• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಎಲ್ ಸಂತೋಷ್ ಕೂಡ ದೇವೇಗೌಡರಂತೆ!

ಪ್ರತಿಧ್ವನಿ by ಪ್ರತಿಧ್ವನಿ
February 3, 2025
in ಕರ್ನಾಟಕ, ರಾಜಕೀಯ
0
ಬಿಎಲ್ ಸಂತೋಷ್ ಕೂಡ ದೇವೇಗೌಡರಂತೆ!
Share on WhatsAppShare on FacebookShare on Telegram

ಧರಣೀಶ್ ಬೂಕನಕೆರೆ
ರಾಜಕೀಯ ವಿಶ್ಲೇಷಕರು

ADVERTISEMENT

ಎಚ್.ಡಿ. ದೇವೇಗೌಡರು ಗೊತ್ತಲ್ವಾ? ಅವರಿಗೆ ರಾಜಕಾರಣವೇ ಉಸಿರಾಟ. ಅವರು ಸಂದರ್ಭಕ್ಕಾಗಿ ಕಾಯುತ್ತಾರೆ. ಅಥವಾ ಒದಗಿ ಬಂದ ಸಂದರ್ಭಕ್ಕೆ ತಕ್ಕಂಥ ದಾಳ ಉರುಳಿಸುತ್ತಾರೆ. ಇದು ಕೂಡ ಅಂಥದ್ದೇ ಒಂದು ಉದಾಹರಣೆ. ಒಮ್ಮೆ ದೇವೇಗೌಡ, ಎಂಪಿ ಪ್ರಕಾಶ್ ಮತ್ತು ಪಿಜಿ ಆರ್ ಸಿಂಧ್ಯಾ ವಿಧಾನಸೌಧದ ಲಿಫ್ಟ್ ನಲ್ಲಿ ಮೇಲೆ ಹೋಗುತ್ತಿದ್ದರು. ವಿಶೇಷ ಎಂದರೆ ರಾಮಕೃಷ್ಣ ಹೆಗಡೆ ಕ್ಯಾಂಪಿನ ನೀಲಿಗಣ್ಣಿನ ಹುಡುಗ ಜೀವರಾಜ ಆಳ್ವಾ ಕೂಡ ಇದ್ದರು. ಇದೇ ಸರಿಯಾದ ಸಮಯ ಎಂದೆಣಿಸಿದ ದೇವೇಗೌಡರು ಮಾತು ಶುರು ಮಾಡಿದರು. ‘ಆಳ್ವಾ, ನೀನು ನಮ್ಮ ಒಕ್ಕಲಿಗರ ಹುಡುಗ, ಮುಂದೆ ಒಕ್ಕಲಿಗರ ನಾಯಕ ಆಗಬೇಕು. ಸಿಎಂ ಆಗಬೇಕು’ ಎಂದರು. ಯಾರೂ ಏನನ್ನೂ ಮಾತನಾಡಲಿಲ್ಲ. ದೇವೇಗೌಡರು ಮತ್ತೆ ‘ಆಳ್ವಾ ನೀನು ಬೆಳಿಬೇಕಪ್ಪ… ನಿನಗೆ ನನ್ನ ಮೇಲೆ ವಿಶ್ವಾಸನೇ ಇಲ್ಲ’ ಎಂದರು. ಆಗಲೂ ಮೌನ. ಇಷ್ಟು ಹೇಳಿದರೂ ಯಾರೊಬ್ಬರೂ ಕಮಕ್ ಗಿಮಕ್ ಎನ್ನುತ್ತಿಲ್ಲ ಎಂದರೆ ಈ ಆರ್ಡಿನರಿ ಬಾಣ ಕೆಲಸ ಮಾಡುತ್ತಿಲ್ಲ ಎಂದರಿತ ದೇವೇಗೌಡರು ತಮ್ಮ ಬತ್ತಳಿಕೆಯಲ್ಲಿ ಸದಾ ಸನ್ನದ್ಧವಾಗಿರುವ ಭಾವನಾತ್ಮಕ ಬಾಣ ಕೈಗೆತ್ತಿಕೊಂಡರು. ‘ಈ ಲಿಫ್ಟ್ ಮೇಲೆ ಆಣೆ…’ ಎಂದರು. ಹಾಗಂದಿದ್ದೇ ತಡ, ‘ಸಾರ್ ದಯವಿಟ್ಟು ಲಿಫ್ಟ್ ಮೇಲೆ ಮಾತ್ರ ಆಣೆ ಮಾಡಬೇಡಿ. ಮೂರನೇ ಮಹಡಿಗೆ ಬಂದಿದ್ದೇವೆ, ಈಗೇನಾದ್ರೂ ಲಿಫ್ಟ್ ಕೈಕೊಟ್ಟರೆ ಕೆಳಗೆ ಬಿದ್ದು ಎಲ್ಲರೂ ಒಟ್ಟಿಗೆ ಸತ್ತೋಗ್ತೀವಿ’ ಅಂತಾ ಕೈಹಿಡಿದುಕೊಂಡರಂತೆ ಜೀವರಾಜ್ ಆಳ್ವಾ. ಅಷ್ಟರಲ್ಲಿ ಲಿಫ್ಟ್ ಬಾಗಿಲು ತೆರೆದಿದೆ.

ಈ ಘಟನೆಯನ್ನು ಜೀವರಾಜ್ ಆಳ್ವಾ ಕಿಕ್ಕಿರಿದು ತುಂಬಿದ್ದ ಮೈಸೂರಿನ ಟೌನ್ ಹಾಲ್ ನಲ್ಲಿ ರಸವತ್ತಾಗಿ ವರ್ಣಿಸುತ್ತಿದ್ದರೆ ಸ್ವತಃ ದೇವೇಗೌಡರ ಕಟ್ಟಾ ಅಭಿಮಾನಿಗಳು ಚಪ್ಪಾಳೆ ತಟ್ಟಿ ಶಿಳ್ಳೆ ಹೊಡೆದು ಸಂಭ್ರಮಿಸುತ್ತಿದ್ದರು. ದೇವೇಗೌಡರು ಆಗಾಗ ಎಸ್ ಆರ್ ಬೊಮ್ಮಾಯಿ, ಜೆಎಚ್ ಪಟೇಲ್, ಸಿದ್ದರಾಮಯ್ಯ, ಪಿಜಿಆರ್ ಸಿಂಧ್ಯಾ, ಎಂಪಿ ಪ್ರಕಾಶ್ ಮತ್ತು ನನಗೆ ಸಿಎಂ ಆಗುವ ಕನಸುಗಳನ್ನು ಬಿತ್ತಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದರು ಎನ್ನುವುದನ್ನು ಆಳ್ವಾ ಹೀಗೆ ವಿವರಿಸಿದ್ದರು.

ಈಗ ರಾಜ್ಯ ಬಿಜೆಪಿ ನಾಯಕರು ದೇವೇಗೌಡರ ಜಾಗದಲ್ಲಿ ಬಿಎಲ್ ಸಂತೋಷ್ ಅವರನ್ನು ಕಲ್ಪಿಸಿಕೊಳ್ಳುತ್ತಿದ್ದಾರೆ. ಸಂತೋಷ್ ಕೂಡ ಕಲರ್ ಕಲರ್ ಕನಸು ಬಿತ್ತುತ್ತಿದ್ದಾರೆ. ಕೆಲವರಿಗೆ ರಾಜ್ಯಾಧ್ಯಕ್ಷರ ಪಟ್ಟ ಕಟ್ಟುವ, ಕೆಲವರನ್ನು ಮುಂದಿನ ಮುಖ್ಯಮಂತ್ರಿ ಮಾಡುವ, ಕೆಲವರನ್ನು ಜನಾಂಗದ ಜನನಾಯಕರನ್ನಾಗಿ ಬೆಳೆಸುವ ಕನಸುಗಳನ್ನು ಕಟ್ಟಿಕೊಡುತ್ತಿದ್ದಾರೆ. ಸಂತೋಷ್ ಮಾತುಗಳಿಂದ ಭವಿಷ್ಯವನ್ನು ನೆನದು ಪುಳಕಿತರಾಗಿರುವ ರಾಜ್ಯ ನಾಯಕರು ಕತ್ತಿ ಹಿಡಿದು ಹೋರಾಟಕ್ಕಿಳಿದಿದ್ದಾರೆ. ಅವರ ಪೈಕಿ ಕೆಲವರಿಗೆ ಶತ್ರುಗಳು ಯಾರೆಂದೇ ಗೊತ್ತಿಲ್ಲ. ಕೆಲವರಿಗೆ ಶತ್ರುಗಳ ಶಕ್ತಿ ಏನೆಂದೇ ಗೊತ್ತಿಲ್ಲ. ಒಟ್ಟಿನಲ್ಲಿ ಜೀ ಉರುಳಿಸುತ್ತಿರುವ ದಾಳಕ್ಕೆ ಕಮಲದ ದಳಗಳು ತಳಮಳಗೊಳ್ಳುತ್ತಿವೆ.

ಬಿಜೆಪಿಯ ತ್ರಿಮೂರ್ತಿಗಳು!

ರಾಜ್ಯ ಬಿಜೆಪಿಯ ಒಳ ಜಗಳ ಎಲ್ಲಾ ಎಲ್ಲೆಗಳನ್ನು ಮೀರಿದೆ. ಪರಿಣಾಮವಾಗಿ ಅಧ್ಯಕ್ಷಗಾದಿಗೆ ಚುನಾವಣೆ ನಡೆದ ನಂತರವೂ ಸಂಘರ್ಷ ನಿಲ್ಲುವ ಸಾಧ್ಯತೆಗಳಿಲ್ಲ. ಸಮಸ್ಯೆಗೆ ರಾಜ್ಯ ನಾಯಕರ ವೈಯಕ್ತಿಕ ದ್ವೇಷ, ದರ್ಪ, ದುರಾಸೆ, ಅಸೂಯೆಗಳು ಮಾತ್ರವೇ ಕಾರಣಗಳಲ್ಲ. ಹೈಕಮಾಂಡಿನ ನಿಲುವು-ನಿರ್ಲ್ಯಕ್ಷಗಳ ಪಾತ್ರವೂ ಇದೆ. ಇವೆಲ್ಲಕ್ಕೂ ಮಿಗಿಲಾದುದು ತೊಡೆ ಚಿವುಟಿ ತೊಟ್ಟಿಲು ತೂಗುವ ಸೂತ್ರಧಾರರ ಪಾತ್ರ. ಅವರು ಯಾರು ಎನ್ನುವುದು ಈಗ ಎಲ್ಲರಿಗೂ ತಿಳಿದಿದೆ. ಅವರೇ ಬಿಎಲ್ ಸಂತೋಷ್, ಪ್ರಹ್ಲಾದ್ ಜೋಶಿ ಮತ್ತು ಬಸವರಾಜ ಬೊಮ್ಮಾಯಿ. ಇವರನ್ನು ರಾಜ್ಯ ಬಿಜೆಪಿ ನಾಯಕರು ‘ತ್ರಿಮೂರ್ತಿ’ಗಳೆಂದು ಬಣ್ಣಿಸುತ್ತಾರೆ. ಈ ಪೈಕಿ ಸಂತೋಷ್ ಪಾತ್ರ ಸಿಕ್ಕಾಪಟ್ಟೆಯಂತೆ!

ಹುಲ್ಲಿನ ಮೆದೆಗೆ ಬೆಂಕಿ ಹಚ್ಚುವವರ ರಾಜಕೀಯ

ಒಂದೆಡೆ ವಿಜಯೇಂದ್ರ, ರೇಣುಕಾಚಾರ್ಯ, ಕಟ್ಟಾಸುಬ್ರಹ್ಮಣ್ಯ ನಾಯ್ಡು ಇತ್ಯಾದಿ ಇತ್ಯಾದಿ. ಇನ್ನೊಂದೆಡೆ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಬಿಪಿ ಹರೀಶ್, ಡಾ. ಸುಧಾಕರ್ ವಗೈರೆ ವಗೈರೆ. ಎರಡೂ ಕಡೆಯವರು ಸೇರಿ ಹರಾಜು ಹಾಕುತ್ತಿರುವುದು ಮಾತ್ರ ಬಿಜೆಪಿಯ ಮಾನವನ್ನು. ಕೆಲ ಹಳ್ಳಿಗಳಲ್ಲಿ ಇಸ್ಪೀಟ್ ಆಟ ಆಡಿಸುವವರು, ಆಗದವರ ಹುಲ್ಲಿನ ಮೆದೆಗೆ ಬೆಂಕಿ ಹಚ್ಚುವವರು, ಮಾಡಬೇಕಿರುವ ಕೆಲಸವನ್ನು ಬಿಟ್ಟು ಚೋಟು ಗೋಡೆ ಮೇಲೆ ಕೂತು ಮೋಟು ಬೀಡಿ ಸೇದುವವರು ಏನೇನೋ ಕಾರಣಕ್ಕೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿರುತ್ತಾರೆ. ಅವರು ಮಾಡುವ ದರ್ಬಾರು, ಕಿತ್ತೋದ ರಾಜಕೀಯ, ರಾಜಿಫಜೀತಿಗಳು, ಅನಾವಶ್ಯಕ ವಿವಾದಗಳು ಹೇಗಿರುತ್ತವೆ ಎಂದರೆ ಥೇಟು ಈಗ ರಾಜ್ಯ ಬಿಜೆಪಿ ಪಕ್ಷದಲ್ಲಿ ನಡೆಯುತ್ತಿವೆಯಲ್ಲ, ಹಾಗೇ… ಎನ್ನುತ್ತಾರೆ ಆ ಪಕ್ಷದ ಹಿರಿಯ ನಾಯಕರೊಬ್ಬರು.

ವಿಜಯೇಂದ್ರಗೆ ಪಟ್ಟ ಕಟ್ಟಿಟ್ಟ ಬುತ್ತಿ

ಭಿನ್ನ ಬಣದ ನಾಯಕರು ಎಷ್ಟೇ ಮೈಪರಚಿಕೊಂಡರೂ ವಿಜಯೇಂದ್ರ ಅಧ್ಯಕ್ಷನಾಗುವುದು ಗ್ಯಾರಂಟಿ ಎನ್ನುತ್ತವೆ ದೆಹಲಿ ಮೂಲಗಳು. ಏಕೆಂದರೆ ಅಧ್ಯಕ್ಷಗಾದಿಗೆ ನಡೆಯುವ ಚುನಾವಣೆ ನೆಪಮಾತ್ರ. ಎಲ್ಲವೂ ಪೂರ್ವನಿರ್ಧಾರಿತ. ಮೋದಿಯಿಂದ ಹಿಡಿದು ದೆಹಲಿಯ ಅಷ್ಟೂ ನಾಯಕರಿಗೆ ವಿಜಯೇಂದ್ರ ನಡೆಸುತ್ತಿರುವ ಆಟೋಟಪಗಳು ತಿಳಿದಿವೆ. ಆದರೂ ಯಡಿಯೂರಪ್ಪ ಕಾರಣಕ್ಕೆ ವಿಜಯೇಂದ್ರಗೆ ಪಟ್ಟ ಕಟ್ಟಿಟ್ಟ ಬುತ್ತಿ. ಸದ್ಯಕ್ಕೆ ಅವರನ್ನು ಕಾಡುತ್ತಿರುವುದು ವಿಜಯೇಂದ್ರಗೆ ಅಧ್ಯಕ್ಷಗಾದಿ ಕೊಟ್ಟರೆ ಭಿನ್ನರನ್ನು ಸಮಾಧಾನಪಡಿಸುವುದು ಹೇಗೆ ಎಂಬ ಪ್ರಶ್ನೆ. ಉತ್ತರ ಕಂಡುಕೊಳ್ಳುವ ದೃಷ್ಟಿಯಲ್ಲಿ ಅರವಿಂದ ಲಿಂಬಾವಳಿ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತನಾಡಿದ್ದಾರೆ. ಇನ್ನೂ ಕೆಲವರನ್ನು ಕರೆಸಿ ಮಾತನಾಡಬಹುದು. ವಿಜಯೇಂದ್ರಗೂ ಬುದ್ದಿವಾದ ಹೇಳಬಹುದು. ಸದ್ಯದ ಮಾಹಿತಿ ಪ್ರಕಾರ ಭಿನ್ನರ ಪೈಕಿ ಒಬ್ಬರಿಗೆ ರಾಷ್ಟ್ರೀಯ ಬಿಜೆಪಿಯಲ್ಲಿ ಪುನರ್ವಸತಿ ದೊರೆತರೂ ಅಚ್ಚರಿಯಿಲ್ಲ.

ವಿರೋಧಿಗಳ ವಿಶ್ವಾಸ ಗಳಿಸದ ವಿಜಯೇಂದ್ರ!

ವಿಜಯೇಂದ್ರರ ಅನಾನುಭವ, ಅವಸರ, ತಾನು ಮಾಡಿದ್ದೇ ಸರಿ ಎಂಬ ಧೋರಣೆ, ತನ್ನ ಜೊತೆಗಿರುವವರು ಮಾತ್ರ ಪಕ್ಷನಿಷ್ಠರೆಂಬ ಹುಸಿ ನಂಬಿಕೆಗಳು ಕೂಡ ರಾಜ್ಯ ಬಿಜೆಪಿಯ ಇಂದಿನ ಶೋಚನೀಯ ಸ್ಥಿತಿಗೆ ಪ್ರಮುಖ ಕಾರಣಗಳು. ಇವೆಲ್ಲವನ್ನೂ ಮೀರಿ ಅವರು ಮುಂದೆ ಇದೇ ವಿರೋಧಿಗಳ ಜೊತೆ ಕೆಲಸ ಮಾಡಬೇಕಿದೆ. ಆದರೂ ಮಾತಿನಲ್ಲಿ ಯುದ್ಧ ಮಾಡಲು ಅಧ್ಯಕ್ಷನಾಗಿಲ್ಲ ಎನ್ನುವ ಅವರು ವಿರೋಧಿಗಳ ವಿಶ್ವಾಸ ಗಳಿಸಲು ಸಿದ್ದರಿಲ್ಲ. ಅದಕ್ಕೆ ಅಡ್ಡ ಬರುತ್ತಿರುವುದು ಪ್ರತಿಷ್ಠೆ. ನಾನೇಕೆ ಅವರಿಗೆ ಕಾಲ್ ಮಾಡಲಿ, ಅವರನ್ನೇಕೆ ಕೇಳಲಿ, ನಮ್ಮಪ್ಪನನ್ನು ಬೈದವರ ಮನೆ ಬಾಗಿಲಿಗೆ ಏಕೆ ಹೋಗಲಿ ಎಂಬ ಚಿಲ್ಲರೆ ತಕರಾರುಗಳು. ವಿಪರ್ಯಾಸ ಏನೆಂದರೆ ಇದೇ ಅಪ್ಪನನ್ನು ಅನ್ನಬಾರದ ಪದಗಳಿಂದ ಬೈದ, ಅಧಿಕಾರ ಕೊಡದ ದೇವೇಗೌಡ, ಕುಮಾರಸ್ವಾಮಿ ಜೊತೆಗೆ ಸಮಸ್ಯೆ ಇಲ್ಲ. ಬೇಕಿದ್ದರೆ ಅವರ ಮನೆಗೆ ಹೋಗುತ್ತಾರೆ, ಕೈ-ಕಾಲು ಹಿಡಿಯುತ್ತಾರೆ.

ಕ್ರೆಡಿಟ್ ವಾರ್ತಾ ಭಾರತಿ

Tags: #santoshb l santhoshb l santhosh speechbjp santhosh b lBL Santhoshbl santhosh bjpbl santhosh recent speechbl santhosh speechBL Santoshbl santosh bjpbl santosh bjp speechbl santosh is takingbl santosh newsbl santosh news kannadabl santosh news today kannadabl santosh to active politicsbl santosh vistct ravi on bl santoshHD Devegowdarss leader bl santhoshsantoshsiddaramaiah on bl santosh
Previous Post

ಕಾಲ್ತುಳಿತದ ದಿನ ಪ್ರಯಾಗರಾಜ್ ನಲ್ಲಿ 16 ಸಾವಿರ ಫೋನ್ ನಂಬರ್ಸ್ ಆಕ್ಟಿವ್..! ಇನ್ವೆಸ್ಟಿಗೇಷನ್ ನಲ್ಲಿ ಶಾಕಿಂಗ್ ಅಂಶ ಬಯಲು ..! 

Next Post

ಶರಣ್ ಅಭಿನಯದ “ಛೂಮಂತರ್”ಗೆ 25ದಿನಗಳ ಸಂಭ್ರಮ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ಶರಣ್ ಅಭಿನಯದ “ಛೂಮಂತರ್”ಗೆ 25ದಿನಗಳ ಸಂಭ್ರಮ

ಶರಣ್ ಅಭಿನಯದ "ಛೂಮಂತರ್"ಗೆ 25ದಿನಗಳ ಸಂಭ್ರಮ

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada