• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಬೇಕು’ : ಮುಸ್ಲಿಂ ವ್ಯಕ್ತಿಯ ವಿಡಿಯೋ ವೈರಲ್​

ಪ್ರತಿಧ್ವನಿ by ಪ್ರತಿಧ್ವನಿ
March 24, 2023
in ಕರ್ನಾಟಕ, ರಾಜಕೀಯ
0
‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಬೇಕು’ : ಮುಸ್ಲಿಂ ವ್ಯಕ್ತಿಯ ವಿಡಿಯೋ ವೈರಲ್​
Share on WhatsAppShare on FacebookShare on Telegram

ಯಾದಗಿರಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಹೀಗಿರುವಾಗ ಯಾವ ಅಭ್ಯರ್ಥಿಗಳು ಯಾವ್ಯಾವ ಕ್ಷೇತ್ರದಲ್ಲಿ ನಿಲ್ತಾರೆ ಎಂಬ ಕುತೂಹಲ ಜೋರಾಗಿದೆ. ಕಾಂಗ್ರೆಸ್​ ನಾಯಕರು ಅಲ್ಪಸಂಖ್ಯಾತರ ಮತ ಎಲ್ಲಿ ಜಾಸ್ತಿ ಇದೆಯೋ ಅಂತಹ ಕ್ಷೇತ್ರಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಮುಸ್ಲಿಮರನ್ನು ಕಾಂಗ್ರೆಸ್​ ತಮ್ಮ ವೋಟ್​ ಬ್ಯಾಂಕ್​ ಎಂದು ಭಾವಿಸುತ್ತಿದ್ದರೆ ಇಲ್ಲೊಬ್ಬ ಮುಸ್ಲಿಂ ಸಮುದಾಯದ ವ್ಯಕ್ತಿ ಬಿಜೆಪಿಗೆ ನನ್ನ ಬೆಂಬಲ ಎಂದಿದ್ದು ಸೋಶಿಯಲ್​ ಮೀಡಿಯಾಗಳಲ್ಲಿ ವಿಡಿಯೋ ವೈರಲ್​ ಆಗಿದೆ.

ADVERTISEMENT


ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಬೇಕು. ಸುರಪುರದಲ್ಲಿ ರಾಜುಗೌಡ ಗೆಲ್ಲಬೇಕು ಎಂದು ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬ ಕೇಸರಿ ಶಾಲು ಮತ್ತು ಟೋಪಿಯನ್ನು ಧರಿಸಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೇಕಲ್​ ಗ್ರಾಮದ ಮಹಮದ್​ ಖಾಜಿ ಎಂಬವರು ಈ ಮಾತನ್ನು ಹೇಳಿದ್ದಾರೆ.


ದೇಶದ ಸಲುವಾಗಿ ಕೇಸರಿ ಹಾಕಿದ್ದೇನೆ, ಧರ್ಮಕ್ಕೆ ಬೆಂಬಲ ನೀಡಲು ತಲೆಗೆ ಟೋಪಿ ಹಾಕಿದ್ದೇನೆ. ನಾನು ಬಿಜೆಪಿಗೆ ಮತ ಹಾಕುತ್ತೇನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಬೇಕು. ರಾಜುಗೌಡ ಬಂದಮೇಲೆ ಸುರಪುರ ಕ್ಷೇತ್ರ ಅಭಿವೃದ್ಧಿಯಾಗಿದೆ. ಮೊದಲು ಇಲ್ಲಿ ಕುಡಿಯಲು ನೀರು ಇರಲಿಲ್ಲ. ಆದರೆ ಈಗ ನಮಗೆ ನೀರಿನ ಸಮಸ್ಯೆಯಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೈತರಿಗೆ ಹಣ ಕೂಡ ಸಿಗ್ತಿದೆ ಅಂತಾ ಖಾಜಿ ಹೇಳಿದ್ದಾನೆ.


ಎರಡು ದಿನಗಳ ಹಿಂದೆಯಷ್ಟೇ ಮುಸ್ಲಿಂ ಟೋಪಿ ಧರಿಸಿದ್ದ ಖಾಜಿ ಬಿಲಾಲ್​ ಮಸೀದಿ ಭೂಮಿ ಪೂಜೆ ಮಾಡಿದ್ದರು. ಈ ವೇಳೆ ಮುಸ್ಲಿಮರ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿ ಪೂಜೆ ಸಲ್ಲಿಸುವ ಮೂಲಕ ನಾವೆಲ್ಲರೂ ಒಂದೇ ಎನ್ನುವ ಸಂದೇಶವನ್ನು ಬಿಜೆಪಿ ಶಾಸಕ ರಾಜುಗೌಡ ಸಾರಿದ್ದರು. ಇದಾದ ಬಳಿಕ ಟೋಪಿ ಜೊತೆಗೆ ಕೇಸರಿ ಶಾಲು ಹಾಕಿ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಅಂತಾ ಖಾಜಿ ಹೇಳಲು ಆರಂಭಿಸಿದ್ದಾನೆ ಎನ್ನಲಾಗಿದೆ.

Tags: BJPBJP MLA Raju GowdaCentral GovernmentState GovernmentYadagiri
Previous Post

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

Next Post

ಕಾಫಿನಾಡಿನಲ್ಲಿ ಕಾಂಗ್ರೆಸ್​ಗೆ ವಲಸಿಗರಿಂದ ಹೆಚ್ಚಿದ ಸಂಕಷ್ಟ : ಮಿತಿಮೀರಿದ ಬಂಡಾಯದ ಕೂಗು

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಕಾಫಿನಾಡಿನಲ್ಲಿ ಕಾಂಗ್ರೆಸ್​ಗೆ ವಲಸಿಗರಿಂದ ಹೆಚ್ಚಿದ ಸಂಕಷ್ಟ : ಮಿತಿಮೀರಿದ ಬಂಡಾಯದ ಕೂಗು

ಕಾಫಿನಾಡಿನಲ್ಲಿ ಕಾಂಗ್ರೆಸ್​ಗೆ ವಲಸಿಗರಿಂದ ಹೆಚ್ಚಿದ ಸಂಕಷ್ಟ : ಮಿತಿಮೀರಿದ ಬಂಡಾಯದ ಕೂಗು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada