ಕಾಂಗ್ರೆಸ್ ನ ಸ್ನೇಹಿತರು ಕೇವಲ ಟೀಕೆ ಮಾಡಿಕೊಂಡು ಹೊರಟಿದ್ದಾರೆ. ಚುನಾವಣಾ ಫಲಿತಾಂಶ ಬಂದ ಬಳಿಕ, ಅವರಿಗೆ ವಾಸ್ತವ ಸ್ಥಿತಿ ಏನು ಎಂದು ಅರಿವಾಗುತ್ತದೆ. ಅಲ್ಲಿವರೆಗೆ ನಾನು ಏನನ್ನೂ ಮಾತನಾಡುವುದಿಲ್ಲ. ಜನರೇ ಅವರಿಗೆ ತಕ್ಕ ಬುದ್ದಿ ಕಲಿಸುತ್ತಾರೆ. ಬೆಲೆ ಏರಿಕೆ ಈ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.