• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಾನಗಲ್, ಸಿಂದಗಿ ಚುನಾವಣೆ ಗೆಲ್ಲಲು ಬಿಜೆಪಿ ಸರ್ಕಸ್; ಮೂರು ತಂಡಗಳ ರಚನೆ, ಎಲ್ಲಾ ಜಾತಿಗಳ ಮತ ಸೆಳೆಯೋಕೆ ರಣತಂತ್ರ

ನಚಿಕೇತು by ನಚಿಕೇತು
October 13, 2021
in ಕರ್ನಾಟಕ
0
ಹಾನಗಲ್, ಸಿಂದಗಿ ಚುನಾವಣೆ ಗೆಲ್ಲಲು ಬಿಜೆಪಿ ಸರ್ಕಸ್; ಮೂರು ತಂಡಗಳ ರಚನೆ, ಎಲ್ಲಾ ಜಾತಿಗಳ ಮತ ಸೆಳೆಯೋಕೆ ರಣತಂತ್ರ
Share on WhatsAppShare on FacebookShare on Telegram

ರಾಜ್ಯದಲ್ಲಿ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ಚುನಾವಣಾ ಸಮರಕ್ಕೆ ಮೂರು ಪಕ್ಷದ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಈಗ ಅಬ್ಬರದ ಪ್ರಚಾರವೊಂದೇ ಬಾಕಿ ಉಳಿದಿದೆ. ಈ ಮಧ್ಯೆ ಉಪಕದನದ ಅಖಾಡದಲ್ಲಿ ಜೆಡಿಎಸ್‌- ಕಾಂಗ್ರೆಸ್‌ ನಾಯಕರ ವಾಗ್ಯುದ್ಧ ಆರಂಭವಾಗಿದೆ. ಇತ್ತ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರಕ್ಕೆ ಕೇಸರಿ ಪಾಳಯ ಮಾಸ್ಟರ್ ಪ್ಲಾನ್‌ ಹೆಣೆದಿದೆ.

ADVERTISEMENT

ಸಿಂದಗಿ, ಹಾನಗಲ್ ವಿಧಾನಸಭಾ ಉಪಚುನಾವಣೆಯ ಅಖಾಡದಲ್ಲಿ ರಾಜಕೀಯ ನಾಯಕರ ಜಟಾಪಟಿ ಶುರುವಾಗಿದೆ. ಪ್ರಚಾರದ ಕಣಕ್ಕೆ ಇಳಿಯುವ ಮುನ್ನವೇ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಸಿಂದಗಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್‌ ಮನಗೂಳಿ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ವಾಕ್ಸಮರ ಜೋರಾಗಿದೆ. ಏಟು-ಎದುರೇಟಿನ ಮಾತುಗಳಿಗೆ ಸಾಕ್ಷಿಯಾಗಿದೆ.

ಇನ್ನು, ಎಂ.ಸಿ. ಮನಗೂಳಿ ನಿಧನಕ್ಕೂ ಮುನ್ನ ಕಾಂಗ್ರೆಸ್ ನಾಯಕರನ್ನ ಭೇಟಿಯಾಗಿದ್ದರು ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮನುಗುಳಿ ಅವರು ಸಾಯುವ 15 ದಿನ ಮುಂಚೆ ಡಿಕೆಶಿ, ಸಿದ್ದರಾಮಯ್ಯ ಮಡಿಲಿಗೆ ಅವರ ಮಕ್ಕಳನ್ನ ಹಾಕಿ ನೋಡಿಕೊಳ್ಳಿ ಎಂದಿದ್ದರಂತೆ ಎಂದು ವ್ಯಂಗ್ಯವಾಡಿದ್ರು. ಇತ್ತ ಜೆಡಿಎಸ್ ನಾಯಕರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಟಾಂಗ್‌ ಕೊಟ್ಟಿದ್ದರು.

ಅತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಪರಸ್ಪರ ಕಿತ್ತಾಟದಲ್ಲಿ ತೊಡಗಿದ್ರೆ, ಇತ್ತ ಬಿಜೆಪಿ ಎರಡು ಕ್ಷೇತ್ರಗಳ ಗೆಲವಿಗಾಗಿ ಭಾರೀ ತಂತ್ರವನ್ನೇ ಹೆಣೆಯುತ್ತಿದೆ. ಮುಂದಿನ ಮೂರು ವಾರ ಹಾನಗಲ್ ಮತ್ತು ಸಿಂದಗಿಯಲ್ಲಿ ಪ್ರಚಾರಕ್ಕೆ ಮೂರು ತಂಡಗಳನ್ನ ರಚನೆ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಮೂರು ತಂಡಗಳು ಉಪಕದನದಲ್ಲಿ ಭರ್ಜರಿ ಕ್ಯಾಂಪೇನ್ ನಡೆಸಲಿವೆ.

ಹಾನಗಲ್, ಸಿಂದಗಿ ಎರಡೂ ಕ್ಷೇತ್ರಗಳಲ್ಲೂ ಅಬ್ಬರದ ಪ್ರಚಾರಕ್ಕೆ ಬಿಜೆಪಿ ತಯಾರಿ ನಡೆಸುತ್ತಿದೆ. ಅಕ್ಟೋಬರ್ 13 ರಿಂದ 28ರವರೆಗೂ ಸತತ ಪ್ರಚಾರಕ್ಕೆ ಸಿದ್ಧವಾಗುತ್ತಿದೆ. ಬಿಜೆಪಿಯಿಂದ ರೆಡಿಯಾಗಿರೋ ಮೂರು ತಂಡಗಳು ನಿರಂತರವಾಗಿ ಪ್ರಚಾರ ನಡೆಸಲಿವೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರ ಮಾರ್ಗದರ್ಶನ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ರ ನೇತೃತ್ವದಲ್ಲಿ ಪ್ರಚಾರ ಕಾರ್ಯ ನಡೆಯಲಿದೆ.

ಸಿಎಂ ನೇತೃತ್ವದ ತಂಡದಲ್ಲಿ ಸಚಿವರಿಂದ ಪ್ರಚಾರ ಕಾರ್ಯ ನಡೆದರೆ, ಯಡಿಯೂರಪ್ಪರ ನೇತೃತ್ವದಲ್ಲಿ ಶಾಸಕರು ಪ್ರಚಾರ ಮಾಡಲಿದ್ದಾರೆ. ಇತ್ತ ಕಟೀಲ್ ನೇತೃತ್ವದಲ್ಲಿ ಪದಾಧಿಕಾರಿಗಳಿಗೆ ಪ್ರಚಾರದ ಹೊಣೆಯನ್ನ ವಹಿಸಲಾಗಿದೆ.

ಎಲ್ಲಾ ಜಾತಿಗಳ ವೋಟ್ ಸೆಳೆಯೋಕೆ ತಂತ್ರ:

ಗಾಣಿಗ (ಲಿಂಗಾಯತರ ಉಪ-ಪಂಗಡ) ಮತದಾರರನ್ನು ಆಕರ್ಷಿಸಲು ಪಕ್ಷವು ಸವದಿ ಅವರನ್ನು ನೇಮಿಸಿದೆ. ಇತರ ಸಮುದಾಯಗಳಿಗೆ ಹೋಲಿಸಿದರೆ ಲಿಂಗಾಯತ ಸಮುದಾಯವು ಮತದಾನದಲ್ಲಿ ಸಿಂಹಪಾಲು ಹೊಂದಿದೆ. ಎಸ್‌ಸಿ ಮತಗಳನ್ನು ಗಳಿಸುವ ಜವಾಬ್ದಾರಿಯನ್ನು ಕಾರಜೋಳ್ ಅವರಿಗೆ ನೀಡಲಾಗಿದೆ.

ಸಿಸಿ ಪಾಟೀಲ್ ಮತ್ತು ಶಶಿಕಲಾ ಜೊಲ್ಲೆ ಲಿಂಗಾಯತ ಮತಗಳನ್ನು, ಈಶ್ವರಪ್ಪ ಮತ್ತು ಬೈರತಿ ಬಸವರಾಜ್ ಅವರನ್ನು ಕುರುಬರ ಮತಗಳಿಗಾಗಿ ಸಜ್ಜುಗೊಳಿಸಿದೆ. ಇದರ ಹೊರತಾಗಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಯಡಿಯೂರಪ್ಪ ಪಕ್ಷದ ಸ್ಟಾರ್ ಪ್ರಚಾರಕರಾಗುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸಿಂದಗಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಲಿಂಗಾಯತ ಅಭ್ಯರ್ಥಿಯನ್ನು (ಅಶೋಕ್ ಮನಗೂಳಿ) ಕಣಕ್ಕಿಳಿಸಿದೆ. ಈ ಹಿಂದೆ ಅವರು ಕುರುಬ ಅಥವಾ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಇದರಿಂದ ಖಂಡಿತವಾಗಿಯೂ ಲಿಂಗಾಯತ ಮತಗಳನ್ನು ವಿಭಜಿಸುತ್ತದೆ.

Tags: BJPCongress Partyಬಿಜೆಪಿಸಿಂದಗಿಹಾನಗಲ್
Previous Post

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತ ; ಕಲ್ಲಿದ್ದಲು ಕೊರತೆ ನೀಗಿಸಿ ಎಂದು ಪ್ರಹ್ಲಾದ್ ಜೋಶಿ ಬೊಮ್ಮಾಯಿ ಮನವಿ ಮಾಡಿದ್ದೇಕೆ?

Next Post

ಪೋಸ್ಟ್‌ ಕೋವಿಡ್‌ ಎಫೆಕ್ಟ್ – ಗ್ರಾಮೀಣ ಜನತೆಗೆ ಕಾಡುತಿದೆ ಮಾನಸಿಕ ಸಮಸ್ಯೆ, ಸುಸ್ತು!

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ಪೋಸ್ಟ್‌ ಕೋವಿಡ್‌ ಎಫೆಕ್ಟ್ – ಗ್ರಾಮೀಣ ಜನತೆಗೆ ಕಾಡುತಿದೆ ಮಾನಸಿಕ ಸಮಸ್ಯೆ, ಸುಸ್ತು!

ಪೋಸ್ಟ್‌ ಕೋವಿಡ್‌ ಎಫೆಕ್ಟ್ - ಗ್ರಾಮೀಣ ಜನತೆಗೆ ಕಾಡುತಿದೆ ಮಾನಸಿಕ ಸಮಸ್ಯೆ, ಸುಸ್ತು!

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada