Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬ್ರಾಹ್ಮಣ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ಯಾರು..!? ಕೇಂದ್ರ ಮಾಡಿದ್ದೇನು..?

ಕೃಷ್ಣ ಮಣಿ

ಕೃಷ್ಣ ಮಣಿ

February 9, 2023
Share on FacebookShare on Twitter

ಬ್ರಾಹ್ಮಣ ವಿಚಾರ ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ನಡುವೆ, ಬ್ರಾಹ್ಮಣ ಸಮುದಾಯದ ಸ್ವಾಮೀಜಿ ಒಬ್ಬರಿಗೆ ಜೀವ ಬೆದರಿಕೆ ಬಂದಿದ್ದು, ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿದ ಕೇಂದ್ರ ಗೃಹ ಇಲಾಖೆ Y ಕೆಟಗರಿ ಭದ್ರತೆ ನೀಡುವ ನಿರ್ಧಾರ ಕೈಗೊಂಡಿದೆ. ಈಗಾಗಲೇ ಈ ಬಗ್ಗೆ ಮಠಕ್ಕೆ ರಾಜ್ಯ ಪೊಲೀಸ್ರು ಭದ್ರತೆ ಕೈಗೊಂಡಿದ್ದು, ಮುಂದಿನ ಎರಡು ದಿನಗಳಲ್ಲಿ ಕೇಂದ್ರ ಸರ್ಕಾರದ ಅಧಿಕೃತ ಆದೇಶ ಪತ್ರ ಮಠಕ್ಕೆ ಬರಲಿದೆ ಎನ್ನಲಾಗಿದೆ. ಯದುಗಿರಿ ಯತಿರಾಜ ಶ್ರೀಗಳಿಗೆ ಪ್ರಾಣ ಬೆದರಿಕೆ ಬಂದಿರುವ ಮಾಹಿತಿ ಹಿನ್ನೆಲೆ ಮಲ್ಲೇಶ್ವರಂನ ಸಂಪಿಗೆ ರಸ್ತೆಯ ಮಠದಲ್ಲಿ ಬಂದೋಬಸ್ತ್​ ಮಾಡಲಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಶೋಷಣೆಯ ಬಯಲೂ ಮಾರುಕಟ್ಟೆಯ ಸಂಕೋಲೆಯೂ..ನವ ಉದಾರವಾದದ ಚೌಕಟ್ಟಿನಲ್ಲಿ ಕಾರ್ಮಿಕ ಕಾಯ್ದೆಗಳನ್ನು ಮಾರುಕಟ್ಟೆಯೇ ನಿರ್ಧರಿಸುತ್ತದೆ

ಭಾಗ-1 : ಭಾರತದ ಬಹುತ್ವವನ್ನು ಗೌರವಿಸದ ಕೈಯಗಳಲ್ಲಿ ದೇಶದ ಆಡಳಿತ..!

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

ರಾಮಾನುಜ ಜೀಯರ್ ಸ್ವಾಮೀಜಿಗೆ ಕಿಡಿಗೇಡಿಗಳು ನಿರಂತರವಾಗಿ ಪ್ರಾಣಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮೂಲಭೂತವಾದಿ ಸಂಘಟನೆಗಳಿಂದ ಪ್ರಾಣ ಬೆದರಿಕೆ ಬರುತ್ತಿದ್ದ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಠದ ಟ್ರಸ್ಟಿಗಳು ಪತ್ರ ಬರೆದು ಮಾಹಿತಿ ನೀಡಲಾಗಿತ್ತು. ಕೇಂದ್ರ ಗೃಹ ಮಂತ್ರಿಗಳಿಗೆ ಮಾಹಿತಿ ಹೋಗುತ್ತಿದ್ದಂತೆ, ಬೆಂಗಳೂರಿನ ಮಲ್ಲೇಶ್ವರಂ, ತೆಲಂಗಾಣ, ಆಂಧ್ರದಲ್ಲಿರುವ ಮಠಕ್ಕೆ ಭದ್ರತೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಸ್ವಾಮೀಜಿ ಅವರಿಗೆ ಜೀವಭಯ ಇರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಕೂಡ ಮಾಹಿತಿ ಸಂಗ್ರಹಿಸಿತ್ತು.

ಕೆಲವು ಸಂಘಟನೆಗಳ ಬ್ಯಾನ್​ ನಿರ್ಧಾರದ ಎಫೆಕ್ಟ್​..!

ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಕೆಲವು ಸಮುದಾಯಕ್ಕೆ ಸೇರಿದ ಸಂಘಟನೆಗಳನ್ನು ನಿಷೇಧ ಮಾಡುವ ತೀರ್ಮಾನ ತೆಗೆದುಕೊಂಡಿತ್ತು. ಆ ನಿರ್ಧಾರದ ಬಳಿಕ ಸಾಕಷ್ಟು ಬೆದರಿಕೆ ಕರೆಗಳು ಬಂದಿದ್ದವು ಎನ್ನಲಾಗಿದೆ. ರಾಮಾನುಜ ಜೀಯರ್ ಸ್ವಾಮೀಜಿ​ ಸೇರಿದಂತೆ ಕೆಲವು ಬಲಪಂಥೀಯರು ಹಿಟ್​ಲಿಸ್ಟ್​ನಲ್ಲಿ ಇದ್ದಾರೆ ಎನ್ನಲಾಗಿತ್ತು. ಅದರಲ್ಲಿ ರಾಮಾನುಜ ಜೀಯರ್ ಸ್ವಾಮೀಜಿ ಕೂಡ ಒಬ್ಬರು. ಇದೇ ಕಾರಣದಿಂದ ಬೆದರಿಕೆ ಬರುತ್ತಿದ್ದ ಹಾಗೆ ಕೇಂದ್ರ ಸರ್ಕಾರದ ಗಮನ ಸೆಳೆದಿರುವ ಮಠದ ಟ್ರಸ್ಟಿಗಳು ಸ್ವಾಮೀಜಿಗಳ ಜೀವಕ್ಕೆ ಯಾವುದೇ ಸಂಕಷ್ಟ ಬಾರದಂತೆ ವೈ ಕೆಟಗರಿ ಭದ್ರತೆ ಸಿಗುವಂತೆ ನೋಡಿಕೊಂಡಿದ್ದಾರೆ.

Y ಕೆಟಗರಿ ಸೆಕ್ಯೂರಿಟಿ ಅಂದ್ರೆ ಹೇಗಿರುತ್ತೆ?

ಕೇಂದ್ರ ಗೃಹ ಇಲಾಖೆಯಡಿ ದೇಶದ ಗಣ್ಯರ ಭದ್ರತೆಗೆ Z ಕೆಟಗರಿ, Y ಕೆಟಗರಿ ಸೇರಿದಂತೆ ಸಾಕಷ್ಟು ಹಂತಗಳಲ್ಲಿ ಭದ್ರತೆ ನೀಡಲಾಗುತ್ತದೆ. ಗಣ್ಯರ ಸ್ಥಾನಮಾನ ಹಾಗು ಗಣ್ಯರಿಗೆ ಸಮಾಜದ ದುಷ್ಕರ್ಮಿಗಳಿಂದ ಇರುವ ಅಪಾಯದ ಆಧಾರದಲ್ಲಿ ಸೆಕ್ಯೂರಿಟಿ ನೀಡುವ ನಿರ್ಧಾರ ಮಾಡಲಾಗುದೆ. ಈ Y ಕೆಟಗರಿ ಭದ್ರತೆಯಲ್ಲಿ ಒಟ್ಟು 28 ಮಂದಿ ಭದ್ರತಾ ಸಿಬ್ಬಂದಿ ಇರಲಿದ್ದಾರದೆ. ಈ ಟೀಂನಲ್ಲಿ ಒಬ್ಬರು ಅಥವಾ ಇಬ್ಬರು ಕಮಾಂಡೋಗಳು ಇತ್ತರುತ್ತಾರೆ. ಇನ್ನುಳಿದಂತೆ ತರಬೇತಿ ಪಡೆದ ಪೊಲೀಸರು ಇರುತ್ತಾರೆ. ಯಾವ ಗಣ್ಯರಿಗೆ ಭದ್ರತೆ ಒದಗಿಸಲಾಗುತ್ತದೆಯೋ ಅವರಿಗೆ ಮೂರು ಪಾಳಿಗಳಲ್ಲೂ ಭದ್ರತೆ ನೀಡಲಾಗುತ್ತದೆ. ದಿನದ 24 ಗಂಟೆಗಳ ಕಾಲ ಶಸ್ತ್ರಧಾರಿತ ಕಮಾಂಡೋಗಳು ಭದ್ರತೆ ನೀಡುತ್ತಾರೆ.

ಬ್ರಾಹ್ಮಣ ಸ್ವಾಮೀಜಿ ಟಾರ್ಗೆಟ್​ ಆಗಿದ್ದು ಯಾಕೆ..?

ರಾಮಾನುಜ ಜೀಯರ್ ಸ್ವಾಮೀಜಿ ಜಮ್ಮು ಕಾಶ್ಮೀರ, ಅಯೋಧ್ಯೆ ಸೇರಿದಂತೆ ಹಲವಾರು ಕಡೆಗಳಲ್ಲಿ ರಾಮಾನುಜರ ಮೂರ್ತಿಗಳನ್ನು ಸ್ಥಾಪಿಸುವ ಮೂಲಕ ಧರ್ಮ ಪ್ರಚಾರ ಮಾಡುತ್ತಿದ್ದರು ಎನ್ನಲಾಗಿದೆ. ರಾಮಾನುಜ ಜೀಯರ್ ಸ್ವಾಮೀಜಿ ದೇಶಾದ್ಯಂತ ಧರ್ಮ ಪ್ರಚಾರ ಹಾಗು ಶಾಂತಿ ಸ್ಥಾಪನೆಯ ಕೆಲಸ ಮಾಡುತ್ತಿದ್ದರು. ಇದು ಕೆಲವು ಪಟ್ಟಭದ್ರ ಹಿತಾಸಕ್ತಿಗಳಮನ್ನು ಕೆರಳಿಸಿತ್ತು ಎನ್ನುವ ಮಾಹಿತಿ ಇದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ರಾಜ್ಯ ಪೊಲೀಸ್​ ಅಧಿಕಾರಿಗಳಿಂದ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಶೀಘ್ರದಲ್ಲಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

‘85 % ಸರ್ಕಾರ ನಡೆಸಿದವರು ಇಂದು ನಮ್ಮ ಮೇಲೆ ಕಮಿಷನ್​ ಆರೋಪ ಮಾಡ್ತಿದ್ದಾರೆ ’ : ಬಿಜೆಪಿ ನಾಯಕ ಸುಧಾಂಶು ತ್ರಿವೇದಿ ಕಿಡಿ
Uncategorized

‘85 % ಸರ್ಕಾರ ನಡೆಸಿದವರು ಇಂದು ನಮ್ಮ ಮೇಲೆ ಕಮಿಷನ್​ ಆರೋಪ ಮಾಡ್ತಿದ್ದಾರೆ ’ : ಬಿಜೆಪಿ ನಾಯಕ ಸುಧಾಂಶು ತ್ರಿವೇದಿ ಕಿಡಿ

by ಮಂಜುನಾಥ ಬಿ
March 24, 2023
ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI
Top Story

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

by ನಾ ದಿವಾಕರ
March 22, 2023
ಭಾರತ ಪ್ರಜಾಪ್ರಭುತ್ವ ರಾಷ್ಟ್ರ.. ಭಾರತದಲ್ಲಿ ಸ್ವಾತಂತ್ರ್ಯವಿದೆ.. ಆದ್ರೆ ಹುಷಾರ್..
Top Story

ಭಾರತ ಪ್ರಜಾಪ್ರಭುತ್ವ ರಾಷ್ಟ್ರ.. ಭಾರತದಲ್ಲಿ ಸ್ವಾತಂತ್ರ್ಯವಿದೆ.. ಆದ್ರೆ ಹುಷಾರ್..

by ಕೃಷ್ಣ ಮಣಿ
March 22, 2023
ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!
Top Story

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

by ಪ್ರತಿಧ್ವನಿ
March 26, 2023
ಕೊನೆಗೂ ಕಗ್ಗಂಟಾದ ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್..!
Top Story

ಕೊನೆಗೂ ಕಗ್ಗಂಟಾದ ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್..!

by ಪ್ರತಿಧ್ವನಿ
March 25, 2023
Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

ಜನ ಬಿಜೆಪಿಯವರನ್ನು ಗಂಟೂಮೂಟೆ ಕಟ್ಟಿ ಮನೆಗೆ ಕಳಿಸುತ್ತಾರೆ: ಡಿ.ಕೆ.ಶಿವಕುಮಾರ್

ಜನ ಬಿಜೆಪಿಯವರನ್ನು ಗಂಟೂಮೂಟೆ ಕಟ್ಟಿ ಮನೆಗೆ ಕಳಿಸುತ್ತಾರೆ: ಡಿ.ಕೆ.ಶಿವಕುಮಾರ್

ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ

ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist