• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಗರು ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಿದ್ದಾರೆ : ಡಿ.ಕೆ. ಶಿವಕುಮಾರ್

Any Mind by Any Mind
February 21, 2022
in ಕರ್ನಾಟಕ
0
ಬಿಜೆಪಿಗರು ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಿದ್ದಾರೆ : ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

‘ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಸಚಿವರ ಹೇಳಿಕೆ ವಿರುದ್ಧ, ಕಳೆದ ನಾಲ್ಕು ದಿನಗಳಿಂದ ನಾವು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಎಲ್ಲ ಶಾಸಕರೂ ಅಲ್ಲೇ ಮಲಗುತ್ತಿದ್ದೇವೆ. ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಲಾಗಿದ್ದು, ಇದನ್ನು ಕಾಪಾಡುವ ಜವಾಬ್ದಾರಿ ನಮ್ಮದು. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ADVERTISEMENT

ಈ ಕುರಿತು ಬೆಂಗಳೂರು ನಗರದಲ್ಲಿ ಮಾತನಾಡಿದ ಅವರು, ‘ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಸಚಿವರ ಹೇಳಿಕೆ ವಿರುದ್ಧ, ಕಳೆದ ನಾಲ್ಕು ದಿನಗಳಿಂದ ನಾವು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಎಲ್ಲ ಶಾಸಕರೂ ಅಲ್ಲೇ ಮಲಗುತ್ತಿದ್ದೇವೆ ಎಂದು ಕಿಡಿಕಾರಿದ್ದಾರೆ.

ಸಚಿವರ ಈಶ್ವರಪ್ಪ ಖಂಡನೀಯ ಹೇಳಿಕೆ ನೀಡಿದ್ದು, ರಾಜ್ಯಪಾಲರು ಅವರನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ. ಕೇಂದ್ರದ ಯಾವುದೇ ಸಚಿವರು ಅವರ ವಜಾಕ್ಕೆ ಸಲಹೆ ಮಾಡಿಲ್ಲ. ತ್ರಿವರ್ಣ ಧ್ವಜ ಬದಲಿಗೆ ಕೇಸರಿ ಧ್ವಜ ಹಾರಿಸುವುದು ಹೆಮ್ಮೆ ಎಂದು ಅವರು ಭಾವಿಸಿದ್ದಾರೆ.

ನಾವು ಈ ವಿಚಾರವಾಗಿ ಹೋರಾಟ ನಡೆಸುವಾಗ ಶಿವಮೊಗ್ಗದಲ್ಲಿ ವೈಯುಕ್ತಕ ವಿಚಾರವಾಗಿ ಕೊಲೆ ನಡೆದಿದೆ. ಈ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಈ ಕೃತ್ಯ ಎಸಗಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಈ ವಿಚಾರದಲ್ಲಿ ರಾಜಕೀಯ ಹೇಳಿಕೆಯನ್ನು ನಾನು ನೀಡುವುದಿಲ್ಲ. ಈಶ್ವರಪ್ಪ ನನ್ನ ವಿರುದ್ಧ ಹೇಳಿಕೆ ನೀಡುತ್ತಿರಬಹುದು. ನನ್ನ ವಿರುದ್ಧ ಮಾತನಾಡದಿದ್ದರೆ ಅವರ ಪಕ್ಷದಲ್ಲಿ ಅವರಿಗೆ ಸ್ಥಾನ ಸಿಗುವುದಿಲ್ಲ ಎಂದು ಅರಿತು ಈ ರೀತಿ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಮೊದಲು ಅವರ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು. ಅವರನ್ನು ವಜಾ ಮಾಡಿದರೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತದೆ.

ಈ ಸರ್ಕಾರ ಈಶ್ವರಪ್ಪ ಅವರನ್ನು ಎಷ್ಟು ದಿನಗಳ ಕಾಲ ರಕ್ಷಣೆ ಮಾಡಿಕೊಂಡು ಇರುತ್ತದೆಯೋ ಅಲ್ಲಿಯವರೆಗೂ ದೇಶದಲ್ಲಿ ಈ ಪರಿಸ್ಥಿತಿ ಮುಂದುವರಿಯಲಿದೆ. ವೈಯಕ್ತಿಕ ಗಲಾಟೆಗಳಿಂದ ಶಿವಮೊಗ್ಗದಲ್ಲಿ ಹತ್ಯೆ ನಡೆದಿದೆ ಎಂದು ಮಾಧ್ಯಮಗಳು ಮಾಹಿತಿ ನೀಡುತ್ತಿದ್ದು, ಇಂತಹ ಕೃತ್ಯ ನಡೆಯಬಾರದು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ಈ ತಪ್ಪು ಯಾರೇ ಮಾಡಿದ್ದರೂ ಅವರನ್ನು ಶಿಕ್ಷೆಗೆ ಒಳಪಡಿಸಬೇಕು. ಮೃತರ ಕುಟುಂಬಕ್ಕೆ ನ್ಯಾಯ ಸಿಗಬೇಕು.’

ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯಿಂದಲೇ ಇಂತಹ ಘಟನೆ ನಡೆಯುತ್ತಿದೆ ಎಂಬ ಈಶ್ವರಪ್ಪ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಮಗೂ ಈ ಪ್ರಕರಣಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ನಾವು ರಾಷ್ಟ್ರಧ್ವಜ ವಿಚಾರವಾಗಿ ಹೋರಾಟ ಮಾಡುತ್ತಿದ್ದೇವೆ. ಇದರ ಹೊರತಾಗಿ ಇಂತಹ ಪ್ರಚೋದನಾಕಾರಿ ಹೇಳಿಕೆಗಳಿಗೆಲ್ಲ ನಾನು ಉದ್ರೇಕಗೊಳ್ಳುವುದಿಲ್ಲ. ನಾನು ತಪ್ಪು ಮಾಡಿದ್ದರೆ ನನ್ನ ವಿರುದ್ಧ ಪ್ರಕರಣ ದಾಖಲಿಸಿ. ಸಚಿವರು, ಸರ್ಕಾರ, ಪೊಲೀಸ್ ಅಧಿಕಾರಿಗಳು ಮುಕ್ತವಾಗಿ ನನ್ನ ವಿರುದ್ಧ ಕ್ರಮ ಕೈಗೊಳ್ಳಬಹುದು. ಇಂತಹ ವಿಚಾರದಲ್ಲಿ ನನ್ನನ್ನು ಕ್ಷಮಿಸಬಾರದು. ನನ್ನ ವಿರುದ್ಧ ಕ್ರಮ ಕೈಗೊಳ್ಳುವುದು ಅವರ ಕರ್ತವ್ಯ. ದೇಶದ ಐಕ್ಯತೆ ಬಹಳ ಪ್ರಮುಖ. ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ನಾವು ನಮ್ಮ ಇತಿಹಾಸ, ದೇಶದ ಗೌರವ, ಸಂವಿಧಾನ ರಕ್ಷಣೆಗೆ ಬದ್ಧವಾಗಿದ್ದೇವೆ’ ಎಂದು ಉತ್ತರಿಸಿದರು.

ಕೊಲೆಯಾದ ವ್ಯಕ್ತಿ ಹಿಜಾಬ್ ಹಾಗೂ ಕೇಸರಿ ವಿವಾದದಲ್ಲಿ ಭಾಗಿಯಾಗಿದ್ದು, ಈ ಕೊಲೆಗೆ ಈ ವಿವಾದ ಕಾರಣವಿರಬಹುದೇ ಎಂಬ ಪ್ರಶ್ನೆಗೆ, ‘ಈ ಕೊಲೆಗೂ ಹಿಜಾಬ್ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ. ಈ ಕೊಲೆಯ ಹಿಂದೆ ಕೊಲೆಯ ಆರೋಪಿಗಳು ಹಾಗೂ ಮೃತನ ಮಧ್ಯೆ ವೈಯಕ್ತಿಕ ಕಾರಣಗಳಿವೆ ಎಂಬ ಮಾಧ್ಯಮ ವರದಿಗಳನ್ನು ನೋಡುತ್ತಿದ್ದೇವೆ. ಹೀಗಾಗಿ ಈ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.

ಈ ಹತ್ಯೆಗೆ ಧಾರ್ಮಿಕ ಬಣ್ಣ ನೀಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಸಿದ್ದರಾಮಯ್ಯನವರು ಹೇಳಿರುವಂತೆ ಈಶ್ವರಪ್ಪನ ಮಿದುಳಿಗೂ ನಾಲಿಗೆಗೂ ಸಂಪರ್ಕವೇ ಇಲ್ಲ. ಈ ಹತ್ಯೆ ಯಾಕಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೆ ನೀಡಬೇಕು. ಆದರೆ ಸಾಮಾನ್ಯ ಪರಿಜ್ಞಾನವೂ ಇಲ್ಲದೆ ಆತ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇಂತಹ ಹೇಳಿಕೆ ನೀಡುತ್ತಿರುವುದಕ್ಕೆ ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಲಿ. ಅವರು ದೇಶಕ್ಕೆ ತ್ಯಾಗ ಮಾಡಿರುವ ರೀತಿಯಲ್ಲಿ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರು ಬರೀ ಹಾಲಿನ ಅಭಿಷೇಕ ಅಲ್ಲ, ತುಪ್ಪದ ಅಭಿಷೇಕ ಮಾಡಿಸಿಕೊಳ್ಳಲಿ’ ಎಂದು ಛೇಡಿಸಿದರು.

ಈ ಕೃತ್ಯವನ್ನು ನಿಮ್ಮ ವಿರುದ್ಧದ ದಾಳಿಗೆ ಬಳಸಿಕೊಳ್ಳುತ್ತಿದ್ದಾರಾ ಎಂಬ ಪ್ರಶ್ನೆಗೆ, ‘ಅವರು ದಾಳಿ ಮಾಡಲಿ. ಅವರು ಸದಾ ನನ್ನ ಮೇಲೆ ದಾಳಿ ಮಾಡುತ್ತಲೇ ಇದ್ದಾರೆ. ನನ್ನ ವಿರುದ್ಧ ದಾಳಿ ಮಾಡದಿದ್ದರೆ ಅವರಿಗೆ ರಾಜಕೀಯ ನೆಲೆ ಇರುವುದಿಲ್ಲ. ಹೀಗಾಗಿ ನನ್ನ ಹಾಗೂ ನಮ್ಮ ಪಕ್ಷದ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ’ ಎಂದು ಉತ್ತರಿಸಿದರು.

Tags: BJPCongress PartyCovid 19ಕರೋನಾಕೆಂಪುಕೋಟೆಕೇಸರಿ ಧ್ವಜಕೋವಿಡ್-19ಡಿ.ಕೆ. ಶಿವಕುಮಾರ್ತ್ರಿವರ್ಣ ಧ್ವಜನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಂವಿಧಾನಸಿದ್ದರಾಮಯ್ಯ
Previous Post

ಶಿವಮೊಗ್ಗದ ಕೊಲೆ ಪ್ರಕರಣ : ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಗಲ್ಲು ಶಿಕ್ಷೆ ನೀಡಿ : ಸಿದ್ದರಾಮಯ್ಯ ಆಗ್ರಹ

Next Post

ಪ್ರೊ ಕಬಡ್ಡಿ : ಬೆಂಗಳೂರು ಬುಲ್ಸ್ ಕಪ್ ಗೆಲ್ಲಲು ಇನ್ನೆರಡೇ ಮೆಟ್ಟುಲು!

Related Posts

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ
ಇದೀಗ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

by ಪ್ರತಿಧ್ವನಿ
January 18, 2026
0

ಬಿಜೆಪಿಯವರಿಗೆ ಸಂಸ್ಕೃತಿ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ ಆಯೋಜಿಸಿ ಕಾಂಗ್ರೆಸ್‌ ವಿರುದ್ಧ ಆರೋಪಗಳನ್ನು...

Read moreDetails
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
Next Post
ಪ್ರೊ ಕಬಡ್ಡಿ : ಬೆಂಗಳೂರು ಬುಲ್ಸ್ ಕಪ್ ಗೆಲ್ಲಲು ಇನ್ನೆರಡೇ ಮೆಟ್ಟುಲು!

ಪ್ರೊ ಕಬಡ್ಡಿ : ಬೆಂಗಳೂರು ಬುಲ್ಸ್ ಕಪ್ ಗೆಲ್ಲಲು ಇನ್ನೆರಡೇ ಮೆಟ್ಟುಲು!

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada