ಚಿಕ್ಕಮಗಳೂರು : ಬಿಜೆಪಿಯವರು ಯಾವ ಮುಖ ಇಟ್ಟುಕೊಂಡು ಕರ್ನಾಟಕದಲ್ಲಿ ವಿಜಯ ಸಂಕಲ್ಪ ಯಾತ್ರೆ ಮಾಡ್ತಿದ್ದಾರೆ ಅಂತಾ ಬಿಜಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಎರಡು ವರ್ಷಗಳಿಂ ನಾವು ನಿರಂತರವಾಗಿ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದೆವು. ಆದರೆ ಆಗೆಲ್ಲ ಬಿಜೆಪಿ ನಾಯಕರು ಸಾಕ್ಷ್ಯ ಕೇಳುತ್ತಿದ್ದರು. ವಿಜಯ ಸಂಕಲ್ಪ ಯಾತ್ರೆ ಮಾಡೋದನ್ನು ಬಿಟ್ಟು ಭ್ರಷ್ಟೋತ್ಸವ ಯಾತ್ರೆ ಮಾಡಿದರೆ ಬಿಜೆಪಿಗೆ ಹೆಚ್ಚು ಸೂಕ್ತ ಎನಿಸುತ್ತೆ ಅಂತಾ ಗುಡುಗಿದ್ದಾರೆ.
ಬಿಜೆಪಿ ನಾಯಕರು ಭ್ರಷ್ಟಾಚಾರವನ್ನು ವೈಭವೀಕರಿಸುತ್ತಿದ್ದಾರೆ. ಜೈಲಿನಿಂದ ಹೊರಗಡೆ ಬರುವಾಗ ವಿಜಯದ ಸಂಕೇತವನ್ನು ತೋರಿಸಿ ಹೊರಬರುತ್ತಾರೆ. ಈ ಮೂಲಕ ಭ್ರಷ್ಟಾಚಾರಕ್ಕೆ ವಿಜಯ ಪ್ರಾಪ್ತಿಯಾಯ್ತು ಅನ್ನೋದನ್ನು ತೋರಿಸುತ್ತಿದ್ದಾರೆ. ಭ್ರಷ್ಟಾಚಾರ ವೈಭವೀಕರಿಸೋದನ್ನು ಬಿಜೆಪಿಯನ್ನು ನೋಡಿ ಕಲಿತಿದ್ದೇವೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿ ಕಾರಿದ್ದಾರೆ .
ಲೋಕಾಯುಕ್ತ ತನಿಖೆ ಪೂರ್ಣಗೊಂಡ ಮೇಲೆ ಶಾಸಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ..? ಶಾಸಕನ ಪುತ್ರನ ಮನೆಯಲ್ಲಿಯೇ ಆರು ಕೋಟಿ ರೂಪಾಯಿ ನಗದು ಸಿಕ್ಕಿದೆ. ಇದಕ್ಕಿಂತ ದೊಡ್ಡ ಸಾಕ್ಷಿ ಬಿಜೆಪಿಗೆ ಇನ್ನೂ ಬೇಕಾ ಅಂತಾ ಚಿಕ್ಕಮಗಳೂರಿನಲ್ಲಿ ಬಿ.ಕೆ ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ.