• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಮದಾಸ್ ವಿರುದ್ಧ ಬ್ರಾಹ್ಮಣ ಮುಖಂಡರು ಗರಂ: ಕೆ.ಆರ್ ಕ್ಷೇತ್ರದಲ್ಲಿ ಟಿಕೆಟ್ ಬೇಡ ಎಂದು ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 23, 2023
in Top Story, ಇದೀಗ
0
ರಾಮದಾಸ್ ವಿರುದ್ಧ ಬ್ರಾಹ್ಮಣ ಮುಖಂಡರು ಗರಂ: ಕೆ.ಆರ್ ಕ್ಷೇತ್ರದಲ್ಲಿ ಟಿಕೆಟ್ ಬೇಡ ಎಂದು ಕಿಡಿ
Share on WhatsAppShare on FacebookShare on Telegram

ಮೈಸೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, MLA ಟಿಕೆಟ್ ಎಲ್ಲೆಡೆ ಸಿಕ್ಕಾಪಟ್ಟೆ ಲಾಬಿ ನಡೆಸಲಾಗುತ್ತಿದೆ. ಬಿಜೆಪಿಯ ಭದ್ರಕೋಟೆ ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ವಿಚಾರವಾಗಿ ಅಪಸ್ವರ ಕೇಳಿಬಂದಿದೆ.

ADVERTISEMENT

ಕೆ.ಆರ್ ಕ್ಷೇತ್ರದಲ್ಲಿ ಶಾಸಕ ರಾಮದಾಸ್’ಗೆ ಬಿಜೆಪಿ ಟಿಕೆಟ್ ಬೇಡ. ಚುನಾವಣೆಯಲ್ಲಿ  ರಾಮದಾಸ್ ಬದಲು ಬೇರೊಬ್ಬ ಬ್ರಾಹ್ಮಣರಿಗೆ ಟಿಕೆಟ್ ಕೊಡಿ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್ ಆಗ್ರಹ ಮಾಡಿದ್ದಾರೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ರಾಮದಾಸ್ 6 ಬಾರಿ ಸ್ಪರ್ಧಿಸಿ 4 ಬಾರಿ ಗೆದ್ದಿದ್ದಾರೆ. ಕುಲ ಪ್ರೇಮದಿಂದಾಗಿ ರಾಮದಾಸ್ ರನ್ನು ಬೆಂಬಲಿಸಿದ್ದೇವೆ. ವಿಶ್ವಾಸ, ನಂಬಿಕೆ, ಪ್ರೀತಿ, ತೋರಿಸಿದರೂ ರಾಮದಾಸ್ ಸ್ಪಂದಿಸುತ್ತಿಲ್ಲ. ರಾಮದಾಸ್ ಬದಲು ಬೇರೆಯವರಿಗೆ ಬಿಜೆಪಿ ಟಿಕೆಟ್ ಕೊಡಿ ಎಂದು ಒತ್ತಾಯ ಮಾಡಿದ್ದಾರೆ .

ರಾಮದಾಸ್ ಸ್ಪಂದಿಸುತ್ತಿಲ್ಲ..

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್ ಎ ರಾಮದಾಸ್ ಬದಲು ಬೇರೊಬ್ಬ ಬ್ರಾಹ್ಮಣ ನಾಯಕರಿಗೆ ಟಿಕೆಟ್ ಕೊಡಬೇಕು. ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿಯಿಂದ ಒಬ್ಬ ಆದರ್ಶ, ಯೋಗ್ಯ, ಶಿಷ್ಟ, ಸಜ್ಜನ, ಸರಳ, ಸ್ಪಂದಿಸುವ, ಗೆಲ್ಲುವ, ಜನಪ್ರಿಯ ನೂತನ ಬ್ರಾಹ್ಮಣ ಅಭ್ಯರ್ಥಿಗೆ ಟಿಕೆಟ್ ನೀಡಿ ಬಿ ಫಾರಂ ನೀಡಬೇಕು. ಒಂದು ವೇಳೆ ಬಿಜೆಪಿಗೆ ರಾಮದಾಸ್ ಅನಿವಾರ್ಯವಾಗಿದ್ದರೆ ಅವರಿಗೆ ರಾಜ್ಯ ಅಥವಾ ರಾಷ್ಟ್ರ ಮಟ್ಟದಲ್ಲಿ ಇನ್ನೂ ಹೆಚ್ಚಿನ ಸ್ಥಾನಮಾನ ನೀಡಿ ಅವರ ಸೇವೆಯನ್ನು ಬಳಸಿಕೊಳ್ಳಲಿ ಎಂದು ಬ್ರಾಹ್ಮಣ ಸಮುದಾಯದ ಮುಖಂಡರು ಆಗ್ರಹಿಸಿದರು. .ಕೃಷ್ಣರಾಜ ಕ್ಷೇತ್ರದಲ್ಲಿ 75 ಸಾವಿರ ಬ್ರಾಹ್ಮಣ ಮತದಾರರಿದ್ದಾರೆ.

ಹಾಗಾಗಿ ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಮೂರು ಪಕ್ಷಗಳು ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು. ಆಗ ಆ ಮೂವರಲ್ಲಿ ಯೋಗ್ಯವಾದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಮುಖಂಡರು ಆಗ್ರಹಿಸಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ನಟರಾಜ ಜೋಯಿಸ್, ಮೇಲುಕೋಟೆ ವಂಗೀಪುರ ಮಠದ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ಹಿರಿಯ ಸಮಾಜ ಸೇವಕ ಕೆ ರಘುರಾಂ ವಾಜಪೇಯಿ, ಮೈಸೂರು ವಿಪ್ರ ಮಹಿಳಾ ಸಂಗಮದ ಅಧ್ಯಕ್ಷೆ ಡಾ ಲಕ್ಷ್ಮಿ, ಮೈಸೂರು ಬ್ರಾಹ್ಮಣ ಧರ್ಮ ಸಹಾಯ ಸಭಾದ ಅಧ್ಯಕ್ಷ ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು..

ಕೆಆರ್ ಕ್ಷೇತ್ರ ಬಿಜೆಪಿ ಭದ್ರಕೋಟೆ..

ಕಳೆದ 30 ವರ್ಷದಿಂದ ಬಿಜೆಪಿ ಕೆಆರ್ ಕ್ಷೇತ್ರದಲ್ಲಿ ಹೆಚ್ಚು ಪ್ರಭಾವ ಹೊಂದಿದೆ . ಒಂದು ರೀತಿಯಲ್ಲಿ ಬಿಜೆಪಿ ಭದ್ರಕೋಟೆ ಅಂತಾನೆ ಈ ಕ್ಷೇತ್ರವನ್ನ ಪರಿಗಣಿಸಲಾಗುತ್ತೆ . ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ಗೆ ಸಿಕ್ಕಾಪಟ್ಟೆ ಲಾಬಿ ಇದೆ. ಬಿಜೆಪಿ ಆಂತರಿಕ ಕಚ್ಚಾಟ ಕಾಂಗ್ರೆಸ್’ಗೆ ವರದಾನ ಆಗಲಿದೆ ಅಂತ ಕೂಡ ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡ್ತಿದ್ದಾರೆ.

Tags: brahmin leadersK R constituencyMysoreS A Ramadasಬಿಜೆಪಿ
Previous Post

ಜಲ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ ನೀಡಲು ಸರ್ಕಾರ ವಿಫಲ: ಹೆಚ್.ಡಿ.ಕುಮಾರಸ್ವಾಮಿ

Next Post

ಸಣ್ಣ ಪುಟ್ಟ ಅಸಮಾಧಾನದಿಂದ ಮೈಮರೆತರೆ ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಬರಲಿದೆ: ಪ್ರತಾಪ್ ಸಿಂಹ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಸಣ್ಣ ಪುಟ್ಟ ಅಸಮಾಧಾನದಿಂದ ಮೈಮರೆತರೆ ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಬರಲಿದೆ: ಪ್ರತಾಪ್ ಸಿಂಹ

ಸಣ್ಣ ಪುಟ್ಟ ಅಸಮಾಧಾನದಿಂದ ಮೈಮರೆತರೆ ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಬರಲಿದೆ: ಪ್ರತಾಪ್ ಸಿಂಹ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada