• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರು: ಸಿಎಂ ಬಸವರಾಜ ಬೊಮ್ಮಾಯಿ

Any Mind by Any Mind
April 21, 2022
in ಕರ್ನಾಟಕ
0
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಶಿವಮೊಗ್ಗದಲ್ಲಿ ನಿರ್ಮಾಣವಾಗಲಿರುವ ವಿಮಾನನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ADVERTISEMENT

ಡಿಸೆಂಬರ್ ತಿಂಗಳಲ್ಲಿ ಈ ವಿಮಾನ ನಿಲ್ದಾನದ ಉದ್ಘಾಟನೆಗೆ ಸಜ್ಜಾಗಲಿದೆ. ಅದಕ್ಕೂ ಮುನ್ನ ಎಲ್ಲಾ ಕಾಮಗಾರಿಗಳನ್ನು ಜೊತೆಯಾಗಿ ನಿರ್ವಹಿಸಿ ಜನರಿಗೆ ಲೋಕಾರ್ಪಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶಿವಮೊಗ್ಗದ ವಿಮಾನ ನಿಲ್ದಾಣ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಮಾಧ್ಯಮದ ವರೊಂದಿಗೆ ಮಾತನಾಡಿದ ಅವರು, ಕೇಂದ್ರ ವಿಮಾನಯಾನ ಸಚಿವರಿಗೆ ಪ್ರಸ್ತಾವನೆ ಕಳುಹಿಸಿ ಅಲ್ಲಿಂದ ಅನುಮೋದನೆ ಪಡೆದ ಕೂಡಲೇ ವಿಮಾನ ನಿಲ್ದಾಣಕ್ಕೆ ನಾಮಕರಣದ ಆದೇಶವನ್ನು ಪಡೆದುಕೊಳ್ಳುತ್ತೇವೆ. ಉಡಾನ್ ಯೋಜನೆಯಡಿ ಕಾಮಗಾರಿಯಲ್ಲಿ ಕೈಗೊಂಡಿದ್ದು, ವಿಮಾನನಿಲ್ದಾಣ ಪ್ರಾಧಿಕಾರದ ಅನುಮತಿ ಪಡೆದುಕೊಳ್ಳಲಾಗುವುದು. ಎಟಿಸಿ ಪರಿಕರಗಳನ್ನು ಅಳವಡಿಸಿ, ಸೌಲಭ್ಯಗಳನ್ನು ನಿರ್ಮಿಸಲಾಗುವುದು ತಿಳಿಸಿದರು.

ಶಿವಮೊಗ್ಗದ ಕೈಗಾರಿಕೋದ್ಯಮ, ಶಿಕ್ಷಣ, ಆರೋಗ್ಯ ಎಲ್ಲ ಅಭಿವೃದ್ಧಿಗೆ ವಿಮಾನ ಸೌಲಭ್ಯ ಬಹಳ ಪ್ರಮುಖವಾಗಿದ್ದು, ಜನರ ಸಮಯ ಹಾಗೂ ಹಣದ ಉಳಿತಾಯವೂ ಆಗುತ್ತದೆ. ಬೆಂಗಳೂರು ನಂತರ ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಬಿಜಾಪುರ ಮತ್ತು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯೋದ್ಯಮಕ್ಕೆ ಇಂಬು ನೀಡಲು ವಿಮಾನನಿಲ್ದಾಣದ ಅವಶ್ಯಕತೆ ಬಹಳ ವರ್ಷಗಳಿಂದ ಇದೆ.

ನಮ್ಮ ನಾಯಕರಾದ ಯಡಿಯೂರಪ್ಪನವರು ಶಿವಮೊಗ್ಗ ಏರ್ಪೋನರ್ಟ್ 2006-07 ರಿಂದ ಪ್ರಾರಂಭ ಮಾಡಲು ಯೋಜನೆ ರೂಪಿಸಿದ್ದರು. 2020 ರಲ್ಲಿ ಯೋಜನೆಗೆ ಅನುಮೋದನೆ ನೀಡಿ ಹಣ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ನಂತರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ 3200 ಮಿ ಉದ್ದದ ರನ್ ವೇ ಇರಲಿದೆ. ಏರ್ ಬಸ್ ಲ್ಯಾಂಡ್ ಆಗುವ ವ್ಯವಸ್ಥೆ ಆಗುತ್ತಿದೆ. ಅಂತರರಾಷ್ಟ್ರೀಯ ಮಟ್ಟದ ವಿಮಾನನಿಲ್ದಾಣವಾಗಲು ಎಲ್ಲ ಮೂಲಸೌಕರ್ಯಗಳು ಇಲ್ಲಿ ಸಿಗಲಿವೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೈಯಕ್ತಿಕವಾಗಿ ಈ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮ ವಹಿಸಿ ಅವರ ಆಡಳಿತದ ಅವಧಿಯಲ್ಲಿ ಹಲವಾರು ಮೂಲಭೂತ ಸೌಕರ್ಯಗಳನ್ನು ಶಿವಮೊಗ್ಗ ಜಿಲ್ಲೆಗೆ ಕಲ್ಪಿಸಿದ್ದಾರೆ. ವಿಮಾನ ನಿಲ್ದಾಣ ಬರುವ ದಿನಗಳಲ್ಲಿ ಕರ್ನಾಟಕದ ಸಮಗ್ರ ಅಭಿವೃದ್ಧಿ ಈ ಭಾಗದ ಕೈಗಾರಿಕಾ, ವಾಣಿಜ್ಯ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸಲಿದೆ. ಕರ್ನಾಟಕದ ಹೆಮ್ಮೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಲಿದೆ ಎಂದರು.

ವಿಮಾನನಿಲ್ದಾಣಕ್ಕೆ ಜಿಲ್ಲೆಯ ಹಲವಾರು ರೈತರು ಈಗಾಗಲೇ ಸಹಕಾರ ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ರೈತರ ಸಭೆಯನ್ನು ನಡೆಸಲಾಗಿದೆ ಎಂದು ಅವರು ಹೇಳಿದರು.

Previous Post

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಕೀರನ್ ಪೊಲಾರ್ಡ್

Next Post

ರಷ್ಯಾದಿಂದ ಜಗತ್ತಿನ ಅತ್ಯಂತ ಶಕ್ತಿಶಾಲಿ ಪರಮಾಣು ಸಾಮರ್ಥ್ಯದ ಕ್ಷಿಪಣಿ ಯಶಸ್ವಿ ಪರೀಕ್ಷೆ!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ರಷ್ಯಾದಿಂದ ಜಗತ್ತಿನ ಅತ್ಯಂತ ಶಕ್ತಿಶಾಲಿ ಪರಮಾಣು ಸಾಮರ್ಥ್ಯದ ಕ್ಷಿಪಣಿ ಯಶಸ್ವಿ ಪರೀಕ್ಷೆ!

ರಷ್ಯಾದಿಂದ ಜಗತ್ತಿನ ಅತ್ಯಂತ ಶಕ್ತಿಶಾಲಿ ಪರಮಾಣು ಸಾಮರ್ಥ್ಯದ ಕ್ಷಿಪಣಿ ಯಶಸ್ವಿ ಪರೀಕ್ಷೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada