ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಅತ್ಯಂತ ದುರಾದೃಷ್ಟಕರ ಘಟನೆಯಾಗಿದ್ದು, ಇಂತಹ ಘಟನೆಗಳು ಮುರುಕಳಿಸದಂತೆ ಮುಂಜಾಗ್ರತಾ ಕ್ರಮ ವಹಿಸಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
![](https://pratidhvani.com/wp-content/uploads/2023/06/Untitled-design-2023-03-07T195116.742-1024x768.png)
![](https://pratidhvani.com/wp-content/uploads/2023/06/ದಜ್ಕಚಸಷಚ-1.png)
ಇದೊಂದು ದುರಾದೃಷ್ಟಕರ ಘಟನೆ, ನಮ್ಮ ಸರ್ಕಾರ ಈ ಬಗ್ಗೆ ತನಿಖೆಯನ್ನ ನಡೆಸಲಿದೆ, ರೈಲ್ವೆ ಸಚಿವರು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ, ಹಾಗೆಯೇ ಪ್ರಧಾನಿ ಮೋದಿ ಕೂಡ ಆದಷ್ಟು ಬೇಗ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಿದ್ದಾರೆ. ನಾವು ಸಂತ್ರಸ್ತರ ಕುಟುಂಬದೊಂದಿಗೆ ಇದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿ ಸಿ.ಟಿ ರವಿ ಹೇಳಿಕೆ