• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬೆಂಗಳೂರಿನಲ್ಲಿರುವ ತಮಿಳರನ್ನ ಬೇಗ ವಾಪಸ್ ಕರೆಸಿಕೊಳ್ಳಿ: ಸ್ಟಾಲಿನ್​ಗೆ ವಾಟಾಳ್ ನಾಗರಾಜ್ ಸವಾಲು..!

Any Mind by Any Mind
September 21, 2023
in ಇದೀಗ, ಕರ್ನಾಟಕ
0
ಬೆಂಗಳೂರಿನಲ್ಲಿರುವ ತಮಿಳರನ್ನ ಬೇಗ  ವಾಪಸ್ ಕರೆಸಿಕೊಳ್ಳಿ: ಸ್ಟಾಲಿನ್​ಗೆ ವಾಟಾಳ್ ನಾಗರಾಜ್ ಸವಾಲು..!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj), ಬೆಂಗಳೂರಿನಲ್ಲಿ ತಮಿಳರು ಇದ್ದಾರೆ. ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೊಸೂರು ಮೂಲಕ ಕರೆಸಿಕೊಳ್ಳಲಿ ಎಂದು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ತಮಿಳು ಚಿತ್ರ ಬಂದ್ ಮಾಡುತ್ತೇವೆ. ರಜನಿಕಾಂತ್ ಬೆಂಗಳೂರಿಗೆ ಬರಬಾರದು. ಕಾವೇರಿ ವಿಚಾರದಲ್ಲಿ ರಜನಿಕಾಂತ್‌ ಏನು ನಿರ್ಧಾರ ಮಾಡ್ತಾರೋ ಮಾಡಲಿ. ಕರ್ನಾಟಕದ ಪರ ನಿಲ್ತಾರಾ, ಅಲ್ಲ ತಮಿಳುನಾಡು ಪರ ನಿಲ್ತಾರಾ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ದಿಕ್ಕಿಲ್ಲದಂತೆ ಆಗಿದೆ. ಮುಖ್ಯಮಂತ್ರಿ ಏನು ನಿರ್ಧಾರ ಮಾಡ್ತಾರೆ ನೋಡೋಣ. ರಾಜ್ಯದ ಎಲ್ಲಾ ಸಂಸದರು ರಾಜೀನಾಮೆ ಕೊಟ್ಟು ನಿಮ್ಮ ಧೈರ್ಯ ತೋರಿಸಿ ಎಂದು ವಾಟಾಳ್ ಆಗ್ರಹಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಚರ್ಚೆ ಮಾಡುತ್ತೇವೆ. ನಂತರ ಹೋರಾಟಕ್ಕೆ ನಿರ್ಧರಿಸುತ್ತೇವೆ. ಕಾವೇರಿ ನೀರು ಬಿಡಲೇಬೇಕಂದ್ರೆ ಬಂದ್ ಮಾಡಲು ಸಿದ್ಧರಿದ್ದೇವೆ. ನಟರು ಬರುತ್ತೇವೆಂದು ಹೇಳಿದ್ದಾರೆ, ನೋಡೋಣ ಯಾವ ರೀತಿ ಬರುತ್ತಾರೆಂದು. ನಮ್ಮ ಕನ್ನಡ ನಟರು ಎಲ್ಲೆಲ್ಲೋ ಇದ್ದಾರೆ, ಎಲ್ಲರೂ ಇಳಿದು ಕೆಳಗೆ ಬರಲಿ. ನಾಡಿನ ಪರ, ಕನ್ನಡ ಪರ, ರೈತರ ಪರ ಸ್ಯಾಂಡಲ್‌ವುಡ್‌ ನಟರು ಬರಲಿ. ಬರದಿದ್ದರೆ ಏನು ಮಾಡಬೇಕೋ ಮಾಡೋಣ. ಶಾಸಕರು ಮುದ್ದು ಮುದ್ದಾಗಿ ಮಾತಾಡಲು ವಿಧಾನಸೌಧಕ್ಕೆ ಬರುತ್ತಾರೆ. ಅವರೆಲ್ಲಾ ಯಾವ ತೀರ್ಮಾನ ಕೈಗೊಳ್ಳುತ್ತಾರೆಂದು ನೋಡೋಣ ಎಂದು ನಾಗರಾಜ್ ಹೇಳಿದ್ದಾರೆ.

ಕಾವೇರಿ ಹೋರಾಟ ಅಂದ್ರೆ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆ, ಕನ್ನಡಪರ ಸಂಘಟನೆಗಳು, ರೈತರು ಇಷ್ಟಕ್ಕೇ ಸೀಮಿತ ಆಗಬಾರದು. ಕಾವೇರಿ ಹೋರಾಟ ಅಂದ್ರೆ ರಾಜ್ಯದ ಎಲ್ಲಾ ರೈತರು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಮಂಗಳೂರು ಹಾಗೂ ಬೆಂಗಳೂರಿನ ಪ್ರಶ್ನೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಉತ್ತರ ಕರ್ನಾಟಕದ ಭಾಗದವರು ಕಾವೇರಿ ನದಿ ನಮ್ಮದಲ್ಲ ಅಂತಾರೆ. ಮಂಗಳೂರಿನವರು ಸಮುದ್ರ ಪಕ್ಕದವರು, ನಮಗಲ್ಲ ಅಂತಾರೆ. ಮಂಡ್ಯ, ಚಾಮರಾಜನಗರ, ಕನ್ನಡಪರ ಸಂಘಟನೆಗಳಿಂದ ಮಾತ್ರ ಹೋರಾಟ ನಡೆಯುತ್ತಿದೆ. ಕಾವೇರಿ ಹೋರಾಟದಲ್ಲಿ ಬೆಂಗಳೂರಿನವರು ಬಹಳ ಮಂದಗತಿಯಲ್ಲಿದ್ದಾರೆ‌. ಮೊದಲು ಬೆಂಗಳೂರು ನಗರದಲ್ಲಿ ಶುರುವಾಗಿದ್ದು ತಮಿಳರ ದರ್ಬಾರು. ಬಳಿಕ ಮಾರ್ವಾಡಿ, ಸಿಂಧಿಗಳು, ವಿದೇಶದಿಂದ ಬಂದವರದ್ದು ದರ್ಬಾರು. ಇವರು ಯಾರಿಗೂ ಕನ್ನಡಿಗರ ಪರಿಸ್ಥಿತಿ ಅರ್ಥ ಆಗುತ್ತಿಲ್ಲ. ಬೆಂಗಳೂರಿಗೆ ಬರುವ ನೀರು ಒಂದು ದಿನ ಬರದಿದ್ರೆ ಕಷ್ಟ ಗೊತ್ತಾಗುತ್ತದೆ. ಬೆಂಗಳೂರಿನ ಜನರಿಗೆ ಕಾವೇರಿ ನೀರು ಬೇಕಾ? ಬೇಡವಾ? ಕಾವೇರಿ ನೀರು ಬೇಡ ಅನ್ನುವವರು ಸರ್ಕಾರಕ್ಕೆ ಪ್ರಮಾಣ ಪತ್ರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಸ್ಟಾಲಿನ್‌ಗೆ ಗೆಲುವಾಗಿದೆ. ನಮ್ಮ ವಾದ ಆಲಿಸಬೇಕಿತ್ತು. ಕತ್ತು ಕಡಿದಿದ್ದಾರೆ, ರುಂಡ ಕೆಳಗೆ ಬಿದ್ದಿದ್ದೇ ಸರಿ ಅಂತಾ ಸುಪ್ರೀಂ ಹೇಳಿದೆ ಎಂದು ವಾಟಾಳ್ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags: KarnatakaKaveri Rivermk stalinTamilnaduvatal nagaraj
Previous Post

ಮೋಜು-ಮಸ್ತಿಗಾಗಿ ದಾಳಿಂಬೆ ಹಣ್ಣು ಕದ್ದು, ರೈತರ ನಿದ್ದೆಗೆಡಿಸಿದ್ದ ಕಳ್ಳರು ಅಂದರ್‌..!

Next Post

ಹೈಕಮಾಂಡ್‌ ಒಪ್ಪಿಗೆ ನೀಡಿದ್ರೆ ಡಿಸಿಎಂ ಆಗ್ತೀನಿ: ಎಂ.ಬಿ ಪಾಟೀಲ್

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
Next Post
ಹೈಕಮಾಂಡ್‌  ಒಪ್ಪಿಗೆ ನೀಡಿದ್ರೆ ಡಿಸಿಎಂ  ಆಗ್ತೀನಿ: ಎಂ.ಬಿ ಪಾಟೀಲ್

ಹೈಕಮಾಂಡ್‌ ಒಪ್ಪಿಗೆ ನೀಡಿದ್ರೆ ಡಿಸಿಎಂ ಆಗ್ತೀನಿ: ಎಂ.ಬಿ ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada