ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಸಂಖ್ಯಾ ಬಲದೊಂದಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಗದ್ದುಗೆ ಹಿಡಿಯಲಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.
ಮತದಾರರು ನಮಗೆ ಸಂಪೂರ್ಣವಾಗಿ ಬಹುಮತ ನೀಡಿಲ್ಲ. ಶಾಸಕರು , ವಿಧಾನಪರಿಷತ್ ಸದಸ್ಯರು ಜೊತೆಗೆ ಪಕ್ಷೇತರರು ಕೂಡ ನಮಗೆ ಬೆಂಬಲ ನೀಡಲು ಮುಂದೆ ಬಂದಿದ್ದಾರೆ. ಹಾಗಾಗಿ ಈ ಬಾರಿ ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ಥೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸಿನ ಎಲ್ಲಾ ಹಂತದ ನಾಯಕರು ಪ್ರಚಾರ ನಡೆಸಿದ್ದರೂ ಮತದಾರರ ಮನವೊಲೈಸುವಲ್ಲಿ ವಿಫಲರಾಗಿದ್ದಾರೆ . ಬೊಮ್ಮಾಯಿ ಮತ್ತು ಯಡಿಯೂರಪ್ಪನವರ ಅಂತಹ ನಾಯಕರು ಪ್ರಚಾರ ಮಾಡದೆ ಇದ್ದರು ಮತದಾರರು ನಮ್ಮನ್ನೇ ಕೈ ಹಿಡಿದಿರುವುದರಿಂದ ನಮ್ಮ ಶಕ್ತಿ ಎಷ್ಟು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ಸಚಿವ ಮುರುಗೇಶ ನಿರಾಣಿ ಸಂತಸ ವ್ಯಕ್ತಪಡಿಸಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಬಿ.ಜೆ.ಪಿ.ಜಯಭೇರಿ – ಸಚಿವ ಸಿ.ಸಿ.ಪಾಟೀಲ ಸಂತಸ
ಉತ್ತರ ಕರ್ನಾಟಕ ಭಾಗದ ಮೂರು ಮಹಾನಗರ ಪಾಲಿಕೆಗಳಿಗೆ ನಡೆದ ಚುನಾವಣೆಗಳ ಪೈಕಿ ಎರಡು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಗೆಲವು ಸಾಧಿಸಿ ಪಾಲಿಕೆಗಳಲ್ಲಿ ಹಿಡಿತ ಸಾಧಿಸಿರುವುದು ಸಂತೋಷದ ಸಂಗತಿಯಾಗಿದೆ. ಇದಕ್ಕಾಗಿ ನಾನು ಮೊದಲಿಗೆ ನಮ್ಮ ಮತದಾರ ಬಂಧುಗಳಿಗೆ ಕೃತಜ್ಞತೆ ಸಲ್ಲಿಸ ಬಯಸುತ್ತೇನೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.
ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಮತ್ತಿತರ ಪಕ್ಷಗಳು ಬಿ.ಜೆ.ಪಿ. ವಿರುದ್ಧ ಎಷ್ಟೇ ಅಪಪ್ರಚಾರ ಮತ್ತು ಕುತಂತ್ರ ರಾಜಕಾರಣ ನಡೆಸಿದರೂ, ಬಿ.ಜೆ.ಪಿ.ಯ ಭದ್ರಕೋಟೆಯಾಗಿರುವ ಉತ್ತರ ಕರ್ನಾಟಕದಲ್ಲಿ ಮತದಾರರು ಆ ಪಕ್ಷಗಳಿಗೆ ತಕ್ಕ ಶಾಸ್ತಿ ಮಾಡಿದ್ದಲ್ಲದೇ, ಮತ್ತೊಮ್ಮೆ ತಮ್ಮ ಒಲವನ್ನು ಬಿ.ಜೆ.ಪಿ.ಗೆ ವ್ಯಕ್ತಪಡಿಸಿರುವುದು ನಿಜಕ್ಕೂ ಅರ್ಥಪೂರ್ಣವಾಗಿದೆ.

ನೂತನವಾಗಿ ಆಯ್ಕೆಯಾದ ಬಿ.ಜೆ.ಪಿ.ಯ ಎಲ್ಲಾ ಮಹಾನಗರ ಪಾಲಿಕೆಯ ಸದಸ್ಯರುಗಳಿಗೆ ನನ್ನ ಹಾರ್ದಿಕ ಶುಭಾಷಯಗಳನ್ನು ತಿಳಿಸಿದ ಸಚಿವರು . ಬಿ.ಜೆ.ಪಿ.ಯ ತತ್ವ ಸಿದ್ಧಾಂತಗಳನ್ನು ಎತ್ತಿಹಿಡಿದು ನಮ್ಮ ನಾಡನ್ನು ಪ್ರಗತಿಪಥದಲ್ಲಿ ಕೊಂಡೊಯ್ದು ಸದಾ ಜನರ ವಿಶ್ವಾಸ ಗಳಿಸುವಲ್ಲಿ ತಾವೆಲ್ಲಾ ಯಶಸ್ವಿಯಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯದ ಕುರಿತು ಸಚಿವ ಸಿ.ಸಿ.ಪಾಟೀಲ್ ಅವರು ಹೇಳಿದ್ದಾರೆ.