• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಶೂನ್ಯ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Any Mind by Any Mind
December 11, 2021
in ಕರ್ನಾಟಕ, ರಾಜಕೀಯ
0
ಇಡೀ ಸರ್ಕಾರ RSS ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ – ಸಿದ್ದರಾಮಯ್ಯ
Share on WhatsAppShare on FacebookShare on Telegram

ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದು ಗಾಂಧೀಜಿಯವರ ನಾಯಕತ್ವದಲ್ಲಿ ಹಾಗೂ ಕಾಂಗ್ರೆಸ್ ಪಕ್ಷದಿಂದ. 1925 ರಲ್ಲಿ ಆರ್.ಎಸ್.ಎಸ್ ನ ಸ್ಥಾಪನೆಯಾಗಿದ್ದರೂ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಶೂನ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಹರಿಹಾಯ್ದರು.

ADVERTISEMENT

ಮೈಸೂರು ತಾಲ್ಲೂಕಿನ ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿಯವರು ಸಾವರ್ಕರ್ ಬಹಳ ದೊಡ್ಡ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ ಎಂದೆಲ್ಲಾ ಹೇಳುತ್ತಾರೆ. ನಿಜವಾಗಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿಲ್ಲ. ಸಾವರ್ಕರ್ ನಕಲಿ ದೇಶಭಕ್ತ ಎಂದು ಟೀಕಿಸಿದರು.

ನಿಜಕ್ಕೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಆಸ್ತಿ ಪಾಸ್ತಿ ಕಳೆದುಕೊಂಡವರು ಕಾಂಗ್ರೆಸ್ ನವರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದವರು ಇವತ್ತು ನಮಗೆ ದೇಶಪ್ರೇಮದ ಪಾಠ ಮಾಡಲು ಬರುತ್ತಾರೆ. ನರೇಂದ್ರ ಮೋದಿ, ಅಡ್ವಾಣಿ, ವಾಜಪೇಯಿ ಇವರಾರು ಸ್ವಾತಂತ್ರ್ಯ ಹೋರಾಟಗಾರರಲ್ಲ; ಇವರೆಲ್ಲ ಸ್ವಾತಂತ್ರ್ಯದ ಫಲಾನುಭವಿಗಳು ಅಷ್ಟೇ ಎಂದರು.

ಬಿಜೆಪಿ ಸಮಾಜದ ಕೆಳ ವರ್ಗದ ಜನರ ಪಕ್ಷವಲ್ಲ. ಸಂವಿಧಾನ ಬದಲಾವಣೆ ಮಾಡುವುದಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದು ಸಂವಿಧಾನಕ್ಕೆ ಅಪಚಾರ ಮಾಡಿದಂತೆ. ಕಾರಜೋಳ, ನಾರಾಯಣಸ್ವಾಮಿ, ಜಿಗಜಿಣಗಿಯಂತವರು ಸ್ವಾರ್ಥಕ್ಕಾಗಿ ಬಿಜೆಪಿ ಸೇರಿದ್ದಾರೆ ಎಂದಿದ್ದೆ. ಆದರೆ ಇದಕ್ಕೆ ಛಲವಾದಿ ನಾರಾಯಣಸ್ವಾಮಿ ನನ್ನನ್ನು ದಲಿತ ವಿರೋಧಿ ಎಂದು ಹುಸಿ ಆರೋಪ ಮಾಡಿದರು ಎಂದು ಕಿಡಿಕಾರಿದರು.

ಜೆಡಿಎಸ್ ವಿಚಾರವಾಗಿಯೂ ಮಾತನಾಡಿ, ಕೇವಲ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಜೆಡಿಎಸ್ ಸೀಮಿತವಾಗಿದೆ. ಆದರೂ 2023 ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಅನ್ನುವುದು ಅವರ ಭ್ರಮೆ. ನಾನು ಜೆಡಿಎಸ್ ಅಧ್ಯಕ್ಷನಾಗಿದ್ದಾಗ 59 ಸೀಟು ಗೆದ್ದಿತ್ತು, ನನ್ನನ್ನು ಪಕ್ಷದಿಂದ ಹೊರಹಾಕಿದ ಮೇಲೆ ಅವರ ಪಕ್ಷದ ಸೀಟುಗಳು ನಿರಂತರವಾಗಿ ಕೆಳಗಿಳಿಯುತ್ತಿವೆ ಎಂದು ಹೇಳಿದರು.

ಈ ದೇಶದಲ್ಲಿ ಎಲ್ಲ ಜಾತಿ, ಧರ್ಮದ ಜನರಿದ್ದಾರೆ. ಸರ್ವರನ್ನೂ ಪ್ರೀತಿಸುವುದೇ ಕಾಂಗ್ರೆಸ್ನ ತತ್ವ ಮತ್ತು ಸಿದ್ದಾಂತ. ಈ ದಿನ ನಾವು ಸದಸ್ಯತ್ವ ಅಭಿಯಾನ ಆರಂಭಿಸಿದ್ದೇವೆ. ಪ್ರತಿಯೊಬ್ಬರು ಕೇವಲ 5 ರೂ. ಶುಲ್ಕ ನೀಡುವ ಮೂಲಕ ಪಕ್ಷದ ಸದಸ್ಯತ್ವ ಪಡೆಯಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇರಳ ವಿಶ್ವವಿದ್ಯಾಲಯಗಳ ಕುಲಪತಿ ನೇಮಕದಲ್ಲಿ ರಾಜಕೀಯ ಹಸ್ತಕ್ಷೇಪ : ಪಿಣಾರಾಯ್ ಸರ್ಕಾರಕ್ಕೆ ಖಡಕ್ ಪತ್ರ ಬರೆದ ರಾಜ್ಯಪಾಲ ಆರಿಫ್!

Next Post

ಜೈ ಭೀಮ್ ಒಂದು ಉದಾಹರಣೆ ಮಾತ್ರ; ಇಂಥ ಘಟನೆಗಳು ನೂರಾರು ನಡೆದಿವೆ: ನ್ಯಾ. ಚಂದ್ರು

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಜೈ ಭೀಮ್ ಒಂದು ಉದಾಹರಣೆ ಮಾತ್ರ; ಇಂಥ ಘಟನೆಗಳು ನೂರಾರು ನಡೆದಿವೆ: ನ್ಯಾ. ಚಂದ್ರು

ಜೈ ಭೀಮ್ ಒಂದು ಉದಾಹರಣೆ ಮಾತ್ರ; ಇಂಥ ಘಟನೆಗಳು ನೂರಾರು ನಡೆದಿವೆ: ನ್ಯಾ. ಚಂದ್ರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada