• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಬಿ ಎಸ್ ವೈ ರಾಜಿನಾಮೆ ನೀಡಿದರೆ ವಲಸಿಗ ಸಚಿವರ ಸ್ಥಿತಿ ಅತಂತ್ರ?

Shivakumar A by Shivakumar A
July 23, 2021
in ಕರ್ನಾಟಕ, ರಾಜಕೀಯ
0
ಭ್ರಷ್ಟಾಚಾರ ದೂರು ವಜಾಗೊಳಿಸಿದ ಕೋರ್ಟ್: ಸಿಎಂಗೆ ನಿರಾಳ
Share on WhatsAppShare on FacebookShare on Telegram

ಕರ್ನಾಟಕದ ರಾಜಕಾರಣ ದಿನೇ ದಿನೇ ಕುತೂಹಲ ಹೆಚ್ಚಿಸುತ್ತಿದೆ. ಸಿಎಂ ಬದಲಾವಣೆಯ ಕುರಿತ ಸುದ್ದಿಗಳ ದಟ್ಟವಾಗುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ಮತ್ತು ಜೆಡಿಎಸ್’ನಿಂದ ಬಿಜೆಪಿಗೆ ಬಂದಿರುವ ವಲಸಿಗ ಸಚಿವರು ಅತಂತ್ರವಾಗುತ್ತಾರೆನೋ ಎಂಬ ಭಯದಲ್ಲಿದ್ದಾರೆ.

ADVERTISEMENT

ಇದಕ್ಕೆ ಪೂರಕವೆಂಬಂತೆ, ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕೆಲವು ಸಚಿವರು ಸಿಎಂ ಯಡಿಯೂರಪ್ಪ ಅವರೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಯಡಿಯೂರಪ್ಪ ಅವರ ನೀಡಿದ ಭರವಸೆಯ ಮೇರೆಗೆ ಈ ಹಿಂದೆ ಅಸ್ಥಿತ್ವದಲ್ಲಿ ಇದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿದ 17 ಜನ ಶಾಸಕರಲ್ಲಿ ಬಹುತೇಕರು ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಈಗ ಒಂದು ವೇಳೆ ಯಡಿಯೂರಪ್ಪನವರು ಸಿಎಂ ಸ್ಥಾನ ತೊರೆದಲ್ಲಿ ತಮ್ಮ ಸ್ಥಾನಕ್ಕೆ ಕುತ್ತು ಬರುವ ಸಾಧ‌್ಯತೆಯಿದೆ ಎಂಬ ಭಯ ಅವರನ್ನು ಕಾಡುತ್ತಿರುವ ಹಾಗೆ ಕಾಣುತ್ತಿದೆ.

ವಲಸಿಗ ನಾಯಕರಿಗೆ ಸಚಿವ ಸ್ಥಾನ ನೀಡುವ ಕುರಿತು ಬಿಜೆಪಿಯ ಮೂಲ ನಾಯಕರಲ್ಲಿಯೇ ಅಸಮಾಧಾನವಿತ್ತು. ಬಹುತೇಕ ಸಚಿವ ಸ್ಥಾನ ಆಕಾಂಕ್ಷಿಗಳು ನಿರಾಸೆ ಅನುಭವಿಸಿದ್ದರು. ಯಡಿಯೂರಪ್ಪ ಹಾಗೂ ವಲಸಿಗರ ವಿರುದ್ದ ಬಹಿರಂಗವಾಗಿಯೇ ಕಿಡಿಕಾರಿದ್ದರು. ಇವೆಲ್ಲದರ ನಡುವೆಯೂ, ಸಿಎಂ ಯಡಿಯೂರಪ್ಪನವರು ತಾವು ಕೊಟ್ಟ ಮಾತಿನಂತೆ ಬಹುತೇಕರನ್ನು ಸಚಿವರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದರು.

ಈಗ ತಾವಿರುವ ಸ್ಥಾನವನ್ನು ಕಳೆದುಕೊಳ್ಳುವ ಭೀತಿ ಎದುರಿಸುತ್ತಿರುವ ವಲಸಿಗ ನಾಯಕರು, ಗುರುವಾರ ಸಿಎಂ ಬಿ ಎಸ್ ವೈ ನೀಡಿರುವ ಹೇಳಿಕೆಯ ಕುರಿತು ಸ್ಪಷ್ಟನೆ ಕೇಳಿದ್ದಾರೆಂದು NDTV ವರದಿ ಮಾಡಿದೆ. ಶಿವರಾಮ್ ಹೆಬ್ಬಾರ್, ಬೈರತಿ ಬಸವರಾಜು, ಎಸ್ ಟಿ ಸೋಮಶೇಖರ್, ಸುಧಾಕರ್ ಸೇರಿದಂತೆ ಹಲವು ಸಚಿವರು ಸಿಎಂ ಅನ್ನು ಭೇಟಿಯಾಗಿದ್ದರು.

“ಕ್ಯಾಬಿನೆಟ್ ಮೀಟಿಂಗ್ ಮುಗಿದ ಬಳಿಕ, ಕೆಲವು ಸಚಿವರು ಸಿಎಂ ಕಚೇರಿಗೆ ತೆರಳಿದ್ದರು. ಗುರುವಾರ ಮಾಧ್ಯಮದ ಮುಂದೆ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ಕೇಳಿದ್ದರು,” ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ನಾವು ಯಡಿಯೂರಪ್ಪನವರನ್ನು ನಂಬಿ ಬಿಜೆಪಿಗೆ ಬಂದಿದ್ದೆವು. ಇದರೊಂದಿಗೆ ಪಕ್ಷದ ಸಿದ್ದಾಂತವನ್ನು ಕೂಡಾ ಒಪ್ಪಿಕೊಂಡಿದ್ದೇವೆ. ನಾವು ಬಿಜೆಪಿಗೆ ಬರಲೂ ಇದೇ ಮುಖ್ಯ ಕಾರಣ. ವೈಯಕ್ತಿಕ ಲಾಭ ಅಥವಾ ಅಧಿಕಾರದ ಆಸೆ ಅಲ್ಲ, ಎಂದು ಅವರು ಹೇಳಿದ್ದಾರೆ.

ಯಡಿಯೂರಪ್ಪ ರಾಜಿನಾಮೆ ನೀಡಿದರೆ, ವಲಸಿಗ ನಾಯಕರೂ ರಾಜಿನಾಮೆ ನೀಡುತ್ತಾರೆ ಎಂಬ ಸುದ್ದಿಯ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ ಸಿ ಪಾಟೀಲ್, ನಾವು ಯಾಕೆ ರಾಜಿನಾಮೆ ನೀಡಬೇಕು? ಏನಾಗಿದೆ? ಯಾವುದೇ ಕಾರಣವಿಲ್ಲದೆ ರಾಜಿನಾಮೆ ಏಕೆ ನೀಡಬೇಕು? ಇಲ್ಲಿ ಯಾರೂ ಹುಚ್ಚರಿಲ್ಲ. ಯಾರೂ ಮೂರ್ಖರಿಲ್ಲ. ಎಲ್ಲರೂ ಗೌರವಸ್ಥರೇ. ನಾವೆಲ್ಲಾ ಶಾಸಕರು, ಸಚಿವರು. ಏಕೆ ರಾಜಿನಾಮೆ ನೀಡಬೇಕು, ಹೇಳಿದ್ದಾರೆ.

ಒಟ್ಟಿನಲ್ಲಿ ಮೈತ್ರಿ ಸರ್ಕಾರದ ಬುಡ ಉರುಳಿಸಿದ್ದ ಜಂಪಿಂಗ್ ನಾಯಕರ ಬುಡಕ್ಕೆ ಕೊಡಲಿ ಏಟು ಬೀಳುವ ಸಾಧ್ಯತೆಯನ್ನು ಅಲ್ಲಗೆಳೆಯಲಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆಯಾದರೆ, ಯಡಿಯೂರಪ್ಪನವರು ಕೊಟ್ಟ ಮಾತನ್ನು ಹೊಸ ನಾಯಕರು ಉಳಿಸಿಕೊಳ್ಳುತ್ತಾರೆ ಎಂಬ ಕುರಿತು ದೃಢವಾದ ನಂಬಿಕೆಯೂ ಇಲ್ಲ. ಬಿಜೆಪಿ ಹೈಕಮಾಂಡ್ ನಿರ್ಧಾರ ವಲಸಿಗ ನಾಯಕರ ಮುಂದಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

Previous Post

ಮಕ್ಕಳ ಸುರಕ್ಷತೆಗಾಗಿ ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ: ಸಚಿವ ಡಾ.ಕೆ.ಸುಧಾಕರ್

Next Post

ಅಷ್ಟಕ್ಕೂ ಸಿಎಂ ಹೇಳಿದ ಜು.25ರ ಸಂದೇಶವೆಂದರೆ ಯಾವುದು?

Related Posts

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
0

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿಯಲ್ಲಿ ಕೈಗಾರಿಕೆಗಳಿಗಾಗಿ 1,000 ಎಕರೆ ಭೂಸ್ವಾಧೀನಕ್ಕೆ ಪ್ರಾಥಮಿಕ ಹಂತದ ಅಧಿಸೂಚನೆ ಆಗಿದ್ದು, ತ್ವರಿತಗತಿಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಬೇಕು. ಈ...

Read moreDetails
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

October 28, 2025
Next Post

ಅಷ್ಟಕ್ಕೂ ಸಿಎಂ ಹೇಳಿದ ಜು.25ರ ಸಂದೇಶವೆಂದರೆ ಯಾವುದು?

Please login to join discussion

Recent News

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
ಕಳ್ಳ ಅಂತಾ ಬೆನ್ನಟ್ಟಿದ್ದಕ್ಕೆ ಮರವೇರಿ ಕೂತ ಆಸಾಮಿ..!
Top Story

ಕಳ್ಳ ಅಂತಾ ಬೆನ್ನಟ್ಟಿದ್ದಕ್ಕೆ ಮರವೇರಿ ಕೂತ ಆಸಾಮಿ..!

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada