚಿವರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂದಿದ್ದಾರೆ. ಹೊಸಬರಿಗೆ ಮತ್ತು ಅವಕಾಶವಂಚಿತರಿಗೆ ಅವಕಾಶ ಮಾಡಿಕೊಡುವ ಮತ್ತು ಪಕ್ಷದ ಸಂಘಟನೆಗೆ ಕೆಲಸ ಮಾಡುವ ನಿಟ್ಟಿನಲ್ಲಿ ಈಗಾಗಲೇ ಹಲವು ಬಾರಿ ಸಚಿವರಾಗಿ ಅಧಿಕಾರ ಅನುಭವಿಸಿರುವ ಹಿರಿಯರು ಸ್ಥಾನ ತ್ಯಾಗ ಮಾಡಬೇಕು ಎಂದು ಅವರು ಹೇಳಿದ್ದಾರೆ.

ರೇಣುಕಾಚಾರ್ಯ ಅವರ ಮಾತು, ಮೇಲ್ನೋಟಕ್ಕೆ ಸಹಜ ಹೇಳಿಕೆ ಎನಿಸಿದರೂ, ಆ ಹೇಳಿಕೆಯ ಬೆನ್ನಲ್ಲೇ ಕುಂಬಳ ಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡರು ಎಂಬಂತೆ ಹಿರಿಯ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿರುವುದು ಹಲವು ಒಳಸುಳಿಗಳ ಸುಳಿವು ನೀಡಿದೆ.

ನಾಯಕತ್ವ ಬದಲಾವಣೆಯ ಕುರಿತು ಹೇಳಿಕೆ ನೀಡಿದ್ದ ಈಶ್ವರಪ್ಪ ಅವರೇ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಪಕ್ಷ ಬಯಸಿದರೆ ಸಚಿವ ಸ್ಥಾನ ತ್ಯಜಿಸಲು ಮತ್ತು ಪಕ್ಷದ ಸಂಘಟನೆಯ ಕೆಲಸ ಮಾಡಲು ಸಿದ್ಧ ಎಂದು ಹೇಳಿರುವುದು ಕೇವಲ ಕಾಕತಾಳೀಯವಲ್ಲ. ನಾಯಕತ್ವ ಬದಲಾವಣೆ ಕುರಿತ ಈಶ್ವರಪ್ಪ ಹೇಳಿಕೆ, ಆ ಬಳಿಕದ ಬೆಳವಣಿಗೆಗಳು, ಇದೀಗ ಕೋರ್ ಕಮಿಟಿ ಸಭೆಯ ಹೊತ್ತಲ್ಲೇ ರೇಣುಕಾಚಾರ್ಯ ಹೇಳಿಕೆ ಮತ್ತು ಅದಕ್ಕೆ ಹಲವು ಹಿರಿಯ ಸಚಿವರಿದ್ದರೂ ಕೇವಲ ಈಶ್ವರಪ್ಪ ಮಾತ್ರ ಪ್ರತಿಕ್ರಿಯಿಸಿರುವುದು,.. ಈ ಎಲ್ಲ ಬಿಡಿಬಿಡಿ ಬಿಂದುಗಳನ್ನೋ ಜೋಡಿಸಿದರೆ ಒಂದು ಸ್ಪಷ್ಟ ಚಿತ್ರಣ ಸಿಗದೆ ಇರದು!

ಆ ಚಿತ್ರ ಯಾವುದು ಎಂಬುದು ಬಹುಶಃ ಸಂಕ್ರಾಂತಿಯ ಬಳಿಕ ಗೊತ್ತಾಗಲಿದೆ ಎನ್ನುತ್ತವೆ ಬಿಜೆಪಿಯ ಆಂತರಿಕ ಮೂಲಗಳು. ಸಂಕ್ರಾಂತಿಯ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಆ ವೇಳೆ ಮಲೆನಾಡಿನ ಹಿರಿಯ ಸಚಿವರೊಬ್ಬರು ಸೇರಿದಂತೆ ಪಕ್ಷಕ್ಕೆ ಪದೇ ಪದೆ ಮುಜುಗರ ತರುತ್ತಿರುವ ಮೂವರು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಾಗುವುದು. ಜೊತೆಗೆ ಇತ್ತೀಚಿನ ಪರಿಷತ್ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯುಂಟುಮಾಡಿದ ರಮೇಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಶಿಸ್ತು ಉಲ್ಲಂಘಿಸುತ್ತಿರುವವರ ವಿರುದ್ಧವೂ ದಿಟ್ಟ ಕ್ರಮ ಜರುಗಿಸುವ ಸಾಧ್ಯತೆ ಇದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು, ಪಕ್ಷದ ಕಾರ್ಯಕಾರಿಣಿಗೆ ಯಡಿಯೂರಪ್ಪ ಅಥವಾ ರಮೇಶ್ ಜಾರಕಿಹೊಳಿ ಅನಿವಾರ್ಯವಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಆ ಮೂಲಕ ಪಕ್ಷ ಯಾರಿಲ್ಲದೆಯೂ ಮುನ್ನಡೆಯಲಿದೆ. ಪಕ್ಷಕ್ಕೆ ಈಗ ಯಾರೂ ಅನಿವಾರ್ಯವಲ್ಲ ಎಂಬ ಸಂದೇಶವನ್ನು ಅವರು ಪರೋಕ್ಷವಾಗಿ ರವಾನಿಸಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ, ಶಿವಮೊಗ್ಗ ಕೋಟಾದಿಂದ ಈಶ್ವರಪ್ಪ ಅವರನ್ನು ಕೈಬಿಟ್ಟು, ಪಕ್ಷದ ಸಂಘಟನೆಯ ಹೊಣೆ ವಹಿಸಿ, ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದು ಯಡಿಯೂರಪ್ಪ ಬಣದ ವಾದ. ಆ ನಿಟ್ಟಿನಲ್ಲಿ ವರಿಷ್ಠರ ಮೇಲೆ ಒತ್ತಡ ಹಾಕುವ ಯತ್ನವಾಗಿಯೇ ರೇಣುಕಾಚಾರ್ಯ ಕಾರ್ಯಕಾರಿಣಿಯ ನಡುವೇ ಹಿರಿಯ ಸಚಿವರ ತಲೆದಂಡದ ಹೇಳಿಕೆ ನೀಡಿದ್ದಾರೆ. ಆ ಮೂಲಕ ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಸಂಪುಟ ಸೇರ್ಪಡೆಗೆ ದಾರಿ ಸುಗಮ ಮಾಡುವ ತಂತ್ರಗಾರಿಕೆಯೂ ಇದೆ. ಆ ತಂತ್ರಗಾರಿಕೆಯ ಸುಳಿವರಿತೇ ಈಶ್ವರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ ಎಂಬ ಮಾತೂ ಇದೆ.

ಒಟ್ಟಾರೆ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಪ್ರಮುಖರು, ಸಬ್ ಚೆಂಗಾಸಿ ಚಿತ್ರಣವನ್ನು ಮೂಡಿಸುವ ಏನೇ ಪ್ರಯತ್ನಗಳನ್ನು ಮಾಡಿದರೂ, ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಮತ್ತು ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಎಂಬುದನ್ನು ಕಾರ್ಯಕಾರಿಣಿಯ ಅಂಗಳದ ವಿದ್ಯಮಾನಗಳೇ ಸಾರಿ ಹೇಳಿವೆ. ಸಂಕ್ರಾಂತಿಯ ಬಳಿಕದ ಕ್ರಾಂತಿಯ ಸೂಚನೆಗಳನ್ನು ನೀಡಿವೆ!

Tags: ಅರುಣ್ ಸಿಂಗ್ಎಂ ಪಿ ರೇಣುಕಾಚಾರ್ಯಕೆ ಎಸ್ ಈಶ್ವರಪ್ಪಪ್ರಹ್ಲಾದ್ ಜೋಷಿಬಸವರಾಜ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿ ವೈ ವಿಜಯೇಂದ್ರಬಿಜೆಪಿಹುಬ್ಬಳ್ಳಿ ಕಾರ್ಯಕಾರಿಣಿ
Previous Post

ಕೋವಿಡ್ ಮಾನದಂಡಗಳನ್ನು ಗಾಳಿಗೆ ತೂರಿದ ರಾಜಕೀಯ ಪಕ್ಷಗಳಿಂದ ಮೂರನೇ ಅಲೆಗೆ ಮುನ್ನುಡಿ?

Next Post

ಕೋಮು ದಂಗೆಗಳು ಮತ್ತು ಪರಿಹಾರ ಮಾರ್ಗಗಳು : ಭಗತ್ ಸಿಂಗ್ – ಭಾಗ – ೧

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವರ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
ಕೋಮು ದಂಗೆಗಳು ಮತ್ತು ಪರಿಹಾರ ಮಾರ್ಗಗಳು : ಭಗತ್ ಸಿಂಗ್ – ಭಾಗ – ೧

ಕೋಮು ದಂಗೆಗಳು ಮತ್ತು ಪರಿಹಾರ ಮಾರ್ಗಗಳು : ಭಗತ್ ಸಿಂಗ್ - ಭಾಗ - ೧

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada