ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆಯಲಾಗುತ್ತದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ (Alanda B.R Patil) ಮಾಡಿರುವ ಲಂಚದ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೇಸ್ ಹೈಕಮಾಂಡ್, ರಾಜ್ಯ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಕಾಂಗ್ರೇಸ್ ಸರ್ಕಾರ ಭ್ರಷ್ಟಾಚಾರ, ಹಗರಣದಿಂದ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮುಜುಗರ ದಂದೊಡ್ಡಿದೆ. ಕಳೆದ ವಾರ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮೀತ್ ಶಾ (Amith Sha) ಅವರು ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಡುವಂತೆ ಸೂಚನೆ ನೀಡಿ ಹೋಗಿದ್ರು,

ಇದರ ಬೆನ್ನಲ್ಲೆ ಮತ್ತೊಬ್ಬರು ಕಾಂಗ್ರೇಸ್ ಶಾಸಕ ರಾಜು ಕಾಗೆ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಅಸಮಧಾನ ಹೊರಹಾಕಿ ರಾಜೀನಾಮೆ ನೀಡುವುದಾಗಿ ಹೇಳಿದ್ದರು.
ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ (Sarfaraj Khan) ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ ನಡುವೆ ನಡೆದ ಆಡಿಯೋ ಸ್ಪೋಟದ ಕುದಿರುವ ಜೆಡಿಎಸ್(JDS), ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಆಯ್ದಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ (HD Kumarswamy) ಅವರು ವಸತಿ ಇಲಾಖೆಯ ಹಗರಣದ ಆರೋಪದ ಹೊಣೆ ಹೊತ್ತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಒತ್ತಾಯಿಸಿದ್ದರು.

ಈ ಎಲ್ಲಾ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಿರುವ ಕಾಂಗ್ರೇಸ್ ಹೈಕಮಾಂಡ್ ವಸತಿ ಇಲಾಖೆಯ ಲಂಚಾ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯಾವರು ಕಾಂಗ್ರೆಸ್ ಅಧ್ಯಕ್ಷ ಮಲಿಕಾರ್ಜುನ ಖರ್ಗೆ(Mallikajun Kharge) ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Ranadeep Surjevala) ಅವರನ್ನು ದೆಹಲಿಗೆ ಕರೆಸಿಕೊಂಡಿರುವ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ.

ಆರಂಭದಲ್ಲೇ ಶಮನ ಮಾಡಬೇಕಿತ್ತು, ಅವರನ್ನು ಕರೆಸಿ ಅಹವಾಲು ಆಲಿಸಬೇಕಿತ್ತು, ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ ಎಂದು ಹೈಕಮಾಂಡ್ ರಾಜ್ಯ ನಾಯಕರಿಗೆ ಕಿಮಾತು ಹೇಳಿದ್ದಾರೆ.

ಆಗ ಸಿದ್ದರಾಮಯ್ಯ(Siddaramaiah), ಶಾಸಕರುಗಳಾದ ಬಿ.ಆರ್. ಪಾಟೀಲ್ (B.R Patil) ಹಾಗೂ ರಾಜು ಕಾಗೆ ಅವರೊಂದಿಗೆ ಚರ್ಚೆ ನಡೆಸುವೆ ಎಂದು ರಾಷ್ಟ್ರೀಯ ನಾಯಕರಿಗೆ ತಿಳಿಸಿದ್ದಾರೆ.