• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Brij Bhushan Singh : ನಾಲಿಗೆ ಹರಿಬಿಟ್ಟ ಬ್ರಿಜ್ ಭೂಷಣ್ ಸಿಂಗ್, ಮಹಿಳಾ ಕುಸ್ತಿಪಟುಗಳಿಂದ ಆಕ್ರೋಶ..!

ಪ್ರತಿಧ್ವನಿ by ಪ್ರತಿಧ್ವನಿ
May 20, 2023
in Top Story, ಇತರೆ / Others, ಇದೀಗ
0
Brij Bhushan Singh : ನಾಲಿಗೆ ಹರಿಬಿಟ್ಟ ಬ್ರಿಜ್ ಭೂಷಣ್ ಸಿಂಗ್, ಮಹಿಳಾ ಕುಸ್ತಿಪಟುಗಳಿಂದ ಆಕ್ರೋಶ..!
Share on WhatsAppShare on FacebookShare on Telegram

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಕುಸ್ತಿ ಪಟುಗಳ ವಿರುದ್ದ ತಮ್ಮ ನಾಲಿಗೆ ಹರಿಬಿಡುವ ವಿಕೃತಿಯನ್ನ ಮೆರೆದಿದ್ದಾರೆ. ಅದರಲ್ಲೂ ಕ್ರೀಡಾಪಟುಗಳ ದೇಶ ಸೇವೆಯನ್ನ ಕಡೆಗಣಿಸಿ ಟೀಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕೂಡ ಕಾರಣವಾಗಿದೆ.

ADVERTISEMENT

ಹೌದು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ, ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಕುಸ್ತಿಪಟುಗಳನ್ನ ಟೀಕಿಸುವ ಭರದಲ್ಲಿ, ಅವರು ದೇಶಕ್ಕಾಗಿ ಗೆದ್ದ ಪದಕಗಳ ಬಗ್ಗೆ ಹಗುರವಾಗಿ ಮಾತನಾಡಿ, ವಿವಾದವನ್ನು ಸೃಷ್ಟಿಸಿದ್ದಾರೆ.

ಉತ್ತರ ಪ್ರದೇಶದ ಸ್ಥಳೀಯ ಸುದ್ದಿವಾಹಿನಿಯ ಪತ್ರಕರ್ತ ಒಂದಷ್ಟು ಪ್ರಶ್ನೆಯನ್ನ ಕೇಳಿದ್ದಾನೆ. ಇದಕ್ಕೆ ಸಿಟ್ಟಾದ ಬ್ರಿಜ್ ಭೂಷಣ್ ಕುಸ್ತಿಪಟುಗಳು ಪದಕಗಳನ್ನ ವಾಪಸ್ ಕೊಡುವುದರ ಜೊತೆಗೆ, ಇಷ್ಟು ವರ್ಷ ಪಡೆದಿರುವ ಬಹುಮಾನದ ಹಣವನ್ನು ವಾಪಸ್ ಕೊಡಲಿ, ಪದಕಗಳ ಮೌಲ್ಯ 15 ಲಕ್ಷ ರೂಪಾಯಿ ಮಾತ್ರ ಎಂದು ಕೊಂಕುಮಾತುಗಳನ್ನಾಡಿದ್ದಾರೆ.

ಬ್ರಿಜ್ ಭೂಷಣ್ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾ ನಿರತ ಕುಸ್ತಿಪಟುಗಳು “ಕ್ರೀಡಾಪಟುಗಳನ್ನ ಭೂಷಣ್ ಎಷ್ಟು ಕೀಳಾಗಿ ನೋಡುತ್ತಾರೆ ಎನ್ನುವುದನ್ನ ಅವರ ಮಾತುಗಳೇ ತೋರಿಸುತ್ತವೆ. ನಮ್ಮ ಇಷ್ಟು ವರ್ಷಗಳ ಪರಿಶ್ರಮದ ಹಾಗೂ ಅದರ ಮೌಲ್ಯ ಕೇವಲ ಹದಿನೈದು ಲಕ್ಷ ರೂಪಾಯಿ ಎನ್ನುವ ಮೂಲಕ ಕುಸ್ತಿಪಟುಗಳ ದೇಶ ಸೇವೆಯನ್ನ ಕೀಳಾಗಿ ಕಂಡಿದ್ದಾರೆ. ಎಂದು ಬೇಸರವನ್ನ ವ್ಯಕ್ತಪಡಿಸಿದ್ದಾರೆ .

ಇನ್ನು ಪ್ರತಿಭಟನಾ ನಿರತ ಕುಸ್ತಿಪಟುಗಳನ್ನ ಕಾಂಗ್ರೆಸ್ ನಾಯಕರಾದ ರಣದೀಪ ಸುರ್ಜೆವಾಲ, ಸಚಿನ್ ಪೈಲೆಟ್ ಭೇಟಿ ಮಾಡಿದ್ದು, ಎಲ್ಲಾ ರೀತಿಯ ಬೆಂಬಲ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಸುರ್ಜೇವಾಲ ಕುಸ್ತಿಪಟುಗಳಿಗೆ ನ್ಯಾಯ ಸಿಗುವುದಾದರೆ ರಕ್ತಹರಿಸಲು ಸಿದ್ಧ ಎಂದಿದ್ದಾರೆ. ಇದೇ ವೇಳೆ ಸಮೀಪಿಸುತ್ತಿದ್ದಂತೆ ಜಂತರ್ ಮಂತರ್ ಹಾಗೂ ದೆಹಲಿ ಹೊರವಲಯಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಪಂಜಾಬ್ ಹರಿಯಾಣ ಉತ್ತರಪ್ರದೇಶಗಳಿಂದ ಸಾವಿರಾರು ರೈತರು ಆಗಮಿಸುವ ನಿರೀಕ್ಷೆ ಇದೆ. ಹಲವು ಸ್ಥಳಗಳಲ್ಲಿ ಈಗಾಗಲೇ ಸಿಸಿಟಿವಿಗಳನ್ನ ಅಳವಡಿಸಲಾಗಿದೆ. ಒಟ್ಟಾರೆಯಾಗಿ ಈಗಾಗಲೇ ವಿವಾದಕ್ಕೆ ಸಿಲುಕಿಕೊಂಡಿರುವ ಬ್ರಿಜ್ ಭೂಷಣ್ ಸಿಂಗ್ ಇದೀಗ ಮತ್ತೊಂದು ವಿವಾದವನ್ನ ತಮ್ಮ ಅಲ್ಪ ಜ್ಞಾನದಿಂದ ಹರಿ ಬಿಟ್ಟಿರುವುದು ಅವರಿಗೆ ಇನ್ನಷ್ಟು ಸಂಕಷ್ಟಗಳನ್ನು ತಂದೊಡ್ಡಿದೆ.

Tags: BJPbjpkarnatakaBrij Bhushan SinghModiout of tonguePMModiSakshi MalikWFIwomen wrestlersಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

CM Siddaramaiah Name Board | ಸಿಎಂ ಕಚೇರಿಗೆ ಹೊಸ ನಾಮಫಲಕ ಅಳವಡಿಸಿದ ಸಿಬ್ಬಂದಿ #CMSiddaramaiah #Congress

Next Post

Rahul Gandhi | ದ್ವೇಷ ಅಳಿದಿದೆ ಪ್ರೀತಿ ಈಗ ಗೆದ್ದಿದೆ ; ರಾಹುಲ್ ಗಾಂಧಿ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
Rahul Gandhi | ದ್ವೇಷ ಅಳಿದಿದೆ ಪ್ರೀತಿ ಈಗ ಗೆದ್ದಿದೆ ; ರಾಹುಲ್ ಗಾಂಧಿ

Rahul Gandhi | ದ್ವೇಷ ಅಳಿದಿದೆ ಪ್ರೀತಿ ಈಗ ಗೆದ್ದಿದೆ ; ರಾಹುಲ್ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada