ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ 296ಕಿ.ಮೀ ಉದ್ದದ ಬುಂದೇಲ್ಖಂಡ್ ಎಕ್ಸ್ಪ್ರೆಸ್ ವೇ ಎಡಬಿಡದೆ ಬಳೆ ಸುರಿದ ಕಾರಣ ರಸ್ತೆಯ ಒಂದು ಬದಿಯಲ್ಲು ಗುಂಡಿ ಬಿದ್ದಿದೆ.
ಉತ್ತರಪ್ರದೇಶದ ಜಾಲೌನ್ ಜಿಲ್ಲೆಯ ಚಿರಿಯಾ ಸಲೆಂಪುರ ಪ್ರದೇಶದಲ್ಲಿ ಹಾದು ಹೋಗುವ ಮಾರ್ಗದಲ್ಲಿ ಕನಿಷ್ಠ ಒಂದೂವರೆ ಅಡಿ ಆಳವಷ್ಟು ಗುಂಡಿ ಬಿದ್ದಿದೆ ಎಂದು ತಿಳಿದು ಬಂದಿದೆ.

ವಿಷಯ ಬೆಳಕಿಗೆ ಬರುತ್ತಿದ್ದಂತೆ ತುರ್ತಾಗಿ ರಸತೆ ಗುಂಡಿ ಮುಚ್ಚಿರುವ ಅಧಿಕಾರಿಗಳು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ 15 ಸಾವಿರ ಕೋಟಿ ವೆಚ್ಚ ಮಾಡಿ ನಿರ್ಮಿಸಿರುವ ಎಕ್ಸ್ಪ್ರೆಸ್ ವೇ 5 ದಿನಗಳ ಮಳೆಯನ್ನು ಎದುರಿಸಲು ಸಾಧ್ಯವಾಗದೆ ಇದ್ದಾಗ ಅದರ ಗುಣಮಟ್ಟ ಹಾಗೂ ಕಾಮಗಾರಿ ನಡೆಸಿದ ಕಂಪನಿಯ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.