ರಾಜಕೀಯದಿಂದ ದೂರ ಉಳಿಯುವ ಮಾತನಾಡಿದ್ದ ಡಿ.ಕೆ. ಸುರೇಶ್ ಹೇಳಿಕೆಗೆ ಮಾಜಿ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದರು. ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಸಿಗಲಿಲ್ಲ. ಮುಂದಿನ ದಿನಗಳಲ್ಲೂ ನಮ್ಮಣ್ಣ ಸಿಎಂ ಆಗಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ಹಾಗಾಗಿ ಡಿ.ಕೆ. ಸುರೇಶ್ ರಾಜಕೀಯ ನಿವೃತ್ತಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದರು.
![](https://pratidhvani.com/wp-content/uploads/2023/06/download-2023-06-19T172026.647-edited.jpg)
![](https://pratidhvani.com/wp-content/uploads/2023/06/ashok-2jpg-887830-1600160520-1024x502.jpg)
ಆರ್. ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಪ್ರಜ್ಞಾವಂತ, ಅನುಭವಿ ನಾಯಕ. ಡಿ.ಕೆ. ಸುರೇಶ್ ಗೆ ಯಾವುದೇ ವೈರಾಗ್ಯವೂ ಇಲ್ಲ. ಆರ್. ಅಶೋಕ್ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದೆ. ಮೊದಲು ಅದನ್ನು ನೋಡಿಕೊಳ್ಳಲಿ. ಮೊದಲು ಬಿಜೆಪಿಯವರು ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.