ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಹೈಕೋರ್ಟ್ ಅಸ್ತು ಹಿನ್ನೆಲೆ. ಸಿಎಂ ರಾಜಿನಾಮೆಗೆ ಒತ್ತಾಯಿಸಿ ರಸ್ತೆಗಿಳಿದ ಬಿಜೆಪಿ ನಾಯಕರು. ಸಿಎಂ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರೋಟೆಸ್ಟ್, ಮಂಡ್ಯ ಜಿಲ್ಲಾ ಬಿಜೆಪಿ ವತಿಯಿಂದ ಸಂಜಯ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..

ಮಂಡ್ಯದ ರಾಜ್ಯಪಾಲರ ಪ್ರಾಸಿಕ್ಯೂಷನ್ ತನಿಖೆಗೆ ಹೈಕೋರ್ಟ್ ತೀರ್ಪು ಹಿನ್ನೆಲೆ. ಬಿಜೆಪಿ ಕಾರ್ಯಕರ್ತರಿಂದ ಸಿಎಂ ರಾಜಿನಾಮೆಗೆ ಆಗ್ರಹ. ಸಿಎಂ ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿ ಆಕ್ರೋಶ. ಸಿದ್ದರಾಮಯ್ಯಗೆ ಕೆರಗೋಡು ಹನುಮನ ಶಾಪ, ನಾಗಮಂಗಲದ ಗಣೇಶನ ಶಾಪ, ಚಾಮುಂಡೇಶ್ವರಿ ಶಾಪ ತಟ್ಟಿದೆ ಎಂದು ಘೋಷಣೆ. ತಕ್ಷಣವೇ ರಾಜೀನಾಮೆ ಕೊಟ್ಟು ನೈತಿಕ ಹೊಣೆ ಹೊರಲು ಆಗ್ರಹ. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ. ನಮ್ಮ ಪಾದಯಾತ್ರೆ ಹೋರಾಟಕ್ಕೆ ಸಿಕ್ಕ ಜಯ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ ಎಂದು ಆಗ್ರಹ. ಸ್ಥಳದಲ್ಲಿ ಪೊಲೀಸ್ ಬಂದ್ ಬಸ್ತ್. ಪ್ರತಿಭಟನಾ ಸ್ಥಳದಲ್ಲೆ ಇರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ.




