ರಾಷ್ಟ್ರೀಯ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದ ವೇಳೆ ಡಿಸಿಎಂ (Dcm) ಸಿಡಿಸಿದ ಸಿಎಂ ಖುರ್ಚಿ ಒಪ್ಪಂದದ ಬಾಂಬ್ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಒಂದೆಡೆ ಕಾಂಗ್ರೆಸ್ (Congress) ಪಕ್ಷದಲ್ಲೇ ಈ ಬಗ್ಗೆ ಗೊಂದಲಗಳು ಹೆಚ್ಚಾಗಿದ್ದರೆ, ಮತ್ತೊಂದೆಡೆ ಬಿಜೆಪಿ (Bjp) ಕೂಡ ಇದನ್ನೇ ಅಸ್ತ್ರವಾಗಿಸಿಕೊಂಡಿದೆ.
ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ (BY Vijayendra), ಸಿದ್ದರಾಮಯ್ಯ (Siddaramaiah) ಸಿಎಂ ಖುರ್ಚಿ ಬಿಟ್ಟು ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.ಈ ಬಗ್ಗೆ ಇಂದು ಕಲಬುರಗಿಯಲ್ಲಿ ಮಾತನಾಡಿದ ವಿಜಯೇಂದ್ರ, ಸಿದ್ದರಾಮಯ್ಯ ಸಿಎಂ ಖುರ್ಚಿ ಬಿಟ್ಟು ಕೊಡಲು ಮನಸ್ಸಿಲ್ಲದ ಕಾರಣ, ಮತ್ತೇ ರಾಜ್ಯದಲ್ಲಿ ಕಾಂಗ್ರೆಸ್ ಪಾಳಯದಲ್ಲೇ ಪವರ್ ಶೇರಿಂಗ್ ಬಗ್ಗೆ ಚರ್ಚೆ ನಡಿಯುತ್ತಿದೆ ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ಎಲ್ಲವೂ ಗೊಂದಲಮಯವಾಗಿದೆ. ಒಂದೆಡೆ ಡಿಕೆ ಶಿವಕುಮಾರ್ (Dk Shivakumar) ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿದೆ ಅಂತ ಹೇಳ್ತಾರೆ. ಆದ್ರೆ ಮತ್ತೊಮ್ಮೆ ಖುರ್ಚಿ ಖಾಲಿ ಇಲ್ಲ ಅಂತ ಅವರೇ ಹೇಳ್ತಾರೆ. ಇನ್ನು ಸಿಎಂ ಸಿದ್ದರಾಮಯ್ಯ ಯಾವುದೇ ಒಪ್ಪಂದ ಆಗಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ನಲ್ಲಿ ಜಿದ್ದಾ ಜಿದ್ದಿನ ಸಂಘರ್ಷ ನಡೆಯುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.