• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆ ಸಮೀಪಿಸುತ್ತಿದ್ದಂತೆ ಡಬಲ್‌ ಎಂಜಿನ್‌ ಸರ್ಕಾರ, ಅಭಿವೃದ್ಧಿ ಮಂತ್ರ ಬಿಟ್ಟು ಹಿಂದುತ್ವವನ್ನು ಹಿಡಿದ ಬಿಜೆಪಿ

Any Mind by Any Mind
November 25, 2022
in ಕರ್ನಾಟಕ, ದೇಶ, ರಾಜಕೀಯ
0
ತಮಿಳುನಾಡಿನಲ್ಲಿ ಬೇರೂರಲು ಸಾಂಸ್ಕೃತಿಕ ರಾಜಕಾರಣದ ಮೊರೆ ಹೋದ ಬಿಜೆಪಿ !
Share on WhatsAppShare on FacebookShare on Telegram

ಗುಜರಾತ್‌ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿರುವಂತೆಯೇ ಬಿಜೆಪಿ ತನ್ನ ʼಅಭಿವೃದ್ಧಿ ಮಂತ್ರ, ಡಬಲ್‌ ಎಂಜಿನ್‌ ಸರ್ಕಾರʼ ಮೊದಲಾದ ಟಾಪಿಕ್‌ ನಿಂದ ಹಿಂದೆ ಸರಿದು ಮತ್ತೆ ತನ್ನ ಹಿಂದುತ್ವದ ದಾಳ ಹೂಡಲು ಶುರು ಮಾಡಿದೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಮಂತ್ರದ ಜಪ ಮತದಾರರಿಂದ ಮತಾನುಗ್ರಹ ಪಡೆಯದಷ್ಟು ದುರ್ಬಲವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

ADVERTISEMENT

ಗುಜರಾತ್‌ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಗುಜರಾತ್‌ನ ಖಂಭಾತ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ ಕಾಂಗ್ರೆಸ್ ಹಿಂದೆಂದೂ ನಿರ್ದಿಷ್ಟ ಸಮುದಾಯದ ಅತಿಕ್ರಮಣ ನಿರ್ಮಾಣಗಳನ್ನು ತೆಗೆದುಹಾಕಲು ಹಿಂದೆ ಜಾರಿತ್ತು, ಆ ಕೆಲಸವನ್ನು ಈಗ ಬಿಜೆಪಿ ಮಾಡುತ್ತಿದೆ ಎಂದು ಹೇಳಿದ್ದಾರೆ.

ಗುಜರಾತಿನ ಓಖಾ ಪಟ್ಟಣದ ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿರುವ ಮಝಾರಗಳನ್ನು ತೆಗೆದು ಹಾಕಿರುವ ಕುರಿತು ಉಲ್ಲೇಖಿಸಿದ ಕೇಂದ್ರ ಗೃಹ ಸಚಿವ, ಇನ್ನೂ ಇಂತಹ ಹಲವು ಅತಿಕ್ರಮಣ ತೆರವಿಕೆ ಮಾಡುವುದಾಗಿ ಘೋಷಿಸಿಕೊಂಡಿದ್ದಾರೆ. “ನಕಲಿ ಮಝಾರಗಳನ್ನು” (ದರ್ಗಾ) ತೆರವುಗೊಳಿಸುವುದಾಗಿ ಹೇಳಿದ ಅಮಿತ್‌ ಶಾ ಯಾವುದಕ್ಕೂ ಭಯಪಡಬೇಕಾದ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

“ಮಝಾರಗಳಾಗಿರಲಿ ಅಥವಾ ಸಮಾಧಿಯಾಗಿರಲಿ, ಅತಿಕ್ರಮಣಗಳನ್ನು ತೆಗೆದುಹಾಕಬೇಕಲ್ಲವೇ? ಇದು ಕಾಂಗ್ರೆಸ್‌ಗೆ ಇಷ್ಟವಾಗದಿರಬಹುದು. ಆದರೆ ಅವರಿಗೆ ಇಷ್ಟವಿಲ್ಲದಿದ್ದರೂ ಬಿಜೆಪಿ ಸ್ವಚ್ಛತೆಯನ್ನು ಮುಂದುವರಿಸಲಿದೆ. ಭಯಪಡುವ ಅಗತ್ಯವಿಲ್ಲ. ” ಎಂದು ಶಾ ಹೇಳಿದ್ದಾರೆ.

“ನಮ್ಮ ಸಿಎಂ ಭೂಪೇಂದ್ರ ಪಟೇಲ್ ಮತ್ತು ಗೃಹ ಸಚಿವ ಹರ್ಷ ಸಾಂಘ್ವಿ ಬೇಟ್ ದ್ವಾರಕಾದಲ್ಲಿ ‘ನಕಲಿ ಮಝಾರ್’ಗಳನ್ನು ಕೆಡವಿದ್ದಾರೆ. ಅವೆಲ್ಲವೂ ಮಝಾರ್‌ಗಳ ಹೆಸರಿನಲ್ಲಿ ನಡೆದ ಅತಿಕ್ರಮಣಗಳಾಗಿವೆ ಹಾಗೂ ಅವುಗಳನ್ನು ತೆರವುಗೊಳಿಸಲಾಗಿದೆ ಆದರೆ ನಾವು ಧ್ರುವೀಕರಣ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ,” ಎಂದು ಅವರು ಹೇಳಿದ್ದಾರೆ.

“ವರ್ಷಗಳಿಂದ ಪಾವಗಡದಲ್ಲಿ ಮಝಾರ್ ಇತ್ತು. ಬೆಟ್ಟದ ಮೇಲೆ ಕಾಳಿ ದೇವಸ್ಥಾನ ಕಟ್ಟಿರುವುದು ಬಿಜೆಪಿ ಸರ್ಕಾರ. ಅಂತಹ ಕೆಲಸವನ್ನು ಕಾಂಗ್ರೆಸ್ ಎಂದಿಗೂ ಮಾಡುವುದಿಲ್ಲ. ಆದರೆ ನಾವು ಯಾವುದೇ ಮತ ಬ್ಯಾಂಕ್‌ಗೆ ಹೆದರುವುದಿಲ್ಲ. ಬಿಜೆಪಿ ಸರ್ಕಾರಕ್ಕೆ ಅಧಿಕಾರದಲ್ಲಿರುವುದಕ್ಕಿಂತ ದೇಶದ ಭದ್ರತೆ ಮುಖ್ಯ.” ಎಂದು ಅಮಿತ್‌ ಶಾ ಬಹುಸಂಖ್ಯಾತ ಓಲೈಕೆ ಮಾಡಿದ್ದಾರೆ.

“ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡಬೇಡಿ, ಇಲ್ಲದಿದ್ದರೆ ರಾಜ್ಯದಲ್ಲಿ ಮತ್ತೆ ಕೋಮುಗಲಭೆಗಳು ಪ್ರಾರಂಭವಾಗುತ್ತವೆ ಮತ್ತು ನೀವು ಮತ್ತೊಮ್ಮೆ ತೊಂದರೆಗಳನ್ನು ಎದುರಿಸಬೇಕಾಗುತ್ತದೆ” ಎಂದು ಶಾ ಎಚ್ಚರಿಸಿದ್ದು, ಹಲವು ವರ್ಷಗಳ ಬಳಿಕ ಮತ್ತೆ ಹಿಂದುತ್ವದ ದಾಳ ಹೂಡಿದ್ದು ಬಿಜೆಪಿ ತನ್ನ ಅಭಿವೃದ್ಧಿ ಮಂತ್ರ ಹಾಗೂ ಡಬಲ್‌ ಇಂಜಿನ್‌ ಸರ್ಕಾರಗಳ ಬಗ್ಗೆ ಸ್ವತಃ ಭರವಸೆ ಕಳೆದುಕೊಂಡಿದೆ ಎಂದು ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮೈಸೂರಿನ ಗುಂಬಜ್​ ಮಾದರಿಯ ಬಸ್​ ನಿಲ್ದಾಣ ಹಿಂದೂಗಳಿಗೆ ಒಪ್ಪಿಗೆ ಆಯ್ತಾ ? 

Next Post

ಗಡಿ ವಿವಾದ; ಕರ್ನಾಟಕದ ಬಸ್ಸುಗಳಿಗೆ ಕಪ್ಪು ಬಣ್ಣ ಬಳಿದ ಕಿಡಿಗೇಡಿಗಳು

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ಗಡಿ ವಿವಾದ; ಕರ್ನಾಟಕದ ಬಸ್ಸುಗಳಿಗೆ ಕಪ್ಪು ಬಣ್ಣ ಬಳಿದ ಕಿಡಿಗೇಡಿಗಳು

ಗಡಿ ವಿವಾದ; ಕರ್ನಾಟಕದ ಬಸ್ಸುಗಳಿಗೆ ಕಪ್ಪು ಬಣ್ಣ ಬಳಿದ ಕಿಡಿಗೇಡಿಗಳು

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada