• Home
  • About Us
  • ಕರ್ನಾಟಕ
Thursday, August 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರದ ಬದಲು ಎಎಪಿಯ ಹೊಸ ಎಂಜಿನ್‌ ಸರ್ಕಾರ ತನ್ನಿ: ಅರವಿಂದ್‌ ಕೇಜ್ರಿವಾಲ್

ಪ್ರತಿಧ್ವನಿ by ಪ್ರತಿಧ್ವನಿ
March 4, 2023
in ಕರ್ನಾಟಕ, ರಾಜಕೀಯ
0
ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರದ ಬದಲು ಎಎಪಿಯ ಹೊಸ ಎಂಜಿನ್‌ ಸರ್ಕಾರ ತನ್ನಿ: ಅರವಿಂದ್‌ ಕೇಜ್ರಿವಾಲ್
Share on WhatsAppShare on FacebookShare on Telegram

ದಾವಣಗೆರೆ: ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರದ ಆಡಳಿತದಲ್ಲಿ ಕಮಿಷನ್‌ ಪ್ರಮಾಣ ಮಾತ್ರ ಡಬಲ್‌ ಆಗಿದ್ದು, ಜನಪರ ಹಾಗೂ ಶೂನ್ಯ ಪರ್ಸೆಂಟ್‌ ಆಡಳಿತಕ್ಕಾಗಿ ಆಮ್‌ ಆದ್ಮಿ ಪಾರ್ಟಿಯ ಹೊಸ ಎಂಜಿನ್‌ ಸರ್ಕಾರವನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಬೇಕು ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹೇಳಿದರು.

ADVERTISEMENT

ದಾವಣಗೆರೆಯಲ್ಲಿ ನಡೆದ ಆಮ್‌ ಆದ್ಮಿ ಪಾರ್ಟಿಯ ಬೃಹತ್‌ ಸಮಾವೇಶದಲ್ಲಿ ಕನ್ನಡದಲ್ಲಿ ಮಾತು ಆರಂಭಿಸಿದ ಅರವಿಂದ್‌ ಕೇಜ್ರಿವಾಲ್‌, “ನಮಸ್ಕಾರ ಕರ್ನಾಟಕ. ಕರ್ನಾಟಕದ ಹೃದಯ ಭಾಗ ದಾವಣಗೆರೆ. ಇಲ್ಲಿ ಬಂದಿದ್ದು ನನಗೆ ತುಂಬಾ ಸಂತೋಷವಾಗಿದೆ” ಎಂದು ಕನ್ನಡದಲ್ಲೇ ಹೇಳಿದರು.

ಕರ್ನಾಟಕದ ಜನರು ಬಹಳ ಒಳ್ಳೆಯವರು ಹಾಗೂ ದೇಶಭಕ್ತಿ ಉಳ್ಳವರು. ಆದರೆ ಇಲ್ಲಿನ ಜನಪ್ರತಿನಿಧಿಗಳು ಕೆಟ್ಟವರಾಗಿದ್ದಾರೆ. ಕರ್ನಾಟಕದ ಸರ್ಕಾರವು 40% ಸರ್ಕಾರವೆಂಬ ಮಾತು ಪ್ರಚಲಿತದಲ್ಲಿದೆ. ಕಳೆದ ಎರಡು ವರ್ಷಗಳಲ್ಲಿ 40% ಕಮಿಷನ್‌ ನೀಡದೇ ಸರ್ಕಾರದ ಯಾವುದೇ ಗುತ್ತಿಗೆ ಕಾಮಗಾರಿ ನಡೆಯುತ್ತಿಲ್ಲವೆಂದು ಗುತ್ತಿಗೆದಾರರ ಸಂಘವೇ ಹೇಳುತ್ತಿದೆ. ಆದರೆ ಬಿಜೆಪಿಯ ಅಮಿತ್‌ ಶಾರವರು ಇಲ್ಲಿಗೆ ಬಂದು ಭ್ರಷ್ಟರಹಿತ ಆಡಳಿತ ನೀಡುವುದಾಗಿ ಹೇಳುತ್ತಿದ್ದಾರೆ. ಇದೇ ಜಿಲ್ಲೆಯ ಹಾಗೂ ಅಮಿತ್‌ ಶಾರವರ ಪಕ್ಷದ ಶಾಸಕ ಹಾಗೂ ಅವರ ಮಗನ ಬಳಿ ಲೋಕಾಯುಕ್ತ ಅಧಿಕಾರಿಗಳಿಗೆ 8 ಕೋಟಿ ರೂಪಾಯಿ ನಗದು ದೊರೆತಿದೆ. ಶಾಸಕರನ್ನು ಈವರೆಗೂ ಬಂಧಿಸದ ಸರ್ಕಾರಕ್ಕೆ ಪದ್ಮಭೂಷಣ ನೀಡಬೇಕು” ಎಂದು ವ್ಯಂಗ್ಯವಾಡಿದರು.

“ದೆಹಲಿ ಸರ್ಕಾರದ ಸಚಿವ ಮನೀಶ್ ಸಿಸೋಡಿಯಾ ಅವರ ಮನೆ, ಕಚೇರಿ, ಬ್ಯಾಂಕ್ ಲಾಕರ್ ಮೇಲೆ ಕೇಂದ್ರ ಸರ್ಕಾರದ ಸಂಸ್ಥೆಗಳು ದಾಳಿ ಮಾಡಲಾಯಿತು. ಅಲ್ಲಿ ಕೇವಲ ಹತ್ತು ಸಾವಿರ ರೂಪಾಯಿ ಹಣ ಸಿಕ್ಕಿತು. ಆದರೆ ಅವರ ಮೇಲೆ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆ ಎಂಬ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಭ್ರಷ್ಟಾಚಾರ, ಅತ್ಯಾಚಾರ, ಲಂಚ ಕೇಳುವ, ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುವವರು, ಮೋಸ, ವಂಚನೆ ಮಾಡುವವರು ಬಿಜೆಪಿಯಲ್ಲಿದ್ದಾರೆ. ಕರ್ನಾಟಕದಲ್ಲಿ ಮೊದಲು ಶೇಕಡಾ 20ರಷ್ಟು ಕಮಿಷನ್‌ ಪಡೆಯುವ ಸರ್ಕಾರವಿತ್ತು. ಪ್ರಧಾನಿ ಮೋದಿಯವರು 2018ರಲ್ಲಿ ಕರ್ನಾಟಕಕ್ಕೆ ಆಗಮಿಸಿ, ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಭ್ರಷ್ಟಾಚಾರಕ್ಕೆ ಅಂತ್ಯಹಾಡುವುದಾಗಿ ಹೇಳಿದರು. ಆದರೆ ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಮಿಷನ್‌ ಡಬಲ್‌ ಆಯಿತು. ಈಗ 40% ಕಮಿಷನ್‌ ಪಡೆಯಲಾಗುತ್ತಿದ್ದು, ಬಿಜೆಪಿ ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದರೆ ಕಮಿಷನ್‌ ಮತ್ತೆ ಡಬಲ್‌ ಆಗಿ 80% ತಲುಪಲಿದೆ. ಆದ್ದರಿಂದ ಜನರು ಡಬಲ್‌ ಎಂಜಿನ್‌ ಸರ್ಕಾರದ ಬದಲು ಆಮ್‌ ಆದ್ಮಿ ಪಾರ್ಟಿಯ ಹೊಸ ಎಂಜಿನ್‌ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು” ಎಂದು ಅರವಿಂದ್‌ ಕೇಜ್ರಿವಾಲ್‌ ಹೇಳಿದರು.

 “ರಾಜ್ಯ ಸರ್ಕಾರದ ಕಮಿಷನ್‌ ದಂಧೆಯಿಂದಾಗಿ ಶಾಲೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಖಾಸಗಿ ಶಾಲೆಗಳ ಒಕ್ಕೂಟ ಕೂಡ ಆರೋಪಿಸುತ್ತಿವೆ. ಸರ್ಕಾರದಿಂದ ಅನುದಾನ ಪಡೆಯಲು 30% ಕಮಿಷನ್‌ ನೀಡಬೇಕಾಗಿದೆ ಎಂದು ಹಿಂದೂ ಮಠಗಳು ಆರೋಪಿಸಿವೆ. ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನ ರಸ್ತೆಗಳನ್ನು ದುರಸ್ತಿ ಹಾಗೂ ನಿರ್ವಹಣೆಗೆ 20,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇತ್ತೀಚೆಗೆ 6000 ಕೋಟಿ ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಆದರೆ ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದಾಗಿ 100ಕ್ಕೂ ಹೆಚ್ಚು ಸಾವು ಸಂಭವಿಸಿದೆ. ಕೆಲವು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಾರೆಂದು 34 ಕೋಟಿ ರೂಪಾಯಿ ಖರ್ಚು ಮಾಡಿ ರಸ್ತೆ ನಿರ್ಮಿಸಲಾಯಿತು. ಆದರೆ ಕೇವಲ 24 ಗಂಟೆಗಳೊಳಗೆ ರಸ್ತೆಯು ಕುಸಿದು ಗುಂಡಿ ಬಿದ್ದಿತು. ಕರ್ನಾಟಕದ ಯುವಕರು ಉದ್ಯೋಗವನ್ನು ಹಣಕೊಟ್ಟು ಖರೀದಿಸಬೇಕಾಗಿದೆ. 50 ಲಕ್ಷದಿಂದ 1 ಕೋಟಿ ರೂಪಾಯಿ ತನಕ ಹಣ ನೀಡಿದವರಿಗೆ ಪಿಎಸ್‌’ಐ ಹುದ್ದೆಗಳನ್ನು ಮಾರಾಟ ಮಾಡಲಾಗಿದೆ. ಉಪನ್ಯಾಸಕರಾಗಲು 25 ಲಕ್ಷ ರೂಪಾಯಿ ನೀಡಬೇಕಾಗಿದೆ. ಶಾಸಕರು ಕೂಡ ಮಾರಾಟದ ಸರಕಾಗಿದ್ದು, ಆಪರೇಷನ್‌ ಕಮಲ ಹೆಸರಿನಲ್ಲಿ ಅವರನ್ನು ಖರೀದಿಸಿಯೇ ಬಿಜೆಪಿ ಸರ್ಕಾರವನ್ನು ರಚಿಸಲಾಗಿದೆ” ಎಂದು ಅರವಿಂದ್‌ ಕೇಜ್ರಿವಾಲ್‌ ಹೇಳಿದರು.

“ಕರ್ನಾಟಕದಲ್ಲಿ ವಿದ್ಯುತ್‌, ನೀರು, ಆರೋಗ್ಯ, ಗುಣಮಟ್ಟದ ಶಿಕ್ಷಣ, ಮಹಿಳೆಯರಿಗೆ ಸಾರಿಗೆ ಉಚಿತವಾಗಿ ಇಲ್ಲದಿದ್ದರೂ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರಗಳು ಕಳೆದ ಐದು ವರ್ಷಗಳಲ್ಲಿ 3 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದವೆ. ಜನರಿಗೆ ಉಚಿತ ಕೊಡುಗೆ ನೀಡುವ ಬದಲು ಅವರ ತಲೆ ಮೇಲೆ ಸಾಲದ ಹೊರೆ ಹೊರಿಸಿವೆ. ದೆಹಲಿಯಲ್ಲಿ ಇವೆಲ್ಲ ಉಚಿತವಾಗಿದ್ದರೂ ಅಲ್ಲಿನ ಆರ್ಥಿಕ ಸ್ಥಿತಿ ಚೆನ್ನಾಗಿದೆ. ಆಮ್‌ ಆದ್ಮಿ ಪಾರ್ಟಿಯು ಜೀರೋ ಕಮಿಷನ್‌ ಆಡಳಿತ ನೀಡುತ್ತಿರುವುದರಿಂದ ಇವೆಲ್ಲ ಸಾಧ್ಯವಾಗಿದೆ” ಎಂದು ಹೇಳಿದರು.

ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರರಹಿತ ಆಡಳಿತ

“ಕರ್ನಾಟಕದಲ್ಲಿ ಆಮ್‌ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರರಹಿತ ಆಡಳಿತ ನೀಡಲಾಗುತ್ತದೆ. ಪಂಜಾಬ್‌ನಲ್ಲಿ ನಮ್ಮದೇ ಪಕ್ಷದ ಇಬ್ಬರು ನಾಯಕರು ತಪ್ಪು ಮಾಡಿರುವುದು ಕಂಡುಬಂದಾಗಿ ಶೀಘ್ರವೇ ಅವರನ್ನು ಅಧಿಕಾರದಿಂದ ವಜಾ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಭ್ರಷ್ಟಾಚಾರದ ವಿಷಯದಲ್ಲಿ ನಾವು ಜೀರೋ ಟಾಲರೆನ್ಸ್‌ ಹೊಂದಿದ್ದೇವೆ. ಯಾರೇ ಭ್ರಷ್ಟಾಚಾರ ಮಾಡಿದರೂ ಸಹಿಸುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

Tags: AAPಅರವಿಂದ್‌ ಕೇಜ್ರಿವಾಲ್ದಾವಣಗೆರೆಬಿಜೆಪಿಮನೀಶ್ ಸಿಸೋಡಿಯಾ
Previous Post

ಔರಾದನಲ್ಲಿ ಬಿಜೆಪಿಯ ಬೃಹತ್ ರೋಡ್ ಶೋ

Next Post

ಬಿಜೆಪಿ ಶಾಸಕನ ಪುತ್ರನ ಬಳಿ ಕಂತೆಕಂತೆ ಹಣ ಎಲ್ಲಿಂದ ಬಂತು?: ಭಗವಂತ್‌ ಮಾನ್ ಪ್ರಶ್ನೆ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಬಿಜೆಪಿ ಶಾಸಕನ ಪುತ್ರನ ಬಳಿ ಕಂತೆಕಂತೆ ಹಣ ಎಲ್ಲಿಂದ ಬಂತು?: ಭಗವಂತ್‌ ಮಾನ್ ಪ್ರಶ್ನೆ

ಬಿಜೆಪಿ ಶಾಸಕನ ಪುತ್ರನ ಬಳಿ ಕಂತೆಕಂತೆ ಹಣ ಎಲ್ಲಿಂದ ಬಂತು?: ಭಗವಂತ್‌ ಮಾನ್ ಪ್ರಶ್ನೆ

Please login to join discussion

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada