ಸಚಿವ ಸಂಪುಟ ವಿಸ್ತರಣೆ ಕುರಿತು ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ಧಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಹೈಕಕಾಂಡ್ ನೀಡುವ ಸಲಹೆಗಳನ್ನು ಅಗತ್ಯವಾಗಿ ಪಾಲಿಸಲಾಗುವುದು ರಾಜ್ಯಸಭೆ ಹಾಗು ವಿಧಾನಪರಿಷತ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ವಿಜಯೇಂದ್ರಗೆ ಪರಿಷತ್ ಸ್ಥಾನ ನೀಡಿ- ಮಂತ್ರಿ ಮಾಡುವ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸುವುದರ ಬಗ್ಗೆ ಗಮನಹರಿಸಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರ ಗಂಡಸ್ತನ ತೋರಿಸುತ್ತಿಲ್ಲ ಎಂಬ ಹೋರಾಟಗಾರರಿಗೆ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಹಿಜಾಬ್, ಹಲಾಲ್ ಆಜಾನ್ ವಿವಾದದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದೇವೆ.
ಮುಂದುವರೆದು, ದಕ್ಷ, ಜನಪರ ಆಡಳಿತ ನೀಡುತ್ತಿದ್ದೇವೆ. ವಿರೋಧಿಗಳಿಗೆ ಅದೇ ನಮ್ಮ ಉತ್ತರ. ಸರ್ಕಾರದ ಗಂಡುಸತನ ತೋರಿಸುತ್ತಿಲ್ಲ ಎನ್ನೋ ಆರೋಪಕ್ಕೆ ಸಿಎಂ ತೀರುಗೇಟು ನೀಡಿದ್ದಾರೆ.