• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್‌ ನಿಯಂತ್ರಣದಲ್ಲಿ ತನ್ನ ವೈಫಲ್ಯ ಮರೆಮಾಚಲು ಹೊಸ ಕಾರ್ಯಯೋಜನೆ ರೂಪಿಸಿದ ಬಿಜೆಪಿ

ಫೈಝ್ by ಫೈಝ್
June 14, 2021
in ದೇಶ
0
ಕೋವಿಡ್‌ ನಿಯಂತ್ರಣದಲ್ಲಿ ತನ್ನ ವೈಫಲ್ಯ ಮರೆಮಾಚಲು ಹೊಸ ಕಾರ್ಯಯೋಜನೆ ರೂಪಿಸಿದ ಬಿಜೆಪಿ
Share on WhatsAppShare on FacebookShare on Telegram

ಕೋವಿಡ್‌ ಮೊದಲನೇ ಹಾಗೂ ಎರಡನೇ ಅಲೆಯನ್ನು ನಿಯಂತ್ರಿಸಲು ವಿಫಲವಾದ ಭಾರತ ಸರ್ಕಾರದ ಮುಜುಗರ ತಪ್ಪಿಸಲು ಭಾರತೀಯ ಜನತಾ ಪಕ್ಷವು ರಚನಾತ್ಮಕ ಕಾರ್ಯತಂತ್ರ ರೂಪಿಸಿದ್ದು, ತನ್ನ ಸರ್ಕಾರದ ವೈಫಲ್ಯದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲೆಂದು ಈ ಯೋಜನೆಗೆ ಬಿಜೆಪಿ ಸಜ್ಜಾಗಿದೆ ಎನ್ನಲಾಗಿದೆ.

ADVERTISEMENT

ಕೋವಿಡ್ ವ್ಯಾಕ್ಸಿನೇಷನ್ ಅನ್ನು ಉತ್ತೇಜಿಸಲು, ಲಸಿಕೆ ಕುರಿತು ಜಾಗೃತಿ ಮೂಡಿಸಲು ಮತ್ತು ರೋಗದಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ದೇಶಾದ್ಯಂತ ಸ್ವಯಂಸೇವಕ ಸೇವೆಯ ಎರಡನೇ ಹಂತವನ್ನು ಪ್ರಾರಂಭಿಸಲು ಬಿಜೆಪಿ ಸಜ್ಜಾಗಿದೆ. ಕೋವಿಡ್‌ ಎರಡನೇ ಅಲೆಯ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ಇನ್ನೂ ಸಿದ್ಧವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿದ್ದ ನಡುವೆಯೇ, ಕಳೆದ ತಿಂಗಳು ಈ ಕಾರ್ಯಕ್ರಮವನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆರಂಭಿಸಿದ್ದರು.

“ಸೇವಾ ಹೈ ಸಂಘಥನ್” ಎಂಬ ಘೋಷವಾಕ್ಯದೊಡನೆ ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ಅಭಿಯಾನ, ಪರಿಹಾರ ಕಾರ್ಯಕ್ರಮಗಳು, ಹಳ್ಳಿಗಳಲ್ಲಿ ಆರೋಗ್ಯ ಸ್ವಯಂಸೇವಕರಿಗೆ ತರಬೇತಿ ನೀಡಲು ಸಹಾಯ ಮಾಡುವಂತೆ ಸೂಚಿಸಿದ್ದಾರೆ.

ವ್ಯಾಕ್ಸಿನೇಷನ್ ಅಭಿಯಾನದಡಿಯಲ್ಲಿ, 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಜನರು ಲಸಿಕೆಯ ಎರಡೂ ಪ್ರಮಾಣವನ್ನು ಪಡೆದಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ.

ಹೆಚ್ಚು ಪ್ರಮಾಣದಲ್ಲಿ ಕೋವಿಡ್‌ ತಗುಲುವ ಅಪಾಯವಿರುವ 18 ರಿಂದ 44 ವಯಸ್ಸಿನೊಳಗಿನವರಿಗೆ ವಿಶೇಷ ಎಚ್ಚರಿಕೆ, ರೋಗವನ್ನು ತಗ್ಗಿಸುವ ಕುರಿತು ಅರಿವು ಮೂಡಿಸಲು ಹಾಗೂ ಲಸಿಕೆ ಹಾಕಿಸಲು ಉತ್ತೇಜನ ನೀಡುವಂತೆ ಕಾರ್ಯಕರ್ತರಿಗೆ ನಿರ್ದೇಶಿಲಾಗುತ್ತಿದೆ.

ನಡ್ಡಾ ಅವರ ಸೂಚನೆಗಳನ್ನು ವಿವರಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಪತ್ರವು ಇತರ ಆದ್ಯತೆಯ ಕ್ಷೇತ್ರಗಳನ್ನು ಸಹ ಗುರುತಿಸಿದೆ: “ರಕ್ತದಾನ ಶಿಬಿರಗಳನ್ನು ಆಯೋಜಿಸುವುದು ಮತ್ತು ವಿನಂತಿಗಳ ಮೇರೆಗೆ ರಕ್ತದಾನ ಮಾಡುವುದು. ಆಸ್ಪತ್ರೆಗಳು ಮತ್ತು ಇತರ ಸ್ಥಳಗಳಲ್ಲಿ ಪಡಿತರ ಕಿಟ್ ಮತ್ತು ಆಹಾರ ವಿತರಣೆಯನ್ನು ಏರ್ಪಡಿಸುವುದು ಅವಶ್ಯಕತೆಯ ಆಧಾರದ ಮೇಲೆ ಕೈಗೆತ್ತಿಕೊಳ್ಳಬೇಕು. ವಯಸ್ಸಾದ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವ ಅಥವಾ ಎಲ್ಲರೂ ಸೋಂಕಿಗೆ ಒಳಗಾದ ಪ್ರತ್ಯೇಕ ಮನೆಗಳಿಗೆ ಸ್ವಯಂಸೇವಕರನ್ನು ನಿಯೋಜಿಸುವುದು. COVID ತೊಡಕುಗಳನ್ನು ಹೇಳಿಕೊಳ್ಳಲು ಟೆಲಿ ಮೆಡಿಸಿನ್ ಕನ್ಸಲ್ಟೆನ್ಸಿ ಮತ್ತು ವೈದ್ಯಕೀಯ ಸಹಾಯ ಕೇಂದ್ರಗಳನ್ನು ಸ್ಥಾಪಿಸುವುದು. ಕರೋನಾ ಪೀಡಿತ ಜನರು ತಮ್ಮ ವಿಮಾ ಸೌಲಭ್ಯವನ್ನು ಶೀಘ್ರದಲ್ಲಿಯೇ ಪಡೆಯುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಹಾಗೂ ಅದಕ್ಕೆ ಸಹಾಯ ಮಾಡುವುದು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶದ ಕಾರ್ಮಿಕರಿಗೆ ತರಬೇತಿ ನೀಡಲು ಮತ್ತು ಸ್ಥಳೀಯ ವೈದ್ಯಕೀಯ ಕಚೇರಿಗಳಲ್ಲಿ ಥರ್ಮಲ್ ಸ್ಕ್ಯಾನರ್‌ಗಳು, ಆಕ್ಸಿಮೀಟರ್‌ಗಳು, ಹೋಮ್ ಟೆಸ್ಟ್ ಕಿಟ್‌ಗಳು ಮತ್ತು ಆಮ್ಲಜನಕ ಸಾಂದ್ರಕಗಳನ್ನು ಸಂಗ್ರಹಿಸಲು ರಾಜ್ಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೋವಿಡ್‌ನನ್ನು ನಿಭಾಯಿಸಿದ ರೀತಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಟೀಕೆಗಳನ್ನು ಎದುರಿಸಿದ ಒಕ್ಕೂಟ ಸರ್ಕಾರ ಮತ್ತು ಬಿಜೆಪಿಯ ಮೂಲ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ ತಿಂಗಳು ಸಕಾರಾತ್ಮಕತೆಗಾಗಿ ಒಂದು ಸಮಗ್ರ ಕಾರ್ಯ ಯೋಜನೆಯನ್ನು ರೂಪಿಸಿದೆ. ಸಕರಾತ್ಮಕ ಚಿಂತನೆಯನ್ನು ಹರಡುವುದು ಎಂಬ ನೆಪದಲ್ಲಿ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸದಂತೆ ಪಕ್ಷದ ಕಾರ್ಯಕರ್ತರ ಮೂಲಕ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಪ್ರಯತ್ನಪಟ್ಟಿತ್ತು.

ಇದೀಗ ಅದರ ಮುಂದುವರಿದ ಭಾಗವಾಗಿ, ವ್ಯಾಕ್ಸಿನ್‌ ವಿಚಾರದಲ್ಲಿ ಜನರ ಬಳಿ ಹೋಗಲು ಮುಂದಾಗಿದೆ. ಆ ಮೂಲಕ ಕರೋನಾ ನಿಯಂತ್ರಿಸುವಲ್ಲಿ ತನ್ನ ಸರ್ಕಾರ ಮಾಡಿದ ಯಡವಟ್ಟುಗಳ ಕಡೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ.

Previous Post

ಲಾಕ್ ಡೌನ್ ಮುಗಿದ ಬೆನ್ನಲ್ಲೇ ಕೇರಳ , ತಮಿಳುನಾಡಿನಿಂದ ಬೆಂಗಳೂರಿಗೆ ಜನರ ಆಗಮನ

Next Post

ಅಮೇರಿಕಾ ಮೂಲದ ನೊವಾವಾಕ್ಸ್ ಲಸಿಕೆ ಕರೋನ ರೂಪಾಂತರಗಳ ವಿರುದ್ಧ 93% ಪರಿಣಾಮಕಾರಿ: ಅಧ್ಯಾಯನದಲ್ಲಿ ಬಹಿರಂಗ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಅಮೇರಿಕಾ ಮೂಲದ ನೊವಾವಾಕ್ಸ್ ಲಸಿಕೆ ಕರೋನ ರೂಪಾಂತರಗಳ ವಿರುದ್ಧ 93% ಪರಿಣಾಮಕಾರಿ: ಅಧ್ಯಾಯನದಲ್ಲಿ ಬಹಿರಂಗ

ಅಮೇರಿಕಾ ಮೂಲದ ನೊವಾವಾಕ್ಸ್ ಲಸಿಕೆ ಕರೋನ ರೂಪಾಂತರಗಳ ವಿರುದ್ಧ 93% ಪರಿಣಾಮಕಾರಿ: ಅಧ್ಯಾಯನದಲ್ಲಿ ಬಹಿರಂಗ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada