• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಏಕಾಂಗಿ ರಾಜ್ಯ ಪ್ರವಾಸ ಕೈಬಿಟ್ಟ ಬಿ.ಎಸ್ ಯಡಿಯೂರಪ್ಪ; ಕಾರಣ ಏನು ಗೊತ್ತಾ?

ನಚಿಕೇತು by ನಚಿಕೇತು
August 28, 2021
in ಕರ್ನಾಟಕ
0
ಭ್ರಷ್ಟಾಚಾರ ದೂರು ವಜಾಗೊಳಿಸಿದ ಕೋರ್ಟ್: ಸಿಎಂಗೆ ನಿರಾಳ
Share on WhatsAppShare on FacebookShare on Telegram

ವೀರಶೈವ ಲಿಂಗಾಯತ ಸಮುದಾಯದ ಪ್ರಬಲ ವಿರೋಧದ ನಡುವೆಯೂ ಬಿ.ಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಾಯ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮತ್ತು ಕೆಲವು ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಹೈಕಮಾಂಡ್ ಬಿ.ಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಇದಾದ ಮೇಲೆ ಸಿಎಂ ಆಯ್ಕೆಯಲ್ಲೂ ಬಿ.ಎಸ್ ಯಡಿಯೂರಪ್ಪರನ್ನು ಕಡೆಗಣಿಸಬೇಕು ಎಂದು ಪ್ರಯತ್ನಿಸಿದರಾದರೂ ಆಗಲಿಲ್ಲ. ಹಾಗಾಗಿ ಕೊನೆಗೂ ಬಿ.ಎಸ್ ಯಡಿಯೂರಪ್ಪ ಒತ್ತಡಕ್ಕೆ ಮಣಿದು ತನ್ನ ಆಪ್ತರಾದ ಬಸವರಾಜ್ ಬೊಮ್ಮಾಯಿ ಅವರನ್ನೇ ಸಿಎಂ ಆಗಿ ಮಾಡಲಾಯ್ತು. ಬಿ.ಎಲ್ ಸಂತೋಷ್ ಟೀಮ್ಗೆ ಸೆಡ್ಡು ಹೊಡೆದು ಯಡಿಯೂರಪ್ಪ ತನ್ನ ಸಮುದಾಯದ ನಾಯಕರನ್ನೇ ಸಿಎಂ ಮಾಡಿದರು. ಎಲ್ಲಿ ಲಿಂಗಾಯತ ಸಮುದಾಯದ ಮತ ಕಳೆದುಕೊಳ್ಳಬೇಕಾಗುತ್ತದೋ ಎಂದು ಹೈಕಮಾಂಡ್ ಮಾಜಿ ಸಿಎಂ ಎಸ್.ಆರ್ ಬೊಮ್ಮಾಯಿ ಪುತ್ರ ಬಸವರಾಜ್ ಬೊಮ್ಮಾಯಿ ಅವರನ್ನೇ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿತು.

ADVERTISEMENT

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿ.ಎಸ್ ಯಡಿಯೂರಪ್ಪ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇತ್ತೀಚೆಗಷ್ಟೇ ಬಿ.ಎಸ್ ಯಡಿಯೂರಪ್ಪ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಈ ಬೆನ್ನಲ್ಲೇ ಯಡಿಯೂರಪ್ಪ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದರು. ಗಣೇಶ ಚತುರ್ಥಿ ಹಬ್ಬದ ಬಳಿಕ ಕೈಗೊಳ್ಳಲಿರುವ ರಾಜ್ಯ ಪ್ರವಾಸದ ರೂಪುರೇಷೆಯಲ್ಲಿ ಯಡಿಯೂರಪ್ಪ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.

ಹೌದು, ಈ ಮುನ್ನ ಯಡಿಯೂರಪ್ಪ ಒಬ್ಬರೆ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದರು. ಆದರೀಗ, ಒಬ್ಬರಲ್ಲದೇ ಪಕ್ಷದ ಮುಖಂಡರೊಂದಿಗೆ ರಾಜ್ಯ ಪ್ರವಾಸ ಮಾಡುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ಇದಕ್ಕೆ ಕಾರಣ ಬಿಜೆಪಿ ಪಕ್ಷದ ನಿಯಮಗಳು ಎನ್ನಲಾಗುತ್ತಿದೆ.

ಇನ್ನು, ನಿಯಮಗಳ ಪ್ರಕಾರ ಬಿಜೆಪಿ ಯಾವುದೇ ನಾಯಕ ರಾಜ್ಯ ಪ್ರವಾಸ ಕೈಗೊಳ್ಳಬೇಕಾದರೆ, ಪಕ್ಷದಿಂದಲೇ ಪ್ರವಾಸ ಕಾರ್ಯಕ್ರಮ ಸಿದ್ಧಪಡಿಸಬೇಕು. ನಿರ್ದಿಷ್ಟ ವಿಷಯಗಳನ್ನು ಇಟ್ಟುಕೊಂಡು ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿದು ಬಂದಿದೆ.

ಪಕ್ಷದಿಂದ ಪ್ರವಾಸ ಪಟ್ಟಿ ಮತ್ತು ವಿಷಯ ನಿಗದಿಯಾಗದೇ ಒಬ್ಬರೇ ಪ್ರವಾಸ ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿರುವ ಕಾರಣದಿಂದ ಏಕ ವ್ಯಕ್ತಿ ಪ್ರವಾಸ ಸೂಕ್ತವೂ ಅಲ್ಲ ಎಂದು ತೀರ್ಮಾನಿಸಿದ್ದಾರೆ.

ಸದ್ಯದಲ್ಲೇ ವಿಧಾನ ಪರಿಷತ್, ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆ ಎದುರಾಗಲಿದೆ. ಈ ಚುನಾವಣೆಯಲ್ಲಿ ಗೆಲ್ಲಲು ಶೀಘ್ರವೇ ರಾಜ್ಯದಲ್ಲಿ ಪಕ್ಷದಿಂದ ಸಂಘಟನಾ ಪ್ರವಾಸ ಆಯೋಜಿಸಬೇಕು. ಆಗ ಬೇಕಾದರೆ ಪಕ್ಷದ ಮುಖಂಡರೊಂದಿಗೆ ಪ್ರವಾಸ ಮಾಡಲಿದ್ದೇನೆ ಎಂಬ ತೀರ್ಮಾನಕ್ಕೆ ಬಿಎಸ್ವೈ ಬಂದಾಗಿದೆ.

ಪಕ್ಷದಿಂದ ಕಾರ್ಯಸೂಚಿ ಸಿದ್ಧವಾಗದೇ ಒಬ್ಬರೇ ಪ್ರವಾಸ ನಡೆಸುವುದು ಸರಿಯಲ್ಲ. ಇದರಿಂದ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತವೆ. ಈ ಉದ್ದೇಶದಿಂದ ಯಡಿಯೂರಪ್ಪ ಒಬ್ಬರೇ ಪ್ರವಾಸ ನಡೆಸುವುದು ನಿಲ್ಲಿಸಿದ್ದಾರೆ.

2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿರುವ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆ ಮಾಡುವುದಾಗಿ ತಿಳಿಸಿದ್ದರು. ಈ ಮೂಲಕ ಹೇಗಾದರೂ ಸರಿ ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Tags: BJPಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮೈಸೂರು ವಿವಿಯಲ್ಲಿ ಸಂಜೆ ವೇಳೆ ವಿದ್ಯಾರ್ಥಿನಿಯರ ಓಡಾಟಕ್ಕೆ ಬ್ರೇಕ್; ಟೀಕೆಯ ಬಳಿಕ ಆದೇಶ ಹಿಂಪಡೆದ ಕುಲಸಚಿವ

Next Post

ಮೂವರು ಲೇಖಕರ ಪಠ್ಯಗಳನ್ನು ಕೈಬಿಟ್ಡಿರುವುದನ್ನು ಸಮರ್ಥಿಸಿದ ದೆಹಲಿ ವಿವಿ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಮೂವರು ಲೇಖಕರ ಪಠ್ಯಗಳನ್ನು ಕೈಬಿಟ್ಡಿರುವುದನ್ನು ಸಮರ್ಥಿಸಿದ ದೆಹಲಿ ವಿವಿ

ಮೂವರು ಲೇಖಕರ ಪಠ್ಯಗಳನ್ನು ಕೈಬಿಟ್ಡಿರುವುದನ್ನು ಸಮರ್ಥಿಸಿದ ದೆಹಲಿ ವಿವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada