• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬ್ರ್ಯಾಂಡ್ ಬೆಂಗಳೂರಿಗೆ ಜಲಕಂಟಕ; ಐಟಿಬಿಟಿ ಕಂಪೆನಿಗಳ ಆಕ್ರೋಶ ಸ್ಫೋಟ

ಕರ್ಣ by ಕರ್ಣ
September 8, 2022
in ಕರ್ನಾಟಕ, ರಾಜಕೀಯ
0
ಬ್ರ್ಯಾಂಡ್ ಬೆಂಗಳೂರಿಗೆ ಜಲಕಂಟಕ; ಐಟಿಬಿಟಿ ಕಂಪೆನಿಗಳ ಆಕ್ರೋಶ ಸ್ಫೋಟ
Share on WhatsAppShare on FacebookShare on Telegram

ಹಾಗೆ ನೋಡಿದರೆ ಬೆಂಗಳೂರು ಬರೀ ಬೆಂಗಳೂರಲ್ಲ. ಬ್ರ್ಯಾಂಡ್ ಬೆಂಗಳೂರು. ವಿಶ್ವದಲ್ಲೇ ತಂತ್ರಜ್ಞಾನದಲ್ಲಿ ತನ್ನದೇ ಬ್ರ್ಯಾಂಡ್ ಹೊಂದಿರುವ ಬ್ರ್ಯಾಂಡ್ ಬೆಂಗಳೂರು. ಅಂಥಾ ಬೆಂಗಳೂರು ಒಂದೇ ಮಳೆಗೆ ಈಗ ಅನಾವರಣವಾಗಿ ನಿಂತಿದೆ. ಎಲ್ಲೆಡೆಗೆ ಈಗ ಬೆಂಗಳೂರಿನ ಮಾನ ಹಾರಜಾಗುವಂತೆ ಮಾಡಲಾಗಿದೆ. ಹೌದು, ಮಳೆ ಶುರುವಾಗಿದ್ದೇ ಶುರು. ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದೇಶದ ಐಟಿ ಕಾರಿಡಾರ್ ಎಂದೇ ಪ್ರಖ್ಯಾತಿ ಹೊಂದಿದ್ದ ಬೆಂಗಳೂರು ಈಗ ಎಲ್ಲೆಡೆ ಲೇವಡಿಗೆ ತುತ್ತಾಗುತ್ತಿದೆ. ಇದಕ್ಕೆಲ್ಲ ಕಾರಣ ಸತತವಾಗಿ ನಗರದಲ್ಲಿ ಬೀಳುತ್ತಿರುವ ರಣ ಮಳೆ. ಈ ಮಳೆಗೆ ನಗರದ ಮಹಾದೇವಪುರ, ಬೊಮ್ಮನಹಳ್ಳಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಎಲ್ಲೆಂದರಲ್ಲಿ ನದಿಯಂತೆ ನೀರು ಹರಿಯುತ್ತಿದೆ. ಕೆರೆಯಂತೆ ನೀರು ನಿಂತಿದೆ. ಹಲವೆಡೆ ರಸ್ತೆ, ಕೆಲವಡೆ ಮನೆ ಜಲಾವೃತಗೊಂಡು ಜನರೂ ರೋಸಿ ಹೋಗಿದ್ದಾರೆ. ಈ ಬಗ್ಗೆ ಮಳೆಗಾಲದ ಆರಂಭದಲ್ಲೇ ಐಟಿ ದಿಗ್ಗಜ ಮೋಹನ್ ದಾಸ್ ಪೈ ಟ್ವೀಟ್ ಮಾಡಿ ಪ್ರಧಾನಿ ಮೋದಿಗೆ ಟ್ಯಾಗ್ ಮಾಡಿದ್ದು ಎಲ್ಲರ ಗಮನ ಸೆಳೆದಿತ್ತು. ಇದು ಬಹಳ ಚರ್ಚೆಗೂ ದಾರಿ ಮಾಡಿತ್ತು.

ADVERTISEMENT

ಬಿಬಿಎಂಪಿ ಅಧಿಕಾರಿಗಳ ಅಸಡ್ಡೆಗೆ ತೇಲಿದ ಐಟಿ ಟೆಕ್ ಪಾರ್ಕ್‌ ಗಳು

ಇನ್ನೇನು ಎರಡು ತಿಂಗಳ ಬಳಿಕ ಬೆಂಗಳೂರು ಗ್ಲೋಬಲ್ ಸಮ್ಮಿಟ್ ಗೆ ಸಾಕ್ಷಿಯಾಗಲಿದೆ. ವಿಶ್ವದ ಮೂಲೆ ಮೂಲೆಯಿಂದ ಬಂಡವಾಳ ಹೂಡಿಕೆದಾರರು ಬೆಂಗಳೂರು ಬರಲಿದ್ದಾರೆ. ಅದಕ್ಕೂ ಮೊದಲೇ ಇಂಥಾ ಘಟನೆಗಳು ಘಟಿಸಿರುವುದು ಬೆಂಗಳೂರು ಮುಂದೆ ಸಾಗಬಲ್ಲ‌ ಹಾದಿಯನ್ನು ನಿಚ್ಚಳಗೊಳಿಸುತ್ತಿದೆ. ಮಳೆಯ ರಣ ಅವತಾರಕ್ಕೆ ಟೆಕ್ ಕಾರಿಡಾರ್ ಗಳು ತತ್ತರಿಸಿ ಹೋಗಿವೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರಾಜಕಾಲುವೆ ಹೊರ ಹರಿವು ಕಂಡು ನೀರೆಲ್ಲಾ ಟೆಕ್ ಹಬ್ ಗೆ ನುಗ್ಗಿ ಕೋಟ್ಯಾಂತರ ರೂಪಾಯಿ ನಷ್ಟವನ್ನುಂಟು ಮಾಡಿದೆ. ಟೆಕ್ಕಿಗಳೇ ಹೇಳಿದ ಹಾಗೆ ಒಟ್ಟಾರೆ 225 ಕೋಟಿ ರೂಪಾಯಿ ಈ ಮಳೆಯಿಂದಾಗಿ ನಷ್ಟ ಆಗಿದೆಯಂತೆ.

ಐಟಿ ಬಿಟಿ ಹೆಗ್ಗಳಿಕೆಯ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ

ಅಂದಹಾಗೆ ಮಹಾದೇವಪುರ ಹಾಗೂ ಬೊಮ್ಮನಹಳ್ಳಿ ವಲಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಕಾರಣ ಏನು ಎಂದರೆ ರಾಜಕಾಲುವೆ ಹಾಗೂ ಕೆರೆ ಒತ್ತುವರಿ. ಈಗ ರಾಜಕಾಲುವೆ ಒತ್ತುವರಿ ತೆರವು ಅಂತಿರೋ ಬಿಬಿಎಂಪಿ ಅಧಿಕಾರಿಗಳೇ ಒಂದಾನೊಂದು ಕಾಲದಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕೊಟ್ಟವರು. ಇದೀಗ ನೆರೆಬಂದು ನಗರ ತೇಲುವಾಗ ಒತ್ತುವರಿ ತೆರವು ಮಾಡ್ತೀವಿ ಅಂತ ಕೋಲು ಹಿಡಿದು ಬೀದಿ ಸುತ್ತುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರ ಕೂಡ ನಾ ಹೊಡ್ದಂಗ್ ಮಾಡ್ತೀನಿ ನೀ ಅತ್ತಂಗ್ ಮಾಡು ಅಂತ ಕಠಿಣ ಕ್ರಮ ಅಂತ ಅಧಿಕಾರಿಗಳಿಗೆ ಎಚ್ಚರಿಕೆಯ ನಾಟಕ ಆಡ್ತಿದ್ದಾರೆ.

ಒಟ್ಟಾರೆ ಬೆಂಗಳೂರಿನ ಐಟಿ ಪಾರ್ಕ್ ಗಳು ಮಳೆ ನೀರಿನ ಮೇಲೆ ತೇಲಿ ನಿಂತಿದೆ. ಅಧಿಕಾರಿಗಳು ಹಾಗೂ ಸರ್ಕಾರ ಜಂಟಿಯಾಗಿ ಇದಕ್ಕೊಂದು ಪರಿಹಾರ ಕಂಡು‌ಹುಡುಕದೇ ಹೋದರೆ ಐಟಿ ಹಕ್ಕಿಗಳೆಲ್ಲಾ ಹಾರಿ ಹೋಗಲಿದೆ. ಈ ಮೂಲಕ ರಾಜ್ಯಕ್ಕೆ ಲಕ್ಷ ಕೋಟಿಯಷ್ಟು ರೂಪಾಯಿ ತೆರಿಗೆಗೆ ಕತ್ತರಿ ಬೀಳಲಿದೆ. ಇನ್ನಾದರೂ ದಪ್ಪ ಚರ್ಮದ ಅಧಿಕಾರಿಗಳು, ನಿದ್ದೆಯಲ್ಲಿರುವ ಸರ್ಕಾರ ಎಚ್ಚೆತ್ತುಕೊಳ್ಳದೆ ಹೋದರೆ ಬ್ರ್ಯಾಂಡ್ ಬೆಂಗಳೂರು ಹೋಗಿ ವೀಕ್ ಬೆಂಗಳೂರು ಆಗಲಿದೆ ಎನ್ನುವುದು ಮಾತ್ರ ಖಚಿತ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಾರುಣ ದುರವಸ್ಥೆಗೆ ಆಡಳಿತ ವ್ಯವಸ್ಥೆಯೇ ಕಾರಣ

Next Post

2024‌ ಚುನಾವಣೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post

2024‌ ಚುನಾವಣೆಗೆ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada