ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ಆಚರಣೆಗೂ ಎರಡು ವಾರಗಳ ಮೊದಲೇ ದೆಹಲಿಯ ಘಾಜಿಪುರ ಹೋವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆಯಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಮಾತನಾಡಿರುವ ದೆಹಲಿ ಪೊಲೀಶ್ ಆಯುಕ್ತ ರಾಕೇಶ್ ಅಸ್ತಾನಾ, ಯಾವುದೇ ಸ್ಪೋಟ ಸಂಭವಿಸಿಲ್ಲ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದ್ದು ಆದಷ್ಟು ಬೇಗ ಘಟನೆಯಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಲಾಗುವುದು ಎಂದು ತಿಳಿಸಿದ್ದಾರೆ.

ದೆಹಲಿ ವಿಶೇಷ ಪೊಲೀಸ್ ಘಟಕ, ಅಗ್ನಿಶಾಮಕ ದಳ ಹಾಗೂ ಬಾಂಬ್ ಸ್ಕ್ವಾಡ್ ಸ್ಥಳದಲ್ಲೇ ಬೀಡು ಬಿಟ್ಟಿದೆ.