• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಕೆಂಪೇಗೌಡರು ಹಾಕಿಕೊಟ್ಟ ಅಡಿಪಾಯದ ಮೇಲೆ ಬ್ರ್ಯಾಂಡ್ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 28, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್, ಸಿನಿಮಾ
0
Share on WhatsAppShare on FacebookShare on Telegram

“ಕೆಂಪೇಗೌಡ ಅವರು ಹಾಕಿಕೊಟ್ಟ ಅಡಿಪಾಯದ ಮೇಲೆ ನಾವು ಬ್ರ್ಯಾಂಡ್ ಬೆಂಗಳೂರು ಮಾಡುವ ಪರಿಕಲ್ಪನೆ ಇದೆ. ನಾವೆಲ್ಲರೂ ಸೇರಿ, ಬಲಿಷ್ಠ ಬೆಂಗಳೂರು, ಶಾಂತಿಯ ಬೆಂಗಳೂರು, ಗ್ರೀನ್ ಬೆಂಗಳೂರು, ಸುರಕ್ಷಿತ ಬೆಂಗಳೂರು ನಿರ್ಮಿಸೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ತಿಳಿಸಿದರು.

ADVERTISEMENT

ಗ್ರೇಟರ್ ಬೆಂಗಳೂರು ಪ್ರಾಧಿಕಾರ (BBMP)ದ ಡಾ.ರಾಜಕುಮಾರ್ ಸಭಾಂಗಣದಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ನೀಡಿ ಮಾತನಾಡಿದರು.

“ಬೆಂಗಳೂರಿಗೆ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಅವರಿಗೆ ಅಭಿನಂದನೆ ಸಲ್ಲಿಸಿದ್ದೇವೆ. ಮನುಷ್ಯನ ಹುಟ್ಟು ಆಕಸ್ಮಿಕ ಸಾವು ಅನಿವಾರ್ಯ, ಜನನ ಉಚಿತ ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ” ಎಂದು ಹೇಳಿದರು.

“ಕೆಂಪೇಗೌಡರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿದ್ದೇವೆ. ಅವರು ಎಲ್ಲಾ ವರ್ಗದವರಿಗೆ ಆದ್ಯತೆ ನೀಡಿ ಅನೇಕ ಪೇಟೆ ರಚಿಸಿದರು. ಇದು ಅವರ ದೂರದೃಷ್ಟಿಗೆ ಸಾಕ್ಷಿ. ರಾಜ್ಯ, ದೇಶ, ವಿದೇಶದ ಜನ ಈ ನಗರದಲ್ಲಿ ಈಗ ವಾಸಿಸುತ್ತಿದ್ದಾರೆ.” ಎಂದು ತಿಳಿಸಿದರು.

“ಬೆಂಗಳೂರನ್ನು ಸ್ವಚ್ಛ ಮಾಡುವವರಿಂದ ಹಿಡಿದು ಈ ನಗರಕ್ಕೆ ಸೇವೆ ಸಲ್ಲಿಸಿದ ಅನೇಕ ಹಿರಿಯರಿಗೆ ಕೆಂಪೇಗೌಡರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದೇವೆ. ಕಲೆ, ಮಾಧ್ಯಮ, ವೈದ್ಯಕೀಯ, ವಿಜ್ಞಾನ, ಕೈಗಾರಿಕೆ ಸೇರಿದಂತೆ ಎಲ್ಲಾ ರಂಗದ ಸಾಧಕರಿಗೆ ಈ ಪ್ರಶಸ್ತಿ ನೀಡಿದ್ದೇವೆ” ಎಂದು ತಿಳಿಸಿದರು.

“ನಾವು ಎಷ್ಟು ದಿನ ಇರುತ್ತೇವೆ ಎಂಬುದು ಮುಖ್ಯವಲ್ಲ. ನಾವು ಅಧಿಕಾರದಲ್ಲಿ ಇದ್ದಾಗ ಏನು ಮಾಡುತ್ತೇವೆ ಎಂಬುದು ಮುಖ್ಯ. ನಾವು ಗ್ರೇಟರ್ ಬೆಂಗಳೂರು ಮಾಡಲು ಮುಂದಾಗಿದ್ದು, ಮುಂದಿನ ಒಂದು ತಿಂಗಳಲ್ಲಿ ಎಷ್ಟು ಪಾಲಿಕೆ ಮಾಡಬೇಕು ಎಂದು ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.

“ಬೆಂಗಳೂರು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲಾ ವರ್ಗದ ಜನ ಈ ನಗರದಲ್ಲಿ ವಾಸಿಸಲು ಬಯಸುತ್ತಾರೆ. ಎಲ್ಲರನ್ನು ಗೌರವದಿಂದ ನೋಡಿಕೊಳ್ಳಲು ನಮ್ಮ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ” ಎಂದರು.

“ಜನ ನಮಗೆ 140 ಸಂಖ್ಯಾಬಲದ ಸರ್ಕಾರ ನೀಡಿದ್ದಾರೆ. ಜನರಿಗಾಗಿ ಪ್ರಾಮಾಣಿಕ ಸೇವೆ ಮಾಡಲು ಪ್ರಯತ್ನಿಸುತ್ತಿದ್ದೇವೆ. ಸುರಂಗ ರಸ್ತೆಗೆ 37 ಸಾವಿರ ಕೋಟಿ, ಮೇಲ್ಸೇತುವೆಗೆ 17 ಸಾವಿರ ಕೋಟಿ, ಸ್ವಚ್ಛತೆಗೆ 15 ಸಾವಿರ ಕೋಟಿ ಸೇರಿದಂತೆ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 1 ಲಕ್ಷ ಕೋಟಿ ಮೊತ್ತದ ಯೋಜನೆ ರೂಪಿಸಿದ್ದೇವೆ. ಇದೇ ವೇಳೆ ಪ್ರವಾಸೋದ್ಯಮ ಆಕರ್ಷಿಸಲು ಸ್ಕೈಡೆಕ್ ನಿರ್ಮಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ತಾಂತ್ರಿಕವಾಗಿ ಸಾಧ್ಯತೆ ನೋಡಿಕೊಂಡು ಇದರ ಜಾಗ ಅಂತಿಮಗೊಳಿಸಲಾಗುವುದು” ಎಂದು ತಿಳಿಸಿದರು.

“ಜನರ ಪ್ರೀತಿ ಮರ ಅಥವಾ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ಜನರ ಹೃದಯದಲ್ಲಿ ಮಾತ್ರ ಸಿಗುತ್ತದೆ. ನಮ್ಮ ಜನ ನಮ್ಮ ಕೆಲಸಗಳನ್ನು ಜನರು ಕಣ್ಣಾರೆ ಕಾಣುವಂತೆ ಮಾಡುತ್ತೇವೆ” ಎಂದು ತಿಳಿಸಿದರು.

“ಯೋಗಿ ಎಂದು ಕರೆಸಿಕೊಳ್ಳುವುದಕ್ಕಿಂತ, ಉಪಯೋಗಿ ಎಂದು ಕರೆಸಿಕೊಳ್ಳುವುದು ಲೇಸು. ನಾವು ಯಾರನ್ನು ಮೆಚ್ಚಿಸದಿದ್ದರೂ ನಮ್ಮ ಆತ್ಮಸಾಕ್ಷಿ ಮೆಚ್ಚುವಂತಹ ಕೆಲಸ ಮಾಡಿದರೆ ಸಾಕು. ಇಲ್ಲಿ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆಗಳು. ಪ್ರಶಸ್ತಿ ಪುರಸ್ಕೃತರು ಹಾಗೂ ಅವರ ಕುಟುಂಬದವರ ಮುಖದಲ್ಲಿ ನಾನು ಬಹಳ ಸಂತೋಷ ಕಂಡಿದ್ದೇನೆ. ನೀವು ಸದಾ ನಗುತ್ತಾ ಇರಿ. ನಿಮ್ಮ ಸೇವೆಯನ್ನು ನಾವು ಎಂದೂ ಮರೆಯುವುದಿಲ್ಲ. ಈ ಪ್ರಶಸ್ತಿಗೆ ಅರ್ಹರಾಗಿರುವ ಅನೇಕ ಸಾಧಕರು ಇದ್ದಾರೆ. ಆದರೆ ನಾನು ಈ ಪ್ರಶಸ್ತಿ ನೀಡುವ ಸಂಖ್ಯೆಯನ್ನು 50ಕ್ಕೆ ಮೀಸಲುಗೊಳಿಸಿದೆ” ಎಂದು ತಿಳಿಸಿದರು.

“ನಾವು ಕೆಲವು ತಪ್ಪು ಮಾಡಬಹುದು, ಮಾಧ್ಯಮಗಳು ನಮ್ಮನ್ನು ಟೀಕೆ ಮಾಡಿದರೂ ಅವುಗಳನ್ನು ಸಂತೋಷದಿಂದ ಸ್ವೀಕರಿಸಿ, ನಮ್ಮ ಕೆಲಸ ಮುಂದುವರಿಸಿಕೊಂಡು ಹೋಗುತ್ತೇವೆ” ಎಂದು ತಿಳಿಸಿದರು.

ಸ್ಕೈ ಡೆಕ್ ನಿರ್ಮಾಣ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಮಾಡಲು ತೀರ್ಮಾನಿಸಲಾಗಿತ್ತು ಎಂದು ಮಾಧ್ಯಮಗಳು ಕೇಳಿದಾಗ, “ಈ ವಿಚಾರದಲ್ಲಿ ತಾಂತ್ರಿಕ ಅಂಶಗಳಿವೆ. ಇದರ ನಿರ್ಮಾಣಕ್ಕೆ ವಿಮಾನ ನಿಲ್ದಾಣ ಅಧಿಕಾರಿಗಳು ಒಪ್ಪಿಗೆ ನೀಡಬೇಕು. ವಿಮಾನ ನಿಲ್ದಾಣದಿಂದ 20 ಕಿ.ಮೀ ದೂರದಲ್ಲಿ ಇದನ್ನು ನಿರ್ಮಾಣ ಮಾಡಬೇಕಿದೆ. ಮೆಟ್ರೋಗೆ ಸಮೀಪವಿರುವ ಜಾಗವನ್ನು ಹುಡುಕುತ್ತಿದ್ದು, ಬಿಡಿಎ (BDA) ಜೊತೆ ಚರ್ಚೆ ಮಾಡಿ ಆದಷ್ಟು ಬೇಗ ಜಾಗ ಅಂತಿಮಗೊಳಿಸುತ್ತೇವೆ” ಎಂದು ತಿಳಿಸಿದರು.

Tags: BBMPBDAcongress dk shivakumarDCM DK ShivakumarDK Shivakumardk shivakumar 2025dk shivakumar bengalurudk shivakumar cmdk shivakumar congressdk shivakumar dcmdk shivakumar falldk shivakumar interviewdk shivakumar latest newsdk shivakumar livedk shivakumar memesdk shivakumar newsdk shivakumar next cmdk shivakumar rallydk shivakumar sondk shivakumar speechdk shivakumar supportdk shivakumar today newsdk shivakumar updatesdk shivakumar videosKempegowda Jayanthi
Previous Post

CM Siddaramaiah: ಪೊಲೀಸರ ತನಿಖೆಯ ಗುಣಮಟ್ಟ ಹೆಚ್ಚಿಸಿ: ಸಿ.ಎಂ ಸೂಚನೆ

Next Post

Gym Ravi: ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ.

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post

Gym Ravi: ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ.

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada