• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಂಚರಾಜ್ಯ ಚುನಾವಣೆ : ದಲಿತ ಮತಗಳ ಮೇಲೆ ಕಣ್ಣು, ಸಂತ ರವಿದಾಸ ಜಯಂತಿ ಆಚರಿಸಲು ಮುಂದಾದ ಬಿಜೆಪಿ SC ಮೋರ್ಚಾ

ಫಾತಿಮಾ by ಫಾತಿಮಾ
January 29, 2022
in ದೇಶ
0
ಪಂಚರಾಜ್ಯ ಚುನಾವಣೆ : ದಲಿತ ಮತಗಳ ಮೇಲೆ ಕಣ್ಣು, ಸಂತ ರವಿದಾಸ ಜಯಂತಿ ಆಚರಿಸಲು ಮುಂದಾದ ಬಿಜೆಪಿ SC ಮೋರ್ಚಾ
Share on WhatsAppShare on FacebookShare on Telegram

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿನ ದಲಿತ ಮತಗಳನ್ನು ಗಮನದಲ್ಲಿಟ್ಟುಕೊಂಡು ಫೆಬ್ರವರಿ 16 ರಂದು ಗುರು ರವಿದಾಸ್ ಜಯಂತಿಯನ್ನು ಒಂದು ವಾರದ ಆಚರಣೆಯನ್ನಾಗಿ ಆಯೋಜಿಸಲು ಭಾರತೀಯ ಜನತಾ ಪಕ್ಷದ ಪರಿಶಿಷ್ಟ ಜಾತಿ (ಎಸ್ಸಿ) ಮೋರ್ಚಾ ನಿರ್ಧರಿಸಿದೆ.

ADVERTISEMENT

ಬಿಜೆಪಿಯ ಹಿರಿಯ ನಾಯಕರೊಬ್ಬರ ಪ್ರಕಾರ, ಪಕ್ಷದ ಎಸ್ಸಿ ಘಟಕವು ಫೆಬ್ರವರಿ 13 ರಿಂದ 20 ರವರೆಗೆ ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಿದೆ. ಇದಲ್ಲದೆ, ಜಯಂತಿಯ ಮುನ್ನ ವಾರಣಾಸಿಯ ಸಂತ ರವಿದಾಸ್ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದು ಶ್ರದ್ಧಾಂಜಲಿ ಸಲ್ಲಿಸಲು ಬಿಜೆಪಿಯು ಸಹಾಯ ಮಾಡಲು ಯೋಜಿಸುತ್ತಿದೆ ಎನ್ನಲಾಗಿದೆ. ಆಧ್ಯಾತ್ಮಿಕ ನಾಯಕ ಮತ್ತು ಭಕ್ತಿ ಸಂತ ಗುರು ರವಿದಾಸ್ ವಾರಣಾಸಿ ಬಳಿ ಜನಿಸಿದ 15 ನೇ ಶತಮಾನದ ಕವಿ. ಅವರನ್ನು ದಲಿತರ ಒಂದು ದೊಡ್ಡ ವಿಭಾಗ ಗುರು ಎಂದು ಪರಿಗಣಿಸುತ್ತದೆ, ಅವರನ್ನು ಅನುಸರಿಸುವವರನ್ನು ‘ರವಿದಾಸಿಯಾಸ್’ ಎಂದೂ ಕರೆಯಲಾಗುತ್ತದೆ.

ಪಂಜಾಬ್ನ ಜನಸಂಖ್ಯೆಯಲ್ಲಿ ದಲಿತರು ಶೇಕಡಾ 32ರಷ್ಟಿದ್ದು ಇದು ಯಾವುದೇ ರಾಜ್ಯದಲ್ಲಿ ಅತ್ಯಧಿಕ ಪ್ರಮಾಣವಾಗಿದೆ. ಯುಪಿಯಲ್ಲಿ, ಜನಸಂಖ್ಯೆಯ ಸರಿಸುಮಾರು 20 ಪ್ರತಿಶತವನ್ನು ದಲಿತ ಸಮುದಾಯ ಒಳಗೊಂಡಿದೆ ಮತ್ತು ಚುನಾವಣೆಯ ಫಲಿತಾಂಶದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಗುರು ರವಿದಾಸ್ ಅವರ ಭಕ್ತರು ಪಂಜಾಬ್ನಿಂದ ವಾರಣಾಸಿಗೆ ದೊಡ್ಡ ಪ್ರಮಾಣದಲ್ಲಿ ಪ್ರಯಾಣ ಹೊರಡುವ ಕಾರಣ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದನ್ನು ತಪ್ಪಿಸಬಾರದು ಎಂಬ ಉದ್ದೇಶದಿಂದ ಭಾರತದ ಚುನಾವಣಾ ಆಯೋಗವು ಪಂಜಾಬ್ನಲ್ಲಿ ಮತದಾನದ ದಿನವನ್ನು ಫೆಬ್ರವರಿ 14 ರಿಂದ 20 ಕ್ಕೆ ಮುಂದೂಡಿತ್ತು.

ಬಿಜೆಪಿಯು ದೇಶಾದ್ಯಂತ ರವಿದಾಸ್ ದೇವಾಲಯಗಳ ‘ಸಂತರನ್ನು’ ಸನ್ಮಾನಿಸಲೂ ಯೋಜಿಸಿದೆ. “ನಾವು ರವಿದಾಸ್ ಜಯಂತಿಯಂದು ದೇಶಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸುತ್ತೇವೆ. ರಾಜ್ಯ ಘಟಕದ ಮಟ್ಟದಲ್ಲಿ ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು” ಎಂದು ಬಿಜೆಪಿಯ ಎಸ್ಸಿ ಮೋರ್ಚಾ ಅಧ್ಯಕ್ಷ ಲಾಲ್ಸಿಂಗ್ ಆರ್ಯ ಹೇಳಿದ್ದಾರೆ.

“ಚುನಾವಣೆಗಳಿರುವ ರಾಜ್ಯಗಳಲ್ಲಿ, ಅಭ್ಯರ್ಥಿಗಳು, ಶಾಸಕರು ಮತ್ತು ಇತರ ಪಕ್ಷದ ಪದಾಧಿಕಾರಿಗಳು ಭಾಗವಹಿಸಲು ಕೇಳಿಕೊಳ್ಳಲಾಗಿದೆ” ಎಂದೂ ಅವರು ಹೇಳಿದ್ದಾರೆ.

“ವಾರಣಾಸಿಯ ಸಂತ ರವಿದಾಸ ದೇವಾಲಯಕ್ಕೆ ವಿಸ್ತಾರವಾದ ಯೋಜನೆಗಳನ್ನು ಮಾಡಲು ಮತ್ತು ಗೌರವ ಸಲ್ಲಿಸುವಾಗ ಯಾರಿಗೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಕೇಳಲಾಗಿದೆ” ಎಂದೂ ವರದಿಗಳಿವೆ.

ಉತ್ತರ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ಸಾಕಷ್ಟು ದಲಿತ ಜನಸಂಖ್ಯೆಯನ್ನು ಹೊಂದಿರುವ ಕ್ಷೇತ್ರಗಳಲ್ಲಿ ಎಸ್ಸಿ ಮೋರ್ಚಾ ಇತರ ಸಮಾವೇಶಗಳು ಮತ್ತು ಕಾರ್ಯಕ್ರಮಗಳನ್ನು ಸಹ ನಡೆಸಲಿವೆ ಎಂದು ಆರ್ಯ ಪತ್ರಕರ್ತರನ್ನುದ್ದೇಶಿಸಿ ಹೇಳಿದ್ದಾರೆ. “ಉತ್ತರ ಪ್ರದೇಶದ ಎಸ್ಪಿ, ಬಿಎಸ್ಪಿ ಮತ್ತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಮೀಸಲಾತಿ ಪ್ರಯೋಜನಗಳನ್ನು ನಿಲ್ಲಿಸುವುದಾಗಿ ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ. ಕಳೆದ ಹಲವು ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಮೋದಿ ಮತ್ತು ಯೋಗಿ ಸರಕಾರಗಳು ಮಾತ್ರ ದಲಿತರ ಕಲ್ಯಾಣಕ್ಕಾಗಿ ಕ್ರಮಗಳನ್ನು ಕೈಗೊಂಡಿದ್ದು ಇದು ಮೀಸಲಾತಿ ನಿಲ್ಲಿಸಲಾಗುವುದು ಎಂಬುವುದು ಸಂಪೂರ್ಣ ಸುಳ್ಳು ಮತ್ತು ದಲಿತ ಸಮುದಾಯವು ಬಿಜೆಪಿಯೊಂದಿಗೆ ಇದೆ” ಎಂದು ಆರ್ಯ ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ಕರ್ನಾಟಕದ ಎಸ್ಸಿ ಮೋರ್ಚಾವೂ ರಾಜ್ಯದಲ್ಲಿ ರವಿದಾಸ ಜಯಂತಿಯಂದು ಕಾರ್ಯಕ್ರಮ ಆಯೋಜಿಸಿ ರಾಜ್ಯದ ದಲಿತ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಯೋಜಿಸಿದೆ ಎನ್ನಲಾಗಿದೆ.

Tags: BJPದಲಿತ ಮತನರೇಂದ್ರ ಮೋದಿಪಂಚರಾಜ್ಯ ಚುನಾವಣೆಬಿಜೆಪಿಬಿಜೆಪಿ SC ಮೋರ್ಚಾಸಂತ ರವಿದಾಸ ಜಯಂತಿ
Previous Post

2017ರ ಭಾರತ-ಇಸ್ರೇಲ್ ಒಪ್ಪಂದದ ಭಾಗವಾಗಿ ಪೆಗಾಸಸ್ ಖರೀದಿ : ನ್ಯೂಯಾರ್ಕ್ ಟೈಮ್ಸ್ ವರದಿ ಉಲ್ಲೇಖಿಸಿ ಹಲವು ನಾಯಕರು ಕಿಡಿ

Next Post

ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ವರ್ಗಾವಣೆ ತಡೆಹಿಡಿದ ರಾಜ್ಯ ಸರ್ಕಾರ

Related Posts

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್
Top Story

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
October 26, 2025
0

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ...

Read moreDetails
ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

October 26, 2025
ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

October 25, 2025
ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

October 23, 2025
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025
Next Post
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ!

ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ವರ್ಗಾವಣೆ ತಡೆಹಿಡಿದ ರಾಜ್ಯ ಸರ್ಕಾರ

Please login to join discussion

Recent News

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ
Top Story

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

by ಪ್ರತಿಧ್ವನಿ
October 28, 2025
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ
Top Story

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

by ಪ್ರತಿಧ್ವನಿ
October 28, 2025
ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ
Top Story

ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

by ಪ್ರತಿಧ್ವನಿ
October 28, 2025
ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್
Top Story

ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

by ಪ್ರತಿಧ್ವನಿ
October 28, 2025
ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ
Top Story

ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ

by ಪ್ರತಿಧ್ವನಿ
October 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ

ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ

October 28, 2025
ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada