ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ತವರು ಕ್ಷೇತ್ರದಲ್ಲಿಯೇ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಸಾಧಿಸಿದ್ದಾರೆ. 556 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯನ್ನು ಹಿಂದಿಕ್ಕಿದ್ದಾರೆ.
ಪುತ್ತೂರಿನಲ್ಲಿ ಜಾತಿ ಲೆಕ್ಕಾಚಾರ ಮಾಡಿದ್ದ ಬಿಜೆಪಿ ಒಕ್ಕಲಿಗ ಸಮುದಾಯದ ಆಶಾ ತಿಮ್ಮಪ್ಪ ಗೌಡರಿಗೆ ಟಿಕೆಟ್ ನೀಡಿತ್ತು. ಆದರೆ ಬಿಜೆಪಿಯ ಈ ಲೆಕ್ಕಾಚಾರ ಉಲ್ಟಾ ಆಗಿದ್ದು ಆಶಾ ತಿಮ್ಮಪ್ಪ ಗೌಡ ಮೂರನೇ ಸ್ಥಾನದಲ್ಲಿದ್ದಾರೆ .