• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಾವೋವಾದಿ ನಾಯಕಿ ನರ್ಮದಾ ಅಕ್ಕ ಪ್ಯಾಲಿಯೇಟಿವ್ ಆರೈಕೆ ಕೋರಿ ಸಲ್ಲಿಸಿದ್ದ ಮನವಿ ಕಾಯ್ದಿರಿಸಿದ ಬಾಂಬೆ ಹೈಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
September 7, 2021
in ದೇಶ
0
ಮಾವೋವಾದಿ ನಾಯಕಿ ನರ್ಮದಾ ಅಕ್ಕ ಪ್ಯಾಲಿಯೇಟಿವ್ ಆರೈಕೆ ಕೋರಿ ಸಲ್ಲಿಸಿದ್ದ ಮನವಿ ಕಾಯ್ದಿರಿಸಿದ ಬಾಂಬೆ ಹೈಕೋರ್ಟ್
Share on WhatsAppShare on FacebookShare on Telegram

ಮಾರಣಾಂತಿಕ ಕ್ಯಾನ್ಸರ್ನಿಂದ ಬಳಲುತ್ತಿರುವ ಮಾವೋವಾದಿ ನಾಯಕಿ ನರ್ಮದಾ ಅಕ್ಕ ಅವರು ಅಂತಿಮ ದಿನಗಳ ಆರೈಕೆ ಕೇಂದ್ರದಲ್ಲಿ ಪ್ಯಾಲಿಯೇಟಿವ್ ಆರೈಕೆ ಪಡೆಯಲು ಕೋರಿ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ಮಂಗಳವಾರ ಬಾಂಬೆ ಹೈಕೋರ್ಟ್ ಆಲಿಸಿದ್ದು ಈ ಕುರಿತ ತೀರ್ಪನ್ನು ಕಾಯ್ದಿರಿಸಿದೆ.

ADVERTISEMENT

ನಿರ್ಮಲಾ ಅವರನ್ನು 2019ರಲ್ಲಿ ಗಡ್ಚಿರೋಲಿಯಲ್ಲಿ ನಡೆದ ನಕ್ಸಲ್ ದಾಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದರು. ಈ ದಾಳಿಯಲ್ಲಿ ಹದಿನೈದು ಪೊಲೀಸರು ಹಾಗೂ ಓರ್ವ ಜನಸಾಮಾನ್ಯ ಸಾವನ್ನಪ್ಪಿದ್ದರು.

ವಕೀಲ ಯುಗ್ ಮೋಹಿತ್ ಚೌಧರಿ ಮೂಲಕ ಸಲ್ಲಿಸಲಾಗಿರುವ ತಮ್ಮ ಮನವಿಯಲ್ಲಿ ನರ್ಮದಾ ಅವರು 2018ರಲ್ಲಿ ತಾವು ಸ್ತನ ಕ್ಯಾನ್ಸರ್ಗೆ ತುತ್ತಾಗಿರುವ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿತ್ತು. 2019ರಲ್ಲಿ ಮಹಾರಾಷ್ಟ್ರ ಪೊಲೀಸರು ತಮ್ಮನ್ನು ಅಕ್ರಮವಾಗಿ ಬಂಧನದಲ್ಲಿರಿಸಿದ ಕಾರಣ ಕಿಮೊಥೆರಪಿ ಮಾಡಿಸಿಕೊಳ್ಳಲು ಸಾಧ್ಯವಾಗಿಲಿಲ್ಲ. ಹಾಗಾಗಿ ಆರೋಗ್ಯ ಪರಿಸ್ಥಿತಿ ಹದಗೆಡತೊಡಗಿತು ಎಂದು ತಿಳಿಸಿದ್ದಾರೆ.

ನರ್ಮದಾ ಅವರ ಪರವಾಗಿ ಹಾಜರಾದ ವಕೀಲೆ ಪಯೋಶಿ ರಾಯ್ ಅವರು, ನರ್ಮದಾ ಅವರು ಕ್ಯಾನ್ಸರ್ನ ನಾಲ್ಕನೇ ಹಂತದಲ್ಲಿದ್ದಾರೆ. ಮೂಳೆಗಳು ಹಾಗೂ ಶ್ವಾಸಕೋಶದ ಬಹು ಸಮಸ್ಯೆಗಳಿಂದ ನರಳುತ್ತಿದ್ದಾರೆ. ಅವರನ್ನು ಕೈದಿಗಳ ಸಾಂದ್ರತೆ ಹೆಚ್ಚಿರುವ ಜೈಲಿನಲ್ಲಿರಿಸಲಾಗಿದ್ದು ಬಿಸಿ ನೀರು, ಶೌಚಾಲಯ, ವೈದ್ಯಕೀಯ ಸೌಕರ್ಯಗಳಿಲ್ಲದೆ ಅವರು ನೆಲದ ಮೇಲೆ ಮಲಗುವಂತಾಗಿದೆ ಎಂದು ವಿವರಿಸಿದ್ದಾರೆ.

ಈ ಪರಿಸ್ಥಿತಿಯಲ್ಲಿ ಅವರಿಗೆ ಪ್ಯಾಲಿಯೇಟಿವ್ ಕೇರ್ ಅವಶ್ಯಕತೆ ಇದ್ದು ಅವರಿಗೆ ತಮ್ಮ ಪತಿ ಹಾಗೂ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇತರ ಆರೋಪಿಗಳನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದ್ದಾರೆ.

ವಿಚಾರಣೆ ವೇಳೆ ವಕೀಲೆ ಪಯೋಶಿ ರಾಯ್ ಅವರು “ಅರ್ಜಿದಾರರು ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ” ಎಂದು ಪದೇ ಪದೇ ಹೇಳುತ್ತಿದ್ದನ್ನು ಗಮನಿಸಿದ ನ್ಯಾ. ಎಸ್ ಎಸ್ ಶಿಂಧೆ ಹಾಗೂ ಎನ್ ಜೆ ಜಾಮ್ದಾರ್ ಅವರಿದ್ದ ವಿಭಾಗೀಯ ಪೀಠವು ಅವರಿಗೆ ಹಾಗೆ ಪದೇಪದೇ ಹೇಳದಂತೆ ಹಾಗೂ ಆಶಾವಾದಿಯಾಗಿರುವಂತೆ ಸೂಚಿಸಿ,. “ನೀವು ಆಶಾವಾದಿಯಾಗಿರಬೇಕು. ಅವರ ಜೀವನವನ್ನು ಏಕೆ ಕೆಲವೇ ದಿನಗಳಿಗೆ ನಿರ್ಬಂಧಿಸುತ್ತಿದ್ದೀರಿ? ಅವರು ಹೆಚ್ಚು ಕಾಲ ಬದುಕಬಹುದು. ನಾವೆಲ್ಲರೂ ಮೊದಲು ಮನುಷ್ಯರು ನಂತರ ನಾವು ನ್ಯಾಯಮೂರ್ತಿಗಳು” ಎಂದು ಹೇಳಿದ್ದಾರೆ.

ಅಲ್ಲದೆ, “ವೈಯಕ್ತಿಕ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ ಸಂವಿಧಾನದ 21ನೇ ವಿಧಿಯು ಬಂಧಿಗಳಿಗೂ ಸೇರಿದಂತೆ ಎಲ್ಲರಿಗೂ ಅನ್ವಯವಾಗುತ್ತದೆ. ನಾವು ಪ್ರಕರಣವನ್ನು ಎಲ್ಲ ಕೋನಗಳಿಂದಲೂ ಪರಿಗಣಿಸುತ್ತೇವೆ. ಇಂತಹ ಅನೇಕ ಪ್ರಕರಣಗಳಲ್ಲಿನ ತೀರ್ಪುಗಳು ನಮ್ಮ ಮುಂದಿವೆ. ನಾವು ವಿವೇಚನೆಯನ್ನು ಬಳಸಬೇಕಾಗುತ್ತದೆ,” ಎಂದು ಪೀಠವು ತಿಳಿಸಿದೆ.

ಮತ್ತೊಂದೆಡೆ, ಸರ್ಕಾರಿ ವಿಶೇಷ ಅಭಿಯೋಜಕರಾದ ಸಂಗೀತಾ ಶಿಂಧೆ ಅವರು ನರ್ಮದಾ ವಕೀಲರು ಜೈಲಿನ ಸ್ಥಿತಿಗತಿಗಳ ಬಗ್ಗೆ ಹಾಗೂ ಆರೈಕೆಯಲ್ಲಿನ ಲೋಪದ ಬಗ್ಗೆ ಮಾಡಿದ ಆರೋಪಗಳನ್ನು ತೀವ್ರವಾಗಿ ವಿರೋಧಿಸಿದ್ದಾರೆ. ನರ್ಮದಾ ಅವರಿಗೆ ಟಾಟಾ ಸ್ಮಾರಕ ಆರೈಕೆ ಕೇಂದ್ರದಲ್ಲಿ ವಾರದಲ್ಲಿ ಮೂರು ಬಾರಿ ತಪ್ಪದೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಅವರನ್ನು ಉಪಚರಿಸಲು ಇಬ್ಬರು ಸಹಕೈದಿಗಳನ್ನು ಸಹ ಇರಿಸಿರುವ ಬಗ್ಗೆ ತಿಳಿಸಿದ್ದಾರೆ.

ಈ ವೇಳೆ ನರ್ಮದಾ ಪರ ವಕೀಲೆ ಪಯೋಶಿ ರಾಯ್ ಅವರು, ಅವರು ಗುಣಮುಖರಾಗುವ ಹಂತದಿಂದ ದೂರ ಸಾಗಿದ್ದಾರೆ. ಕಿಮೋಥೆರಪಿ ಚಿಕಿತ್ಸೆಯು ಕೇವಲ ನೋವು ಶಮನಕ್ಕೆ ಮಾತ್ರವೇ ಮಾಡಲಾಗುತ್ತಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಂತಿಮವಾಗಿ ಪೀಠವು ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಕಾಯ್ದಿರಿಸಿತು. ಇದರ ಜೊತೆ ಬಾಂಬ್ ಸ್ಫೋಟ ಪ್ರಕರಣದಲಲ್ಲಿ ಅವರು ಆರೋಪಿ ಎನ್ನುವುದನ್ನು ನೆನಪಿಸಿದರು.

Tags: Bombay High courtNarmada Akkapalliative carereserves verdict
Previous Post

ಅಗತ್ಯ ವಸ್ತುಗಳ ಬೆಲೆ ಏರಿಕೆ: ಮಹಿಳಾ ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ

Next Post

ಸಂಪುಟದಲ್ಲಿ ಉಳಿದ ನಾಲ್ಕು ಸಚಿವ ಸ್ಥಾನಗಳ ಭರ್ತಿಗಾಗಿ ಬೊಮ್ಮಾಯಿ ಸರ್ಕಸ್; ಹೈಕಮಾಂಡ್ ಜತೆ ಚರ್ಚೆ ಸಾಧ್ಯತೆ

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
Next Post
ವರಿಷ್ಠರು ಒಪ್ಪಿದರೆ ಬುಧವಾರ ನೂತನ ಸಚಿವ ಸಂಪುಟ – ಸಿಎಂ ಬೊಮ್ಮಾಯಿ

ಸಂಪುಟದಲ್ಲಿ ಉಳಿದ ನಾಲ್ಕು ಸಚಿವ ಸ್ಥಾನಗಳ ಭರ್ತಿಗಾಗಿ ಬೊಮ್ಮಾಯಿ ಸರ್ಕಸ್; ಹೈಕಮಾಂಡ್ ಜತೆ ಚರ್ಚೆ ಸಾಧ್ಯತೆ

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada