• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಾಳಿಯಲ್ಲಿ ಗುಂಡು : ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
February 20, 2023
in Top Story, ಕರ್ನಾಟಕ
0
ಗಾಳಿಯಲ್ಲಿ ಗುಂಡು : ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು
Share on WhatsAppShare on FacebookShare on Telegram

ಹುಮನಾಬಾದ್ (ಬೀದರ್‌ ಜಿಲ್ಲೆ): ಪಟ್ಟಣ ಹೊರವಲಯದ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಶುಕ್ರವಾರ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇರೆಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಾಗೇಶ ಕಲ್ಲೂರ್ ದೂರು ನೀಡಿದ್ದರು.

ಶುಕ್ರವಾರ ಕಲ್ಲೂರ್ ಗ್ರಾಮದಿಂದ ಹುಮನಾಬಾದ್‌ಗೆ ಬರುವ ರಸ್ತೆಯಲ್ಲಿ ಸಿದ್ದಲಿಂಗ ಸ್ವಾಮೀಜಿ ಪಿಸ್ತೂಲ್ ಹಿಡಿದುಕೊಂಡು ನಿಂತಿದ್ದರು. ಸಮೀಪ ಹೋಗಿ ನೋಡುತ್ತಿದ್ದಂತೆ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿ ದರು. ಕಾನೂನಿನ ಅರಿವು ಇದ್ದರೂ ಸಾರ್ವಜನಿಕರ ಮಧ್ಯೆ ಗುಂಡು ಹಾರಿಸಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಭಾನುವಾರ ನಸುಕಿನ ಜಾವ ರಾಯ ಚೂರಿನ ಚೌಕಿಮಠದಲ್ಲಿ ಸಿದ್ದಲಿಂಗ ಸ್ವಾಮೀಜಿ ಅವರಿಂದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಪಿಎಸ್‌’ಐ ಮಂಜನಗೌಡ‌ ಪಾಟೀಲ ತಿಳಿಸಿದ್ದಾರೆ.

ಮತ್ತೊಂದು ಎಫ್‌ಐಆರ್

ಚಿಟಗುಪ್ಪ: ಸಮೀಪದ ಹುಮನಾಬಾದ್ ತಾಲ್ಲೂಕಿನ ಬಸವ ತೀರ್ಥ ಗ್ರಾಮದ ಬಸವ ತೀರ್ಥ ಮಠದಸಿದ್ದಲಿಂಗ ಸ್ವಾಮೀಜಿ ಅವರ ವಿರುದ್ಧ ಸಾಗುವಳಿ ಭೂಮಿ ಅತಿಕ್ರಮಣ ಮಾಡಿಕೊಂಡಿರುವ ಕುರಿತಂತೆ ಚಿಟಗುಪ್ಪ ಪೊಲೀಸ್‌ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿದೆ.

ನಮ್ಮ ಸಾಗುವಳಿ ಭೂಮಿ ಅತಿಕ್ರಮಣ ಮಾಡಿಕೊಂಡಿದ್ದನ್ನು ತಡೆಯಲು ಹೋದಾಗ ಹಲವರು ಹಲ್ಲೆ ನಡೆಸಿದ್ದು, ನನ್ನ ಪತ್ನಿ ಮೇಲೆ ಮಾನಭಂಗ ಮಾಡಲು ಪ್ರಯತ್ನಿಸಿದ್ದಾರೆ ಎಂದು ತಾಲ್ಲೂಕಿನ ಕಲ್ಲೂರ ತಾಂಡಾ ನಿವಾಸಿ ಸೋಮನಾಥ ಲಕ್ಷ್ಮಣ ಪವಾರ ಅವರು ನೀಡಿದ ದೂರಿನನ್ವಯ ಪೊಲೀಸ್ ಸಬ್ ಇನ್‌’ಸ್ಪೆಕ್ಟರ್ ಮಹೇಂದ್ರಕುಮಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶುಕ್ರವಾರ ಸ್ವಾಮೀಜಿ ಅವರು ನಮ್ಮ ಹೊಲದಲ್ಲಿ ಉಳುಮೆ ಮಾಡಲು ಮೂರು ಟ್ರ್ಯಾಕ್ಟರ್, ಒಂದು ಜೆಸಿಬಿ ತಂದಾಗ ತಡೆಯಲು ಹೋದೆವು. ಸ್ವಾಮೀಜಿ ಪರವಾಗಿ ರೇವಣಸಿದ್ದ ಮಾಣಿಕಪ್ಪ ಜಮಾದಾರ, ಅಶೋಕ ಮಾಸ್ಟರ್ ಹಾಗೂ ಇತರರು ಸೇರಿ ನನ್ನ ಮೇಲೆ ಹಲ್ಲೆ ಮಾಡಿ, ಪತ್ನಿಯ ಸೀರೆ ಎಳೆದು ಹೊಡೆಸಿದ್ದಾರೆ. ತಕ್ಷಣ ನನ್ನ ಮಕ್ಕಳಾದ ಬಸವರಾಜ್, ಅನಿಲ ಸ್ಥಳಕ್ಕೆ ಬಂದು ನಮ್ಮನ್ನು ಹುಮನಾಬಾದ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

Tags: ಬಸವತೀರ್ಥ ಮಠಸಿದ್ದಲಿಂಗ ಸ್ವಾಮೀಜಿಹುಮನಾಬಾದ್
Previous Post

SHIVARAJKUMAR | ವೇದ ಸಕ್ಸಸ್ ಮೀಟ್ ನಲ್ಲಿ ಶಿವರಾಜ್ ಕುಮಾರ್ ಪುತ್ರಿ | VEDHASUCCESSMEET | SHIVARAJ DAUGHTER

Next Post

RohiniSindhuri | ರೂಪ ಅವ್ರ ಬಗ್ಗೆ ಮೀಡಿಯಾ ಮುಂದೆ ಮಾತಾಡುಬಾರದು ಅಂತ ಇದ್ದೆ ಇನ್ನು ಮುಂದೆ ಮಾತಾಡುತ್ತೀನಿ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
RohiniSindhuri | ರೂಪ ಅವ್ರ ಬಗ್ಗೆ ಮೀಡಿಯಾ ಮುಂದೆ ಮಾತಾಡುಬಾರದು ಅಂತ ಇದ್ದೆ ಇನ್ನು ಮುಂದೆ ಮಾತಾಡುತ್ತೀನಿ

RohiniSindhuri | ರೂಪ ಅವ್ರ ಬಗ್ಗೆ ಮೀಡಿಯಾ ಮುಂದೆ ಮಾತಾಡುಬಾರದು ಅಂತ ಇದ್ದೆ ಇನ್ನು ಮುಂದೆ ಮಾತಾಡುತ್ತೀನಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada