• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬಂಪರ್‌.. ಯಾಕೆ ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
October 26, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬಂಪರ್‌.. ಯಾಕೆ ಗೊತ್ತಾ..?
Share on WhatsAppShare on FacebookShare on Telegram

ಹಾವೇರಿಯ ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌‌ ಬೊಮ್ಮಾಯಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಆಗಿದ್ದಾರೆ. ಆದರೆ ಕಾಂಗ್ರೆಸ್‌‌ನಿಂದ ಕಳೆದ ಬಾರಿ ಸೋಲುಂಡಿದ್ದ ಪಠಾಣ್‌ಗೆ ಟಿಕೆಟ್‌‌ ಕೊಡಲಾಗಿದೆ. ಇದು ಬಿಜೆಪಿಗೆ ಸಹಾಯ ಆಗುವ ಎಲ್ಲಾ ಲಕ್ಷಗಳುಗಳು ಶಿಗ್ಗಾಂವಿಯಲ್ಲಿ ಕಂಡು ಬರ್ತಿದೆ.

ADVERTISEMENT

ಶಿಗ್ಗಾಂವಿಯ ತಹಶೀಲ್ದಾರ್ ಕಚೇರಿಗೆ ಕೊನೆ ಗಳಿಗೆಯಲ್ಲಿ ಬೈಕ್​ನಲ್ಲಿ ಬಂದ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಆಗಿದ್ದಾರೆ. ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿರುವ ಖಾದ್ರಿ, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಬೈಕ್​ನಲ್ಲಿ ಬಂದ ಖಾದ್ರಿ, ಓಡುತ್ತಲೇ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿ ಬಳಿಕ ಮಾತನಾಡಿದ ಅಜ್ಜಂಪೀರ್ ಖಾದ್ರಿ, ಕಾಂಗ್ರೆಸ್, ಬಿಜೆಪಿ ಸೋಲಿಸೋದು ಒಂದೇ ನನ್ನ ಗುರಿ ಎಂದಿದ್ದಾರೆ. ಈ ತಾಲೂಕಿನ ಮಣ್ಣಲ್ಲಿ ಹುಟ್ಟಿ ಜನರ ಸೇವೆ ಮಾಡಿದ್ದೇನೆ. ಬಡವರ ಸೇವೆ ಮಾಡಿದ್ದೇನೆ. ನಾನು ಈ ತಾಲೂಕಿನ ಮಗ. ಹೊರಗಿನವರಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಲ್ಲ. ಯಾರು ನನ್ನ ಮನವೊಲಿಕೆ ಮಾಡಿಲ್ಲ. ಕಾಂಗ್ರೆಸ್‌, ಬಿಜೆಪಿ ಸೋಲಿಸೋದೇ ನನ್ನ ಗುರಿ. ಜನರೆ ತಿರ್ಪುಗಾರರು ಎಂದಿದ್ದಾರೆ.

ಶಿಗ್ಗಾಂವಿ-ಸವಣೂರು ಕಾಂಗ್ರೆಸ್‌‌ ಟಿಕೆಟ್ ವಿಚಾರ ತಾರಕಕ್ಕೇರಿದೆ. ಟಿಕೆಟ್ ವಂಚಿತ ಖಾದ್ರಿ ಬೆಂಬಲಿಗರು ಕಲ್ಲು ತೂರಾಟ ಮಾಡಿದ್ದಾರೆ. ಕಾಂಗ್ರೆಸ್​ ಟಿಕೆಟ್​ ವಂಚಿತ ಅಜ್ಜಂಪೀರ್ ಖಾದ್ರಿ ಮನೆಗೆ ಆಗಮಿಸಿದ್ದ ಸಚಿವ ಜಮೀರ್ ಅಹ್ಮದ್​ ಖಾನ್​ ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ. ಕಾರಿನ ಹಿಂಬದಿಯ ಗ್ಲಾಸ್ ನಜ್ಜುಗುಜ್ಜು ಮಾಡಿದ್ದು, ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಗ್ಗಾವಿ-ಸವಣೂರು ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌‌ಗೆ ಎರಡನೇ ಆಘಾತ ಎದುರಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನೂರು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ತೆರಳಿ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದು, ಹಿರಿಯ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪುತ್ರ ರಾಜು ಕುನ್ನೂರು ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್‌ ಸಿಗದ ಕಾರಣಕ್ಕೆ ಮಂಜುನಾಥ್‌ ಕುನ್ನೂರು ನಾಮಿನೇಷನ್ ಮಾಡಿದ್ದಾರೆ.

ಶಿಗ್ಗಾಂವಿ ಬಂಡಾಯದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಅಜ್ಜಂಪೀರ್ ಖಾದ್ರಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇಬ್ಬರಿಗೆ ಟಿಕೆಟ್‌ ಕೊಡಲು ಆಗಲ್ಲ. ನಮಗೆ ಭರತ್ ಬೊಮ್ಮಾಯಿ ಸಮರ್ಥ ಎದುರಾಳಿ ಅಲ್ಲವೇ ಅಲ್ಲಾ ಅಂತ ಹೇಳಿದ್ದಾರೆ. ಆದರೆ ಕಾಂಗ್ರೆಸ್‌‌ಗೆ ಇಬ್ಬರು ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿರುವುದು ಸೋಲಿನ ಮುನ್ಸೂಚನೆ ಎನ್ನುವಂತೆ ಕಾಣಿಸುತ್ತಿದೆ. ಬಂಡಾಯ ಶಮನ ಮಾಡ್ತಾರಾ..? ಅನ್ನೋದ್ರ ಮೇಲೆ ಭರತ್‌ ಬೊಮ್ಮಾಯಿ ಸೋಲು ಗೆಲುವಿನ ಭವಿಷ್ಯ ನಿರ್ಧಾರ ಆಗಲಿದೆ.

Tags: BJPbyelection shiggaonCongress Partykarnataka by election 2024Karnataka Electionkarnataka election newssandur by electionshiggaonshiggaon bjp election campaignshiggaon by electionshiggaon by election 2024shiggaon by election latest newsshiggaon by election newsshiggaon by election today newsshiggaon by pollsshiggaon by-electionshiggaon byelectionshiggaon byelection newsshiggaon constituencyshiggavi election 2024ಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ವೆಂಕ್ಯಾ’ ಸಿನಿಮಾ ಪ್ರದರ್ಶನ

Next Post

ದರ್ಶನ್‌ ಕೇಸ್‌ನ ಹೀರೋ ACP.. ಪುನೀತ್‌ ಕೆರೆಹಳ್ಳಿ ಕೇಸ್‌ನಲ್ಲಿ ಸಿಕ್ಕಿಬಿದ್ರಾ..?

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ದರ್ಶನ್‌ ಕೇಸ್‌ನ ಹೀರೋ ACP.. ಪುನೀತ್‌ ಕೆರೆಹಳ್ಳಿ ಕೇಸ್‌ನಲ್ಲಿ ಸಿಕ್ಕಿಬಿದ್ರಾ..?

ದರ್ಶನ್‌ ಕೇಸ್‌ನ ಹೀರೋ ACP.. ಪುನೀತ್‌ ಕೆರೆಹಳ್ಳಿ ಕೇಸ್‌ನಲ್ಲಿ ಸಿಕ್ಕಿಬಿದ್ರಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada