ಕಳೆದ ತಿಂಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ವರ್ಷಾಚರನೆಯ ಸಂಬಂಧ ನಡೆಸಲು ಉದ್ದೇಶಿಸಿದ ಜನೋತ್ಸವ ಕಾರ್ಯಕ್ರಮವನ್ನ ಯುವ ಓರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಮುಂದೂಡಿ ಆಗಸ್ಟ್ 28ಕ್ಕೆ ನಡೆಸಲು ಉದ್ದೇಶಿಸಲಾಗಿತ್ತು.
ಇದೀಗ ಈ ಕಾರ್ಯಕ್ರಮವನ್ನ ಮತ್ತೊಮ್ಮೆ ಮುಂದೂಡಲಾಗಿದ್ದು ಸೆಪ್ಟೆಂಬರ್ 11ರಂದು ನಡೆಸಲು ಉದ್ದೇಶಿಸಿರುವುದಾಗಿ ತಿಳಿದು ಬಂದಿದೆ. ಆಗಸ್ಟ್ 30-31ರಂದು ಗೌರಿ ಗಣೇಶ ಹಬ್ಬವಿರುವ ಕಾರಣ ಬಿಜೆಪಿಯ ಶಾಸಕರು, ಸಚಿವರು ಹಾಗೂ ಮುಖಂಡರು ಪೂರ್ಣ ಪ್ರಮಾಣದಲ್ಲಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವುದು ಸಾದ್ಯವಾಗದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಗುರುವಾರ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಕರೆದಿದ್ದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆಯಲ್ಲಿಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇದರ ಜೊತೆಗೆ ಮುಂಬರುವ ಬಿಬಿಎಂಪಿ, ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಹಾಗೂ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ಕುರಿತು ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಸಭೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಸಚಿವರು, ಬೆಂಗಳೂರು ಭಾಗದ ಶಾಸಕರು, ಪದಾಧಿಕಾರಿಗಳು ಸಭೆಯಲ್ಲಿ ಬಾಗವಹಿಸಲಿದ್ದಾರೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.