• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೆಟ್ರೋ ಪ್ರಯಾಣಿಕರಿಗೆ BMRCL ನಿಂದ ಗುಡ್ ನ್ಯೂಸ್ : ಇನ್ಮುಂದೆ ಮೆಟ್ರೋಗೆ ಮೊಬೈಲ್ ಟಿಕೆಟ್

ಕರ್ಣ by ಕರ್ಣ
August 26, 2022
in ಕರ್ನಾಟಕ
0
ಮೆಟ್ರೋ ಪ್ರಯಾಣಿಕರಿಗೆ BMRCL ನಿಂದ ಗುಡ್ ನ್ಯೂಸ್ : ಇನ್ಮುಂದೆ ಮೆಟ್ರೋಗೆ ಮೊಬೈಲ್ ಟಿಕೆಟ್
Share on WhatsAppShare on FacebookShare on Telegram

ಆಫೀಸಿಗೆ ಹೋಗುವವರಿಂದ ಹಿಡಿದು ಕಾಲೇಜಿಗೆ ಹೋಗುವವರು, ಮಕ್ಕಳು, ದೊಡ್ಡವರು ಎಂಬ ಬೇಧವಿಲ್ಲದೇ ಬಹುತೇಕರು ಸುಲಭವಾದ ಸಂಚಾರಕ್ಕೆ ಬಳಸುವ ಸಾರಿಗೆ ಅಂದರೆ ಅದು ನಮ್ಮ ಮೆಟ್ರೋ. ಯಾವುದೇ ಟ್ರಾಫಿಕ್ ಕಿರಿಕಿರಿಯಿಲ್ಲದೇ ಸಿಗ್ನಲ್ ತೊಂದರೆ ಇಲ್ಲದೆ  ಶೀಘ್ರವಾಗಿ ಜನ ಟ್ರಾವೆಲ್ ಮಾಡ್ತಾರೆ. ಆದರೆ ದಿನೇ ದಿನೇ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕಡಿಮೆ ಆಗಿರೋದ್ರಿಂದ BMRCL ಪ್ರಯಾಣಿಕರನ್ನು ಸೆಳೆಯಲು ಹೊಸ ಪ್ಲಾನ್ ಒಂದನ್ನು ಪರಿಚಯಿಸಲು ಹೊರಟಿದೆ.

ADVERTISEMENT

ನಮ್ಮ ಮೆಟ್ರೋ ಆಗ್ತಿದೆ ಇನ್ನಷ್ಟು ಸ್ಮಾರ್ಟ್ ಹಾಗೂ ಯೂಸರ್ ಫ್ರೆಂಡ್ಲಿ

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಬೇಕು ಅನ್ನೋ ಕಾರಣಕ್ಕೆ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. ಈಗಾಗಲೇ ಮೆಟ್ರೋಗೆ ಜನ ಫಿದಾ ಆಗಿದ್ದಾರೆ. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕೆ ಹಲವು ವಿನೂತನ ಯೋಜನೆಗಳನ್ನು BMRCL ಜಾರಿ ಮಾಡುತ್ತಾ ಬರುತ್ತಿದೆ. ಇದೀಗ ಮತ್ತೊಂದು ಹೊಸ ಯೋಜನೆ ಜಾರಿ ಮಾಡಲು ಮುಂದಾಗಿದೆ. ಸದ್ಯ ಬೆಂಗಳೂರು ಮೆಟ್ರೋದಲ್ಲಿ ಟೋಕನ್ ಹಾಗೂ ಸ್ಮಾರ್ಟ್ ಕಾರ್ಡ್ ತೆಗೆದುಕೊಳ್ಳಬೇಕು ಅಂತ ಉದ್ದುದ್ದ ಸಾಲಿನಲ್ಲಿ ನಿಂತುಕೊಳ್ಳಬೇಕು. ಆದರೆ ಇನ್ಮುಂದೆ ಈ ಇಂತಹಾ ಕಿರಿಕಿರಿಗೆ ಇರೋದಿಲ್ಲ.

ನಮ್ಮ ಮೆಟ್ರೋದಲ್ಲಿ ಮೊಬೈಲ್ ಟೆಕೆಟ್ ಜಾರಿ

BMRCL ಮೊಬೈಲ್ ಪೋನ್‌ನಲ್ಲಿ ನಮ್ಮ ಮೆಟ್ರೋ ಟಿಕೆಟ್ ಲಭ್ಯವಾಗುವಂತೆ ಮಾಡಲಿದೆ. ಇದಕ್ಕೆಂದೇ ನಮ್ಮ ಮೆಟ್ರೋ ನೂತನ ಆ್ಯಪ್ ವಿನ್ಯಾಸಗೊಳಿಸುತ್ತಿದೆ. ಸರತಿ ಸಾಲಿನಲ್ಲಿ ನಿಂತು ಟೋಕನ್ ಹಾಗೂ ಸ್ಮಾರ್ಟ್ ಕಾರ್ಡ್ ಪಡೆಯಬೇಕಿತ್ತು. 2015ರಲ್ಲೇ ಎಎಫ್ಸಿ ಗೇಟ್ಗಳಲ್ಲಿ ಕ್ಯೂ ಆರ್ ಟಿಕೆಟ್ ವ್ಯವಸ್ಥೆಗೆ ಯೋಜನೆ ಹಾಕಲಾಗಿತ್ತು. ದೆಹಲಿ ಮೆಟ್ರೋದಲ್ಲಿ ಈಗಾಗಲೇ ಈ ವ್ಯವಸ್ಥೆ ಅಳವಡಿಸಿ ಯಶಸ್ವಿಯಾಗಿದೆ. ಇದೀಗ ಅದೇ ಮಾದರಿಯಲ್ಲಿ ಕೆಲವೇ ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರಲಿದೆ. 

ಹೇಗೆ ಕಾರ್ಯನಿರ್ವಹಿಸಲಿದೆ ?

ಮೊದಲು ಪ್ರಯಾಣಿಕರು ತಮ್ಮ ಸ್ಮಾರ್ಟ್ ಪೋನ್ನಲ್ಲಿ ಮೊಬೈಲ್ ಅಪ್ಲಿಕೇಷನ್ ಡೌನ್ ಲೋಡ್ ಮಾಡಬೇಕು. ನಂತರ ತಾವು ಪ್ರಯಾಣಿಸುವ ಮಾರ್ಗ ಮತ್ತು ಎಷ್ಟು ಸಂಖ್ಯೆಯ ಜನರು ಪ್ರಯಾಣಿಸುತ್ತಾರೆ ಎಂಬುದನ್ನು ನಮೂದಿಸಬೇಕು. ನಂತರ ತಾವು ಬಳಸುವ UPI ಪೇಮೆಂಟ್ ಮಾದರಿಯಲ್ಲಿ ಟಿಕೆಟ್ ದರ ಪಾವತಿಸವೇಕು.‌ ಕೂಡಲೇ ಪ್ರಯಾಣದ ಮೊತ್ತವು ಆನ್ಲೈನ್ ಮೂಲಕ BMRCLಗೆ ಜಮಾ ಆಗಲಿದೆ.‌ ಬಳಿಕ ಅಪ್ಲಿಕೇಷನ್ ಮೂಲಕ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಬೇಕು. ಕ್ಯೂ ಆರ್ ಕೋಡ್ ಗಳು ಪ್ರವೇಶ ದ್ವಾರದ ಎಎಫ್ಸಿ ಗೇಟ್ ಗಳಲ್ಲಿ ಲಭ್ಯವಿರಲಿದೆ.‌ ಈ ವೇಳೆ ಪೇಮೆಂಟ್ ಸಕ್ಸಸ್ ಫುಲ್‌ ಆಗಿದ್ದರೆ ಗೇಟ್ ಗಳು ಓಪನ್ ಆಗಲಿದೆ. ಹೀಗೆ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲದೆ ಟಿಕೆಟ್ ಪಡೆಯಬಹುದು.‌ ಪ್ರಯಾಣಿಕರು ತಾವು ಇಳಿಯುವ ಸ್ಥಳದಲ್ಲಿ ಇದರ ಅಗತ್ಯವಿರುವುದಿಲ್ಲ.

ಹೌದು, ನಿಮ್ಮ ಮೊಬೈಲ್ ಮೂಲಕವೇ ಮೆಟ್ರೋ ಟಿಕೆಟ್ ಖರೀದಿಸುವ ವ್ಯವಸ್ಥೆಯನ್ನು ಮೆಟ್ರೋ ನಿಗಮ ಪರಿಚಯ ಮಾಡ್ತಿದೆ. ಪ್ರಯಾಣಿಕರು ತಮ್ಮ ಸ್ಮಾರ್ಟ್ ಪೋನ್ನಲ್ಲೇ ಮೊಬೈಲ್ ಅಪ್ಲಿಕೇಷನ್ ಡೌನ್ ಲೋಡ್ ಮಾಡಿ, ನಂತರ ತಾವು ಪ್ರಯಾಣಿಸುವ ಮಾರ್ಗ ಮತ್ತು ಎಷ್ಟು ಸಂಖ್ಯೆಯ ಜನರು ಪ್ರಯಾಣಿಸುತ್ತಾರೆ ಎಂಬುದನ್ನು ನಮೂದಿಸಬೇಕಾಗುತ್ತದೆ. ನಂತರ ಅಪ್ಲಿಕೇಷನ್ ಮೂಲಕ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಬೇಕು. ಕೂಡಲೇ ಪ್ರಯಾಣದ ಮೊತ್ತವು ಆನ್ಲೈನ್ ಮೂಲಕ BMRCLಗೆ ಜಮಾ ಆಗಲಿದೆ. ಇಂತಹ ನೂತನ ವ್ಯವಸ್ಥೆಯನ್ನು ತರಲು BMRCL ಮುಂದಾಗಿದೆ. 

2015ರ ಪೂರ್ವದಲ್ಲಿ ಅಳವಡಿಸಿದ ಎಎಫ್ಸಿ ಗೇಟ್ಗಳಲ್ಲಿ ಕ್ಯೂ ಆರ್ ಟಿಕೆಟ್ ವ್ಯವಸ್ಥೆಗೆ ಸ್ಪಂದಿಸುವುದಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿತ್ತು. ಹಳೆಯ ದ್ವಾರಗಳನ್ನು ಕ್ಯೂ ಆರ್ ವ್ಯವಸ್ಥೆಗೆ ಸ್ಪಂದಿಸುವಂತೆ ಸಾಫ್ಟ್ ವೇರ್ ಬದಲಿಸಲಾಗುವುದು. ದೆಹಲಿ ಮೆಟ್ರೋದಲ್ಲಿ ಈಗಾಗಲೇ ಈ ವ್ಯವಸ್ಥೆ ಅಳವಡಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಮಾತ್ರ ಮೊಬೈಲ್ ಟಿಕೆಟ್ ಸೇವೆ ಲಭ್ಯವಿದೆ. ಇದೀಗ ಮೆಟ್ರೋದಲ್ಲೂ ಲಭ್ಯವಾಗಲಿದೆ. ಕೊರೊನಾದಿಂದ ಪ್ರಯಾಣಿಕ ಸಂಖ್ಯೆ ಮೆಟ್ರೋ ದಲ್ಲಿ ಕುಸಿತವಾಗಿದೆ. ಆದರೆ ಇದೀಗ ಮತ್ತೆ ಪ್ರಯಾಣಿಕರನ್ನು ಸೆಳೆಯಲು ನಮ್ಮ ಮೆಟ್ರೋ ಹೊಸ.. ಹೊಸ ಪ್ಲಾನ್ ಗಳನ್ನು ಪರಿಚಯಿಸಲು ಮುಂದಾಗಿದ್ದು, BMRCLನ ಈ ಪ್ಲಾನ್ ಆದಷ್ಟು ಬೇಗ ಜಾರಿಯಾಗಲಿ. ಜನ ಸಾಮಾನ್ಯರಿಗೆ ಈ ವಿನೂತನ ಸೇವೆ ಎಷ್ಟರ ಮಟ್ಟಿಗೆ ಸದ್ಭಳಕೆ ಆಗಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಮಿಷನ್ ಖಂಡಿಸಿ ಒಂದು ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ : ಮಾಜಿ ಸಿಎಂ ಹೆಚ್.ಡಿ.ಕೆ

Next Post

ಗುಜರಾತ್ ಚುನಾವಣೆ; ಫಲಿಸುವುದೇ ಕಾಂಗ್ರೆಸ್ನ ‘ರಾಜಸ್ಥಾನ ಮಾಡೆಲ್’ ತಂತ್ರಗಾರಿಕೆ?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಗುಜರಾತ್ ಚುನಾವಣೆ; ಫಲಿಸುವುದೇ ಕಾಂಗ್ರೆಸ್ನ ‘ರಾಜಸ್ಥಾನ ಮಾಡೆಲ್’ ತಂತ್ರಗಾರಿಕೆ?

ಗುಜರಾತ್ ಚುನಾವಣೆ; ಫಲಿಸುವುದೇ ಕಾಂಗ್ರೆಸ್ನ ‘ರಾಜಸ್ಥಾನ ಮಾಡೆಲ್’ ತಂತ್ರಗಾರಿಕೆ?

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada