ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ್ ಪರವಾಗಿ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ರು. ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಒಬ್ಬನೇ ಒಬ್ಬ ಲಿಂಗಾಯತ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಗುಡುಗಿದ್ರು.
ಯಡಿಯೂರಪ್ಪ ಲಿಂಗಾಯತ ಪ್ರಬಲ ನಾಯಕನಾಗಿದ್ದರೂ ಸಹ ಅವರನ್ನು ಕೇವಲ 2 ವರ್ಷಗಳಿಂದ ಮುಖ್ಯಮಂತ್ರಿ ಮಾಡಿ ಕೆಳಗಿಳಿಸಿದರು ಎಂದು ಹೇಳಿದ ಸಿದ್ದರಾಮಯ್ಯ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಕಣ್ಣೀರು ಹಾಕಿದ್ದನ್ನು ಮಿಮಿಕ್ರಿ ಮಾಡುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ರು.
ಯಡಿಯೂರಪ್ಪ ಮಾತ್ರವಲ್ಲ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ಗೂ ಈ ಬಿಜೆಪಿ ಟಿಕೆಟ್ ನೀಡಲಿಲ್ಲ. ಬಿಜೆಪಿಯು ಲಿಂಗಾಯತ ಸಮುದಾಯದ ನಾಯಕರನ್ನು ಅತ್ಯಂತ ಕೀಳಾಗಿ ಕಂಡಿದೆ ಎಂದು ಆರೋಪಿಸಿದ್ರು.