Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

CAA ವಿರುದ್ಧದ ಪ್ರಕಟಣೆ ತೆಗೆಯುವಂತೆ ದೀದಿ ಸರ್ಕಾರಕ್ಕೆ ಕೋರ್ಟ್ ಸೂಚನೆ

CAA ವಿರುದ್ಧದ ಪ್ರಕಟಣೆ ತೆಗೆಯುವಂತೆ ದೀದಿ ಸರ್ಕಾರಕ್ಕೆ ಕೋರ್ಟ್ ಸೂಚನೆ
CAA ವಿರುದ್ಧದ ಪ್ರಕಟಣೆ ತೆಗೆಯುವಂತೆ ದೀದಿ ಸರ್ಕಾರಕ್ಕೆ ಕೋರ್ಟ್ ಸೂಚನೆ

December 24, 2019
Share on FacebookShare on Twitter

ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಪೌರತ್ವ ಕಾನೂನಿನ ವಿರುದ್ಧ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಂಸ್ಥೆಗಳ ಪೋರ್ಟಲ್ ಗಳು ಮತ್ತು ಫೇಸ್ ಬುಕ್ ನಲ್ಲಿ ಪ್ರಕಟಿಸಲಾಗಿರುವ ಎಲ್ಲಾ ಪ್ರಕಟಣೆಗಳನ್ನು ಕೂಡಲೇ ತೆಗೆದುಹಾಕುವಂತೆ ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಾಕೀತು ಮಾಡಿದೆ.

ಹೆಚ್ಚು ಓದಿದ ಸ್ಟೋರಿಗಳು

ಸುಪ್ರೀಂ ಕೋರ್ಟ್ ಗಮನ ಸೆಳೆಯಲು ಬೀದಿಗಿಳಿದು ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ

ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಳೆದುಕೊಳ್ಳುತ್ತೇನೆ : ಉದಯನಿಧಿ ಸ್ಟಾಲಿನ್

ಕಾವೇರಿ ನೀರಿ ನಿಯಂತ್ರಣ ಸಮಿತಿ ಸಭೆ: ಕರ್ನಾಟಕದ ಪರವಾಗಿ ಅಧಿಕಾರಿಗಳು ವಾದ ಮಂಡನೆ 

ಈ ಬಗ್ಗೆ ರಿಟ್ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ಕೇಂದ್ರ ಸರ್ಕಾರದ ಕಾನೂನಿನ ವಿರುದ್ಧವಾದ ಪ್ರಕಟಣೆಗಳನ್ನು ಪ್ರಕಟಿಸಿದ್ದ ಸರ್ಕಾರದ ಪೋರ್ಟಲ್ ಮತ್ತು ಫೇಸ್ ಬುಕ್ ಖಾತೆಗಳನ್ನು ಉಲ್ಲೇಖ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ತೊಟ್ಟಹಿಲ್ ಬಿ. ರಾಧಾಕೃಷ್ಣನ್ ಮತ್ತು ನ್ಯಾ. ಅರಿಜಿತ್ ಬ್ಯಾನರ್ಜಿ ಅವರಿದ್ದ ಪೀಠವು ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು ಇಂತಹ ಪ್ರಕಟಣೆಗಳನ್ನು ತೆಗೆದುಹಾಕಲಾಗಿದೆ ಎಂದು ಕೋರ್ಟಿಗೆ ಮಾಹಿತಿ ನೀಡಿದರು.

ಇಂತಹ ವಿಚಾರಗಳಿಗೆ ಸಂಬಂಧಿಸಿದಂತೆ ಸರ್ಕಾರದ ಖರ್ಚಿನಲ್ಲಿ ಈ ರೀತಿಯ ಪ್ರಕಟಣೆಗಳನ್ನು ಪ್ರಕಟಿಸಲು ಅವಕಾಶವಿದೆಯೇ ಇಲ್ಲವೇ ಅಥವಾ ಇಂತಹ ಪ್ರಕಟಣೆಗಳಿಗಾಗಿ ಸರ್ಕಾರಿ ಯಂತ್ರವನ್ನು ಬಳಸಿಕೊಳ್ಳಬಹುದೇ ಅಥವಾ ಇಲ್ಲವೇ ಎಂಬುದು ಕಾನೂನು ವಿಚಾರವಾಗಿದೆಯಾದ್ದರಿಂದ ಈ ವಿಚಾರವನ್ನು ಕಾನೂನು ಇಲಾಖೆಗೆ ಬಿಡುತ್ತೇವೆ. ಆದರೆ, ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಂಸ್ಥೆಗಳ ಪೋರ್ಟಲ್ ಮತ್ತು ಫೇಸ್ ಬುಕ್ ಸೈಟ್ ಗಳಲ್ಲಿ ಪ್ರಕಟಿಸಲಾಗಿರುವ ಪ್ರಕಟಣೆಗಳನ್ನು ತೆಗೆದುಹಾಕಬೇಕೆಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕೇಂದ್ರ ಸರ್ಕಾರದ ಕಾನೂನನ್ನು ಜಾರಿಗೆ ತರಬೇಕಾದದ್ದು ಒಂದು ರಾಜ್ಯದ ಮುಖ್ಯಮಂತ್ರಿ ಮತ್ತು ಆಡಳಿತ ವ್ಯವಸ್ಥೆಯ ಮುಖ್ಯಸ್ಥನ ಕರ್ತವ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈ ವಿಚಾರದಲ್ಲಿ ಪ್ರತಿಕ್ರಿಯೆ ಅಥವಾ ಹೇಳಿಕೆ ನೀಡಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗೆ ಅವಕಾಶವಿಲ್ಲ. ಅಲ್ಲದೇ ಸಂವಿಧಾನವನ್ನು ಜಾರಿಗೆ ತರುವುದು ಮತ್ತು ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರುವುದೂ ಸಹ ಇವರಿಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಪ್ರಸ್ತಾಪಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಎಲ್ಲಾ ಪ್ರಕಟಣೆಗಳನ್ನು ತೆಗೆದುಹಾಕುವಂತೆ ಆದೇಶ ನೀಡಿದೆ.

ಇದೇ ವೇಳೆ ಮುಂಜಾಗ್ರತಾ ಕ್ರಮವಾಗಿ ಅಹಿತಕರ ಘಟನೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳದಲ್ಲಿ ಇಂಟರ್ನೆಟ್ ಅನ್ನು ಕೆಲ ಸಮಯದವರಗೆ ಸ್ಥಗಿತಗೊಳಿಸಲಾಗಿತ್ತು. ಪರಿಸ್ಥಿತಿ ತಿಳಿಯಾಗಿರುವ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೌಲಭ್ಯವನ್ನು ಪುನಾರಂಭಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯವು ಇಂತಹ ನಿರ್ಬಂಧಗಳು ದೀರ್ಘಾವಧಿವರೆಗೆ ಮುಂದುವರಿಯಲು ಸಾಧ್ಯವಿಲ್ಲ. ಆಯಾಯ ಕಾಲಕ್ಕೆ ತಕ್ಕಂತೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಪ್ರತಿಭಟನೆ ನಡೆದ ಸಂದರ್ಭದಲ್ಲಿ ದುಷ್ಕರ್ಮಿಗಳು ರೈಲ್ವೆ ನಿಲ್ದಾಣಗಳು ಮತ್ತು ರೈಲುಗಳಿಗೆ ಸಾಕಷ್ಟು ಹಾನಿ ಮಾಡಿದ್ದರು. ಈ ವಿಚಾರವನ್ನು ಪ್ರಸ್ತಾಪಿಸಿದ ನ್ಯಾಯಪೀಠವು, ಪ್ರತಿಭಟನೆಯಿಂದ ಎಷ್ಟು ಪ್ರಮಾಣದಲ್ಲಿ ಹಾನಿಯಿಂದ ಇಲಾಖೆಗೆ ಎಷ್ಟು ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂಬುದರ ಬಗ್ಗೆ ವಿವರವಾದ ವರದಿ ನೀಡುವಂತೆ ರೈಲ್ವೆ ಇಲಾಖೆಗೆ ನಿರ್ದೇಶನ ನೀಡಿದೆ.

RS 500
RS 1500

SCAN HERE

Pratidhvani Youtube

«
Prev
1
/
5515
Next
»
loading
play
Tamil Naduನಲ್ಲಿ Siddaramaiah ಫೋಟೋಗೆ ಹಾರ ಹಾಕಿ ಧರಣಿ | ರಾಮನಗರದಲ್ಲಿ ತಮಿಳುನಾಡು ಸಿಎಂ Stalin​ಗೆ ತಿಥಿ!
play
Mandya : ರಾಮನಗರದಲ್ಲಿ ತಮಿಳುನಾಡು ಸಿಎಂ Stalin​ಗೆ ತಿಥಿ!
«
Prev
1
/
5515
Next
»
loading

don't miss it !

“ಬಾಹ್ಯಾಕಾಶ ವಿಜ್ಞಾನದಲ್ಲಿ ಭಾರತದ ಮಹಿಳಾ ಧ್ವನಿ” ಭಾರತದ ಬಾಹ್ಯಾಕಾಶ ವಿಜ್ಞಾನದ ನಡಿಗೆಯಲ್ಲಿ ಮಹಿಳಾ ವಿಜ್ಞಾನಿಗಳ ಸಾಧನೆ ಹಿರಿದು
ಅಂಕಣ

“ಬಾಹ್ಯಾಕಾಶ ವಿಜ್ಞಾನದಲ್ಲಿ ಭಾರತದ ಮಹಿಳಾ ಧ್ವನಿ” ಭಾರತದ ಬಾಹ್ಯಾಕಾಶ ವಿಜ್ಞಾನದ ನಡಿಗೆಯಲ್ಲಿ ಮಹಿಳಾ ವಿಜ್ಞಾನಿಗಳ ಸಾಧನೆ ಹಿರಿದು

by ನಾ ದಿವಾಕರ
September 23, 2023
ಮುಸ್ಲಿಂ ಸಮುದಾಯ ಮತ ಕೊಡಲಿಲ್ಲ ಎಂದು ಜೆಡಿಎಸ್ ಶಾಸಕರು ಬಹಿರಂಗವಾಗಿ ಹೇಳಲಿ: ಜಮೀರ್ ಅಹಮದ್ ಖಾನ್   
Top Story

ಮುಸ್ಲಿಂ ಸಮುದಾಯ ಮತ ಕೊಡಲಿಲ್ಲ ಎಂದು ಜೆಡಿಎಸ್ ಶಾಸಕರು ಬಹಿರಂಗವಾಗಿ ಹೇಳಲಿ: ಜಮೀರ್ ಅಹಮದ್ ಖಾನ್   

by ಪ್ರತಿಧ್ವನಿ
September 24, 2023
ಕೆಎಎಸ್ ಅಧಿಕಾರಿಗಳಿಗೆ ಪ್ರಾಧಾನ್ಯತೆ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಪೂರಕ: ಬಸವರಾಜ ಬೊಮ್ಮಾಯಿ
Top Story

ಕೆಎಎಸ್ ಅಧಿಕಾರಿಗಳಿಗೆ ಪ್ರಾಧಾನ್ಯತೆ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಪೂರಕ: ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
September 24, 2023
“ರಾಜಕೀಯ ಭ್ರಷ್ಟಾಚಾರವೂ ಸಾಂಸ್ಥಿಕ ಬೇರುಗಳೂ”
ಅಂಕಣ

“ರಾಜಕೀಯ ಭ್ರಷ್ಟಾಚಾರವೂ ಸಾಂಸ್ಥಿಕ ಬೇರುಗಳೂ”

by ನಾ ದಿವಾಕರ
September 22, 2023
ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!
Top Story

ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!

by ಪ್ರತಿಧ್ವನಿ
September 26, 2023
Next Post
ಹೇಮಂತ್ ಸೊರೇನ್ ಗೆಲುವಿನ ಹಿಂದಿತ್ತು ಬ್ಯಾಕ್ ರೂಂ ಹುಡುಗರ ಶ್ರಮ!

ಹೇಮಂತ್ ಸೊರೇನ್ ಗೆಲುವಿನ ಹಿಂದಿತ್ತು ಬ್ಯಾಕ್ ರೂಂ ಹುಡುಗರ ಶ್ರಮ!

ಮರಾಠಿಗರನ್ನು ತೃಪ್ತಿಪಡಿಸಲು ಬೆಳಗಾವಿ ವಿವಾದ ಕೆದಕಿದ ಉದ್ಧವ್ ಠಾಕ್ರೆ

ಮರಾಠಿಗರನ್ನು ತೃಪ್ತಿಪಡಿಸಲು ಬೆಳಗಾವಿ ವಿವಾದ ಕೆದಕಿದ ಉದ್ಧವ್ ಠಾಕ್ರೆ

ಸರಣಿ ತಪ್ಪುಗಳ ಮೂಲಕ ಹಿಮ್ಮುಖ ಚಲನೆ ಆರಂಭಿಸಿತೇ ಮೋದಿ-ಶಾ ಜೋಡಿ?

ಸರಣಿ ತಪ್ಪುಗಳ ಮೂಲಕ ಹಿಮ್ಮುಖ ಚಲನೆ ಆರಂಭಿಸಿತೇ ಮೋದಿ-ಶಾ ಜೋಡಿ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist