ಬೆಂಗಳೂರು (Bengaluru): ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B S Yediyurappa) ಅವರು ಇಂದು ಸಂಜೆ ದೆಹಲಿಗೆ (Dehli) ತೆರಳಲಿದ್ದಾರೆ.
ನಾಳೆ ಹಾಗೂ ನಾಡಿದ್ದು ಎರಡು ದಿನ ಕಾರ್ಯಕಾರಿಣಿ ಸಭೆ ನಡೆಯಲಿದೆ. ಹೀಗಾಗಿ ಇಂದು ಸಂಜೆ 7:40 ರ ವಿಮಾನದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ. ರಾತ್ರಿ 10:20 ಕ್ಕೆ ದೆಹಲಿಯ ವಿಮಾನನಿಲ್ದಾಣ ತಲುಪಲಿದ್ದಾರೆ. ಭಾನುವಾರ ಸಂಜೆ 8:55 ರ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.
#dehli #bengaluru #bjp #bjpmeeting #bsyediyurappa