• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಜನೋತ್ಸವ ಸಮಾವೇಶದಲ್ಲಿ ಉತ್ತರ: ಸಚಿವ ಡಾ.ಕೆ.ಸುಧಾಕರ್‌

ಪ್ರತಿಧ್ವನಿ by ಪ್ರತಿಧ್ವನಿ
July 26, 2022
in ಕರ್ನಾಟಕ
0
ಸಿಬ್ಬಂದಿಗಳನ್ನು ನಿರ್ಲಕ್ಷಿಸಿಲ್ಲ, ಆಯನೂರು ಆರೋಪ ನಿರಾಧಾರ : ಸಚಿವ ಸುಧಾಕರ್‌
Share on WhatsAppShare on FacebookShare on Telegram

ADVERTISEMENT

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬಿಜೆಪಿ ಜನರಿಂದ ಮೇಲೆ ಬಂದಿರುವ ಪಕ್ಷ. ಜನರಿಗೋಸ್ಕರ ಕೆಲಸ ಮಾಡುತ್ತಿದೆ. ಆಡಳಿತಕ್ಕೆ ಬಂದು 3 ವರ್ಷವಾಗಿದೆ. ಕೋವಿಡ್‌ ಕಾರಣದಿಂದ ಕಳೆದ 2 ವರ್ಷಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಸಾಧ್ಯವಾಗಿಲ್ಲ. ಈಗ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ನೆರವು ಪಡೆದ ಲಕ್ಷಾಂತರ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಲಕ್ಷಾಂತರ ಕಾರ್ಯಕರ್ತರು ಪಕ್ಷ ಹಾಗೂ ಸರ್ಕಾರದ ಕಾರ್ಯ ವೈಖರಿಯನ್ನು ಮೆಚ್ಚಿ ಸಂದೇಶ ಕಳುಹಿಸಲಿದ್ದಾರೆ ಎಂದು ತಿಳಿಸಿದರು.

ಯಾವುದೇ ಒಂದು ಸಮುದಾಯದಿಂದ ಒಬ್ಬರು ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಸಮುದಾಯದ ಒಟ್ಟಾರೆ ಅಭಿಪ್ರಾಯ ಇರಬೇಕು. ಉಳಿದ ಸಮುದಾಯಗಳ ವಿಶ್ವಾಸ ಗಳಿಸಬೇಕು. ಜನರ ನಾಯಕತ್ವದ ಮೇಲೆ ನಂಬಿಕೆ ಇಟ್ಟವರು ಮಾತ್ರ ಮುಖ್ಯಮಂತ್ರಿಯಾಗಬಹುದು. ಯಾವುದೇ ಸಮುದಾಯಕ್ಕೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಲ್ಲ. ಸಚಿವರಾಗಿ ಅನುಭವವಿದ್ದಂತಹ ಜಮೀರ್‌ ಅಹ್ಮದ್‌ರಿಂದ ಒಕ್ಕಲಿಗರಿಗೆ ನೋವಾಗುವಂತಹ ಮಾತನ್ನು ನಿರೀಕ್ಷೆ ಮಾಡಿರಲಿಲ್ಲ. ರಾಜಕಾರಣಿಗಳು ಮಾತನಾಡುವ ಮುನ್ನ ಯೋಚನೆ ಮಾಡಿ ಮಾತನಾಡಬೇಕು ಎಂದು ಹೇಳಿದರು.

ಒಕ್ಕಲಿಗ ಸಮುದಾಯ ಕೃಷಿಕರ ಸಮುದಾಯ. ಕೃಷಿಕರು ದೇಶದ ಬೆನ್ನೆಲುಬು. ಈ ಸಮುದಾಯ ಎಲ್ಲಾ ಸಮುದಾಯಗಳ ಜೊತೆ ಒಳ್ಳೆಯ ವಿಶ್ವಾಸ ಇಟ್ಟುಕೊಂಡು, ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ. ಕಾಯಕವನ್ನೇ ನಂಬಿರುವ ಸಮುದಾಯವಿದು. ಜಮೀರ್‌ ಹೇಳಿಕೆಯಿಂದ ಅವರಿಗೆ ಹಾಗೂ ಅವರ ಪಕ್ಷಕ್ಕೆ ಹೆಚ್ಚು ನಷ್ಟವಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಿಚಾರಣೆ ವೇಳೆ ಬಾಯಿ ಬಡಿದುಕೊಂಡರೂ ಪ್ರಯೋಜನ ಆಗಲಿಲ್ಲ. ಈಗ ಮೌನಕ್ಕೆ ಶರಣಾಗಿದ್ದಾರೆ. 54 ವರ್ಷ ಆಡಳಿತ ಮಾಡಿದ್ದ ಕಾಂಗ್ರೆಸ್‌ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿಲ್ವಾ? ಆಗ ಎಲ್ಲವೂ ಸರಿ ಇತ್ತು ಅನ್ನುವವರು ಈಗೇಕೆ ಸಂದೇಹ ಪಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ ಮುಖ್ಯಮಂತ್ರಿಗಳಾಗಿದ್ದಾಗಲೇ 8-10 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ಅಮಿತ್‌ ಶಾ ಅವರನ್ನು ಗಡಿಪಾರು ಮಾಡಲಾಗಿತ್ತು. ಕಾಂಗ್ರೆಸ್‌ನ ದ್ವಿಮುಖ ನೀತಿಯನ್ನು ಜನರು ಒಪ್ಪಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದವರು ಮಾತ್ರ ತನಿಖೆ, ವಿಚಾರಣೆಗೆ ಸಹಕರಿಸುತ್ತಾರೆ. ಒಂದು ವೇಳೆ ನ್ಯಾಯ ಸಿಕ್ಕಿಲ್ಲ ಎಂದರೆ ಕೋರ್ಟ್‌ ವ್ಯವಸ್ಥೆ ನಮ್ಮ ದೇಶದಲ್ಲಿದೆ ಎಂದು ಕಾಂಗ್ರೆಸ್‌ ಪ್ರತಿಭಟನೆಯ ಬಗ್ಗೆ ಕಿಡಿಕಾರಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಚಾಮುಂಡೇಶ್ವರಿ ದೇವಸ್ಥಾನದ ಹುಂಡಿ ಎಣಿಕೆ : ಒಂದೇ ತಿಂಗಳಲ್ಲಿ ಮೂರುವರೆ ಕೋಟಿ ಸಂಗ್ರಹ

Next Post

ರಾಹುಲ್, ಪ್ರಿಯಾಂಕ ಜೊತೆ ಇಡಿ ಕಚೇರಿಗೆ ಬಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ರಾಹುಲ್, ಪ್ರಿಯಾಂಕ ಜೊತೆ ಇಡಿ ಕಚೇರಿಗೆ ಬಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ!

ರಾಹುಲ್, ಪ್ರಿಯಾಂಕ ಜೊತೆ ಇಡಿ ಕಚೇರಿಗೆ ಬಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada