• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಗಲಕೋಟೆಯಲ್ಲಿ ವಿಜಯ ಪಥ, ದಾವಣಗೆರೆಯಲ್ಲಿ ಅಚ್ಚರಿ ಕಾದಿದೆ : ಬೊಮ್ಮಾಯಿ ಶಾಕಿಂಗ್‌ ಹೇಳಿಕೆ

ನಮ್ಮ ಹೊಲ, ನಮ್ಮ ಕೆರೆ ಎಂಬ ಭಾವನೆ ಬೆಳೆಸಿಕೊಂಡರೆ ಗ್ರಾಮ ಸುರಾಜ್ಯ ಎಂದ ಸಂಸದ ಬೊಮ್ಮಾಯಿ (Bommai)

ಪ್ರತಿಧ್ವನಿ by ಪ್ರತಿಧ್ವನಿ
March 22, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಾಗಲಕೋಟೆಯಲ್ಲಿ ವಿಜಯ ಪಥ, ದಾವಣಗೆರೆಯಲ್ಲಿ ಅಚ್ಚರಿ ಕಾದಿದೆ : ಬೊಮ್ಮಾಯಿ ಶಾಕಿಂಗ್‌ ಹೇಳಿಕೆ
Share on WhatsAppShare on FacebookShare on Telegram

ಹಾವೇರಿ : ರಾಜ್ಯ ಸರ್ಕಾರಕ್ಕೆ ರೈತರನ್ನು ಉಳಿಸಿಕೊಳ್ಳಬೇಕೆಂಬ ಮನಸಿದ್ದರೆ ಕರೆಗಳನ್ನು ಉಳಿಸಬೇಕು. ಕೆರೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಪ್ರವಾಹ ಆಗುವುದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೆರೆ ಹೂಳು ತೆಗೆಯಲು 200 ಕೋಟಿ ರೂ. ಇಟ್ಟಿದ್ದರು. ಅದೇ ರೀತಿ ಕೆರೆ ಹೂಳು ತೆಗೆಯಲು ರಾಜ್ಯ ಸರ್ಕಾರ ಪತ್ಯೇಕ ಹಣ ಮೀಸಲಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ADVERTISEMENT
Ex CM Basavaraj Bommai on Congress Govt: ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ #pratidhvani

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಶಿಗ್ಗಾವಿ ಸವಣೂರು ತಾಲೂಕುಗಳು ಕೆರೆಗಳಿಂದ ಕೂಡಿವೆ. ಸುಮಾರು ಐನೂರು ಕೆರೆಗಳಿವೆ. ಅವುಗಳಲ್ಲಿ ಕನಿಷ್ಟ 100 ದೊಡ್ಡ ಕೆರೆಗಳಿವೆ. 150 ಕ್ಕಿಂತ ಹೆಚ್ಚು ದೊಡ್ಡ ಮತ್ತು ಸಣ್ಣ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕು. 2015, 16, 17 ರಲ್ಲಿ ಬರಗಾಲ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ಕೆರೆ ಹೂಳು ತೆಗೆಯುವ ಕೆಲಸ ಆಯಿತು. ಇಂತಹ ಭಗೀರಥ ಕೆಲಸಕ್ಕೆ ಭಾರತ ಸೇವಾ ಸಂಸ್ಥೆ ಕೆರೆಗಳ ಹೂಳು ತೆಗೆಯಲು ದೊಡ್ಡ ಸಹಾಯ ಮಾಡಿದೆ ಎಂದು ಸ್ಮರಿಸಿದ್ದಾರೆ.

ಎರಡು ಮೂರು ವರ್ಷದಿಂದ ಒಳ್ಳೆಯ ಮಳೆಯಾಗಿದೆ. ಆದ್ದರಿಂದ ಹೂಳು ತೆಗೆಯಲು ಆಗಿರಲಿಲ್ಲ. ಈ ವರ್ಷ ಬೇಸಿಗೆಗೆ ಕೆರೆ ಬತ್ತಿ ಹೋಗಿರುವುದರಿಂದ ಮತ್ತೆ ಹೂಳು ತೆಗೆಯುವ ಕೆಲಸ ಮಾಡಲು ಶ್ರೀಕಾಂತ ದುಂಡಿಗೌಡರು ಭಾರತ ಸೇವಾ ಸಂಸ್ಥೆ ವತಿಯಿಂದ ಹೂಳು ತೆಗೆಯುವ ಕೆಲಸ ಮಾಡಿದ್ದಾರೆ. ಪ್ರತಿಯೊಂದು ಜಿಲ್ಲಾ ಪಂಚಾಯತಿಯಲ್ಲಿ ಕನಿಷ್ಟ ಒಂದು ಕೆರೆ ಹೂಳೆತ್ತುವ ತೀರ್ಮಾನ ಮಾಡಿದ್ದಾರೆ ಎಂದು ಬೊಮ್ಮಾಯಿ ಶ್ಲಾಘಿಸಿದ್ದಾರೆ.

ಇದನ್ನೂ ಓದಿ : BREAKING NEWS : ಶಾಮನೂರು, ಮೇಟಿ ಕುಟುಂಬಕ್ಕೆ ಟಿಕೆಟ್‌ ಘೋಷಣೆ : ಯಾರ ಕೈ ಮೇಲು..?

ಇದದಿಂದ ಪ್ರೇರಣೆ ಪಡೆದು ಇನ್ನಷ್ಟು ಜನರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಹೂಳು ತೆಗೆಯುವ ಕೆಲಸ ಮಾಡಿದರೆ ನಮ್ಮ ಹೊಲ, ನಮ್ಮ ಮನೆ ಎನ್ನುವ ಭಾವನೆ ಮೂಡುತ್ತದೆ. ಅದೇ ರೀತಿ ನಮ್ಮ ಹೊಲ, ನಮ್ಮ ಮನೆ, ನಮ್ಮ ಕೆರೆ ನಮ್ಮ ಊರು ಎಂಬ ಭಾವನೆ ಬೆಳೆಸಿಕೊಂಡರೆ ಹಳ್ಳಿಗಳು ನಮಗೆ ಗ್ರಾಮ ಸ್ವರಾಜ್ಯ ಸಿಕ್ಕಿದೆ. ಸ್ವರಾಜ್ಯದಿಂದ ಸುರಾಜ್ಯ ಆಗುತ್ತವೆ. ಆ ನಿಟ್ಟಿನಲ್ಲಿ ಶ್ರೀಕಾಂತ ಪ್ರಯತ್ನಕ್ಕೆ ಅಭಿನಂದನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆರೆ ಹೂಳೆತ್ತಲು ಈಗಾಗಲೇ ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆಯಲ್ಲಿ ಹಾವೇರಿ ಜಿಲ್ಲೆ ಸೇರಿದೆ. ಹಾವೇರಿಗೆ ಕ್ರಿಯಾ ಯೋಜನೆ ಆಗಿದೆ. ಆ ಯೋಜನೆ ಅಡಿಯಲ್ಲಿ ಪ್ರತಿ ತಾಲೂಕಿಗೂ ಕೆರೆ ಅಭಿವೃದ್ಧಿಗೆ ಹಣ ಬರುತ್ತದೆ. ರಾಜ್ಯ ಸರ್ಕಾರ ಯಡಿಯೂರಪ್ಪ ಮುಖ್ಯಮಂತ್ರಿ ಇದ್ದಾಗ 200 ಕೋಟಿ ರೂ. ಕೆರೆ ಹೂಳು ತೆಗೆಯಲು ಇಟ್ಟಿದ್ದರು. ಅದೇ ರೀತಿ ಕೆರೆ ಹೂಳು ತೆಗೆಯಲು ಹಣ ಇಡಬೇಕು, ಕೆರೆಗಳ ರಕ್ಷಣೆ ಮಾಡಿದರೆ ನಮ್ಮ ಭೂಮಿ ರಕ್ಷಣೆ ಆಗುತ್ತದೆ ಎಂದು ಕರೆ ನೀಡಿದ್ದಾರೆ.

ಕೆರೆ ನಿಸರ್ಗದತ್ತವಾಗಿರುವುದು. ಅದಕ್ಕೆ ಕೆರೆಗಳಿಗೆ ಫ್ಲಡ್ ಕ್ಯಾರಿಯರ್ಸ್ ಅನ್ನುತ್ತಾರೆ. ಕೆರೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಪ್ರವಾಹ ಆಗುವುದಿಲ್ಲ, ರಾಜ್ಯ ಸರ್ಕಾರಕ್ಕೆ ರೈತರನ್ನು ಉಳಿಸಿಕೊಳ್ಳಬೇಕೆಂಬ ಮನಸಿದ್ದರೆ ಕೆರೆಗಳನ್ನು ಉಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಚ್ಚರಿಯ ಫಲಿತಾಂಶ ಬರುತ್ತೆ ನೋಡಿ..

ಉಪ ಚುನಾವಣೆಯ ಕುರಿತು ಪತಿಕ್ರಿಯಿಸಿ, ನಾವು ಬಹಳ ಲೆಕ್ಕಾಚಾರ ಹಾಕಿ ದಾವಣಗೆರೆಯಲ್ಲಿ ಟಿಕೆಟ್ ನೀಡಿದ್ದೇವೆ. ಬರುವಂತಹ ದಿನಗಳಲ್ಲಿ ಬಡವರು, ಎಸ್ಸಿ ಎಸ್ಟಿ ಜನರಿಂದ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತದೆ. ಆಶ್ಚರ್ಯಕರ ಫಲಿತಾಂಶ ದಾವಣಗೆರೆಯಲ್ಲಿ ದೊರೆಯುತ್ತದೆ ಎಂದು ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ವಿಜಯ ಪಥದಲ್ಲಿ ನಾವು ಹೋಗುತ್ತಿದ್ದೇವೆ. ಕಳೆದ ಬಾರಿ ಕಾಂಗ್ರೆಸ್ ಸೇರಿದ್ದ ಅನೇಕ ಮುಖಂಡರು ಬಿಜೆಪಿಗೆ ಸೇರುತ್ತಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲಿ ದೊಡ್ಡ ಪ್ರಮಾಣದ ಅಂತರದಲ್ಲಿ ಗೆಲ್ಲುತ್ತೇವೆ. ದಾವಣಗೆರೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸುತ್ತೇವೆ ಸಂಸದ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: B Y VijayendraBagalakoteBasavaraj Bommaibjp karnatakaBy electioncongress karnatakaDavanagere SouthGovernment of KarnatakaHaveri MPhaveri newskannada newsKarnataka PoliticsPradhanmantri Sinchayi SchemePratidhvaniR AshokS S MallikarjunSamarth ShamanurSave Lake Concept
Previous Post

BREAKING NEWS : ಶಾಮನೂರು, ಮೇಟಿ ಕುಟುಂಬಕ್ಕೆ ಟಿಕೆಟ್‌ ಘೋಷಣೆ : ಯಾರ ಕೈ ಮೇಲು..?

Next Post

ರಾಜ್ಯದಲ್ಲಿ ಪಾರ್ಲೆ-ಜಿ ಬಿಸ್ಕೆಟ್ ಉತ್ಪಾದನೆ ಸ್ಥಗಿತ: ಕಾರಣವೇನು ?

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ರಾಜ್ಯದಲ್ಲಿ ಪಾರ್ಲೆ-ಜಿ ಬಿಸ್ಕೆಟ್ ಉತ್ಪಾದನೆ ಸ್ಥಗಿತ: ಕಾರಣವೇನು ?

ರಾಜ್ಯದಲ್ಲಿ ಪಾರ್ಲೆ-ಜಿ ಬಿಸ್ಕೆಟ್ ಉತ್ಪಾದನೆ ಸ್ಥಗಿತ: ಕಾರಣವೇನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada