• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಬಿಜೆಪಿ ಗೂಂಡಾಗಳು ದಾಳಿ! ಗೇಟ್ ಧ್ವಂಸ, ಸಿಸಿಟಿವಿ ಕ್ಯಾಮರಾ ನಾಶ

ಪ್ರತಿಧ್ವನಿ by ಪ್ರತಿಧ್ವನಿ
March 30, 2022
in ದೇಶ
0
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಬಿಜೆಪಿ ಗೂಂಡಾಗಳು ದಾಳಿ! ಗೇಟ್ ಧ್ವಂಸ, ಸಿಸಿಟಿವಿ ಕ್ಯಾಮರಾ ನಾಶ
Share on WhatsAppShare on FacebookShare on Telegram

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೀಡಿದ ಹೇಳಿಕೆ ಖಂಡಿಸಿ, ದಿಲ್ಲಿಯ ಕೇಜ್ರಿವಾಲ್ ನಿವಾಸದ ಎದುರು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಕಾರವಾಗಿ ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ADVERTISEMENT

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಮಾತನಾಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ. ಮನೆಯ ಎದುರಿನ ಗೇಟ್ನ್ನು ಧ್ವಂಸಗೊಳಿಸಿದ್ದಾರೆ. ಭದ್ರತೆಗಾಗಿ ಹಾಕಿದ್ದ ಬ್ಯಾರಿಕೇಡ್ಗಳು, ಕೇಜ್ರಿವಾಲ್ ಮನೆಯ ಬಳಿಯಿದ್ದ ಸಿಸಿಟಿವಿ ಕ್ಯಾಮರಾಗಳೆಲ್ಲ ನಾಶಗೊಂಡಿವೆ. ಇಷ್ಟೆಲ್ಲ ಆದರೂ ದೆಹಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಂಡಿಲ್ಲ, ಅವರು ಅಷ್ಟೆಲ್ಲ ದಾಂಧಲೆ ಎಬ್ಬಿಸುತ್ತಿದ್ದರೂ, ಅದನ್ನು ತಡೆಯುವ ಪ್ರಯತ್ನ ಮಾಡಲಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಂದು ಆರೋಪಿಸಿದ್ದಾರೆ. ಈ ಬಗ್ಗೆ ಆಮ್ ಆದ್ಮಿ ಪಕ್ಷ ಕೂಡ ಟ್ವೀಟ್ ಮಾಡಿದೆ.

बीजेपी के गुंडे CM @ArvindKejriwal जी के घर पर तोड़फोड़ करते रहे. बीजेपी की पुलिस उन्हें रोकने की जगह उन्हें घर के दरवाज़े तक लेकर आई. https://t.co/oSFc2kWaDC

— Manish Sisodia (@msisodia) March 30, 2022

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಬಿಜೆಪಿ ಬೆಂಬಲಿಗರು ಪ್ರತಿಭಟನಾಕಾರರು ಕೇಜ್ರಿವಾಲ್ ನಿವಾಸದ ಎದುರು ಧರಣಿ ನಡೆಸಿದ್ದಾರೆ. ಇದನ್ನೆಲ್ಲ ನೋಡಿಕೊಂಡು ದೆಹಲಿ ಪೊಲೀಸರು ಸುಮ್ಮನಿದ್ದಾರಲ್ಲ ಎಂಬ ಟೀಕೆಯೂ ಕೇಳಿಬರುತ್ತಿದೆ.

ಬಿಜೆಪಿ (BJP) ಯುವ ಮೋರ್ಚಾದ ಕಾರ್ಯಕರ್ತರು ಪ್ರತಿಭಟನೆಯ ವೇಳೆ ಸಿಎಂ ನಿವಾಸದ ಮೂರು ಬ್ಯಾರಿಕೇಡ್ಗಳನ್ನು ದಾಟಿ ಮುಖ್ಯದ್ವಾರ ತಲುಪಿದ್ದಾರೆ. ಬಿಜೆವೈಎಂ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಇತರ ಎಲ್ಲಾ ಕಾರ್ಯಕರ್ತರು ಮುಖ್ಯ ದ್ವಾರದಲ್ಲಿ ಕುಳಿತು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಇದಾದ ಬಳಿಕ ದೆಹಲಿ ಪೊಲೀಸರು ಎಲ್ಲರನ್ನು ಬಲವಂತವಾಗಿ ಎಬ್ಬಿಸಿ, ಅಲ್ಲಿಂದ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಕಳೆದ ವಾರ ದಿಲ್ಲಿ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್, ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ತೆರಿಗೆ ರಹಿತ ಸೌಲಭ್ಯ ನೀಡಲು ನಿರಾಕರಿಸಿದ್ದರು. ಅಷ್ಟೇ ಅಲ್ಲ, ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಅಷ್ಟೊಂದು ಕಾಳಜಿ ಇದ್ದರೆ ಯೂಟ್ಯೂಬ್ನಲ್ಲಿ ಚಿತ್ರದ ಪ್ರದರ್ಶನಕ್ಕೆ ಏರ್ಪಾಡು ಮಾಡಲಿ ಎಂದು ಸವಾಲೆಸೆದಿದ್ದರು.

Punjab में AAP की जीत से बौखलाई BJP

Delhi Police के साथ मिलकर किया CM @ArvindKejriwal पर जानलेवा हमला

BJP इतनी बौखला गई है कि केजरीवाल जी की हत्या की साज़िश रच रही है

BJP को डर है कि केवल केजरीवाल ही PM Modi को टक्कर दे सकते हैं इसलिए उन्हें जान से मारना चाहती है#BJPKeGunde pic.twitter.com/xs28gozeS2

— AAP (@AamAadmiParty) March 30, 2022
Tags: BJPCongress Partyಅರವಿಂದ್ ಕೇಜ್ರಿವಾಲ್ಗೂಂಡಾಗಳು ದಾಳಿಬಿಜೆಪಿ
Previous Post

ಬೆಂಗಳೂರು | ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ರಾಷ್ಟ್ರ ಮಟ್ಟದ ಈಜುಪಟುಗಳನ್ನು ಬಂಧಿನ

Next Post

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ : ಎಎಪಿ ಆರೋಪ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಹಿಂದುತ್ವದ ಹಿಂʼಬಾಲಕʼರಾದ ಅರವಿಂದ್ ಕೇಜ್ರಿವಾಲ್!

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ : ಎಎಪಿ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada