ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಯಾವುದೇ ಸ್ಥಾನ ಇಲ್ಲದೇ ಮೂಲೆ ಗುಂಪಾಗಿದ್ದಾರೆ ಎನ್ನಲಾಗಿದ್ದ ಬಿಎಸ್ ಯಡಿಯೂರಪ್ಪ ಹಾಗೂ ಆರ್ ಎಸ್ ಎಸ್ ಮುಖಂಡ ಬಿಎಸ್ ಸಂತೋಷ್ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಚಿಸಿದ ನೂತನ ರಾಷ್ಟ್ರೀಯ ಸಂಸದೀಯ ಸಮಿತಿ ಪುನರಚನೆ ಮಾಡಲಾಗಿದ್ದು, 11 ಸದಸ್ಯರ ಪಟ್ಟಿಯಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ಆರ್ ಎಸ್ ಎಸ್ ಮುಖಂಡ ಬಿಎಲ್ ಸಂತೋಷ್ ಅವರಿಗೆ ಸ್ಥಾನ ನೀಡಲಾಗಿದೆ.
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಒಂದು ವರ್ಷದವರೆಗೆ ಯಾವುದೇ ಸ್ಥಾನ ಇಲ್ಲದೇ ಬಿಎಸ್ ಯಡಿಯೂರಪ್ಪ ಮೂಲೆಗುಂಪಾಗಿದ್ದರು. ಇದು ಪ್ರತಿಪಕ್ಷಗಳ ಟೀಕೆಗೆ ಪ್ರಮುಖ ಅಸ್ತ್ರವಾಗಿತ್ತು. ಅಲ್ಲದೇ ಸಾರ್ವತ್ರಿಕ ಚುನಾವಣೆಗೆ 1 ವರ್ಷ ಬಾಕಿ ಇರುವುದರಿಂದ ಸಂಸದೀಯ ಮಂಡಳಿ ಪುನರಚನೆ ಮಾಡಲಾಗಿದೆ.
ಪಕ್ಷದ ಉನ್ನತ ಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಹೊಂದಿರುವ ಸಂಸದೀಯ ಮಂಡಳಿಯಿಂದ ಹಿರಿಯ ಸಚಿವರಾದ ನಿತಿನ್ ಗಡ್ಕರಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೈಬಿಡಲಾಗಿದೆ.
ಸಂಸದೀಯ ಮಂಡಳಿಯಲ್ಲಿ ಬಿಎಸ್ ಯಡಿಯೂರಪ್ಪ, ಬಿಎಲ್ ಸಂತೋಷ್, ಸುಧಾ ಯಾದವ್, ಇಕ್ಬಾಲ್ ಸಿಂಗ್ ಲಾಲ್ ಪುರ, ಸರ್ಬಾನಂದ ಸೋನುವಾಲ್, ಕೆ. ಲಕ್ಷ್ಮಣ್ ಮತ್ತು ಸತ್ಯನಾರಾಯಣ ಜಟಿಯಾ.,
ಚುನಾವಣಾ ಸಮಿತಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಭುಪೇಂದ್ರ ಯಾದವ್ ಮತ್ತು ಓಂ ಮಾಥುರ್ ಸ್ಥಾನ ಪಡೆದ ಪ್ರಮುಖರು. ಶಹನಾವಾಜ್ ಹುಸೇನ್ ಚುನಾವಣಾ ಸಮಿತಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.