• Home
  • About Us
  • ಕರ್ನಾಟಕ
Saturday, June 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

CAA ವಿರೋಧಿಸಿ ಪ್ರತಿಭಟಿಸುವವರಿಗೆ ಅವಮಾನದ ಬಹುಮಾನ 

by
January 31, 2020
in ದೇಶ
0
CAA ವಿರೋಧಿಸಿ ಪ್ರತಿಭಟಿಸುವವರಿಗೆ ಅವಮಾನದ ಬಹುಮಾನ 
Share on WhatsAppShare on FacebookShare on Telegram

CAA ವಿರುದ್ದದ ಪ್ರತಿಭಟನೆಗಳು ದೇಶದಾದ್ಯಂತ ತಾರಕಕ್ಕೇರುತ್ತಿದ್ದಂತೇ, ಬಿಜೆಪಿಗರು ಭಯ ಹುಟ್ಟಿಸಿ ಪ್ರತಿಭಟನೆಯನ್ನು ಹತ್ತಿಕ್ಕುವ ಹಾದಿ ಹಿಡಿದಿದ್ದಾರೆ. ಅದರಲ್ಲೂ, ಕೆಲವು ರಾಜ್ಯಗಳ ಬಿಜೆಪಿ ನಾಯಕರು ಅಶ್ಲೀಲ ರೀತಿಯಲ್ಲಿ ಪ್ರತಿಭಟನಾಕಾರರನ್ನು ಹೀಯಾಳಿಸುವ ಪದ್ದತಿಯನ್ನು ಶುರು ಹಚ್ಚಿಕೊಂಡಿದ್ದಾರೆ. ಇತ್ತೀಚಿಗೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಅವರು, ಓರ್ವ ಪ್ರತಿಭಟನೆ ನಡೆಸುತ್ತಿದ್ದ ಹೆಣ್ಣನ್ನು ಬೆದರಿಸಿ ಅವಳು ಹಿಡಿದಿದ್ದ ಬೋರ್ಡ್‌ಅನ್ನು ಹರಿದು ಹಾಕಿದ್ದಾರೆ. ನಂತರ ನೀಡಿರುವ ಹೇಳಿಕೆಯಲ್ಲಿ, ಅವಳ ಹಣೆಬರಹ ಚೆನ್ನಾಗಿತ್ತು ಅದಕ್ಕೆ ಕೇವಲ ಬೋರ್ಡ್‌ ಮಾತ್ರ ಹರಿದು ಹಾಕಿದ್ದೇವೆಂದು, ಹೇಳಿದ್ದಾರೆ.

ADVERTISEMENT

ಇದೇನು ಮೊದಲ ಬಾರಿ ದಿಲೀಪ್‌ ಘೋಷ್‌ ಅವರು ಈ ರೀತಿಯ ಹೇಳಿಕೆಗಳನ್ನು ನೀಡಿರುವುದಲ್ಲ. ಇದಕ್ಕೂ ಹಿಂದೆ ಕೂಡಾ CAA ವಿರುದ್ದ ಪ್ರತಿಭಟಿಸಿದವರ ವಿರುದ್ದ ತುಚ್ಚವಾದ ಪದಗಳನ್ನು ಬಳಸಿ ಅಪಮಾನಿಸಿದ್ದರು. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಇರುವ ಕಾರಣ ಶತಾಯಗತಾಯ ಬಿಜೆಪಿಯನ್ನು ಗೆಲ್ಲಿಸಿಕೊಡಬೇಕೆಂಬ ಇವರ ಉದ್ದೇಶ, CAA ಪ್ರತಿಭಟನೆಯಿಂದ ಈಡೇರುವ ರೀತಿ ಕಾಣುತ್ತಿಲ್ಲ. ಬಿಜೆಪಿ ರ‌್ಯಾಲಿ ನಡೆಸಿದ ಪ್ರತಿ ಜಾಗದಲ್ಲಿ CAA ವಿರುದ್ದ ಪ್ರತಿಭಟನೆಯನ್ನು ಪಶ್ಚಿಮ ಬಂಗಾಳದಲ್ಲಿ ನಡೆಸಲಾಗಿತ್ತು. ಇದರಿಂದ ಹತಾಶರಾಗಿರುವ ಪ.ಬಂ. ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌, ಈಗ ತಮ್ಮ ಬೆಂಬಲಿಗರ ಸಹಾಯದಿಂದ ಬಲ ಪ್ರಯೋಗ ಮಾಡಿ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದ್ದಾರೆ.

ಇವರ ವಿರುದ್ದ ಎಫ್‌ಐಆರ್‌ ಏನೋ ದಾಖಲಾಗಿದೆ, ಆದರೂ ಪ್ರತೀ ಬಾರಿ ಈ ರೀತಿಯ ಹೇಳಿಕೆಗಳನ್ನು ಸಹಿಸುವುದು ಎಷ್ಟರ ಮಟ್ಟಿಗೆ ಸರಿ? ಪ್ರತಿಭಟನೆ ಮಾಡುತ್ತಿರುವುದು ಒಂದು ಹೆಣ್ಣು ಎಂಬ ಪರಿಜ್ಞಾನವೂ ಇಲ್ಲದೇ, ತಮ್ಮ ಬೆಂಬಲಿಗರ ಪಡೆಯನ್ನು ಕಟ್ಟಿಕೊಂಡು ಆ ಹುಡುಗಿಯ ಮೇಲೆ ದಬ್ಬಾಳಿಕೆ ನಡೆಸಿ ಏನು ಬಂತು ಪ್ರಯೋಜನ? ಇದರಿಂದಾಗಿ ದಿಲೀಪ್‌ ಘೊಷ್‌ ಕುರಿತಾಗಿ ಜನರಲ್ಲಿ ನಕಾರಾತ್ಮಕ ಭಾವನೆ ಮೂಡುತ್ತದೆಯೇ ಹೊರತು, ಚುನಾವಣೆ ಗೆಲ್ಲಲು ಇದು ಸಹಾಯವಾಗದು ಎಂಬುದು ಸತ್ಯ. ದಬ್ಬಾಳಿಕೆ ನಡೆಸುವುದಲ್ಲದೇ, ಆ ಹುಡುಗಿಯ ಅದೃಷ್ಟ ನೆಟ್ಟಗಿದ್ದ ಕಾರಣಕ್ಕೆ ಕೇವಲ ಬೋರ್ಡ್‌ ಹರಿದು ಹಾಕಿದ್ದೇವೆ ಎಂಬ ಹೇಳಿಕೆ ನೀಡುವುದು ಎಷ್ಟು ಸಮಂಜಸ?

ಇನ್ನು ಒಂದು ಹೆಜ್ಜೆ ಮುಂದುವರಿದು “ಇನ್ನು ಮುಂದೆ ಯಾರಾದರೂ ಬಿಜೆಪಿ ರ‌್ಯಾಲಿ ನಡೆಯುವ ದಾರಿಯಲ್ಲಿ ಪ್ರತಿಭಟನೆ ನಡೆಸಿದರೆ, ಅದನ್ನು ಸಹಿಸಲು ಸಾಧ್ಯವಿಲ್ಲ,” ಎಂದು ದಿಲೀಪ್‌ ಘೋಷ್‌ ಹೇಳಿದ್ದಾರೆ. ಹಾಗಾದರೆ, ನಿಜವಾಗಿಯೂ ಅಸಹಿಷ್ಣುಗಳಾಗಿರುವುದು ಯಾರು? ಈ ಹಿಂದೆ, ದೇಶದಲ್ಲಿ ಅಸಹಿಷ್ಣತತೆ ಇದೆ ಎಂದವರಿಗೆ ಪಾಕಿಸ್ತಾನದ ಟಿಕೆಟ್‌ ಕೊಡಿಸಿದವರು, ದಿಲೀಪ್‌ ಘೋಷ್‌ಗೆ ಯಾವ ದೇಶದ ಟಿಕೆಟ್‌ ಕೊಡಿಸುತ್ತಾರೆ? ಹಾಗಾದರೆ ಬಿಜೆಪಿಯ ನಾಯಕರಲ್ಲಿ ಪ್ರತಿಭಟನೆಯನ್ನು ಸಹಿಸಿಕೊಳ್ಳುವ ಶಕ್ತಿಯೇ ಇಲ್ಲವೇ? ಒಂದು ವೇಳೆ ಇಲ್ಲವಾದಲ್ಲಿ ಆ ಕಾರಣಕ್ಕಾಗಿಯೇ ದೇಶದೆಲ್ಲೆಡೆ ನಡೆಯುತ್ತಿರುವ ಪ್ರತಿಭಟನೆಗಳನ್ನು ಬಲವಂತವಾಗಿ ಹತ್ತಿಕ್ಕುತ್ತಿದ್ದಾರೆ ಎಂದಾಯಿತು. ಈ ಮಾತಿಗೆ ಪುಷ್ಟಿ ಕೊಡುವ ರೀತಿಯಲ್ಲಿ ಕೆಲವು ದಿನಗಳ ಹಿಂದೆ ದಿಲೀಪ್‌ ಘೋಷ್‌ ಅವರು ನೀಡಿರುವ ಹೇಳಿಕೆ ಏನೆಂದರೆ, “BJP ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ CAA ವಿರುದ್ದ ಪ್ರತಿಭಟನೆ ನಡೆಸಿದವರನ್ನು ನಾಯಿಗಳ ರೀತಿಯಲ್ಲಿ ಕೊಲ್ಲಲಾಗಿದೆ.”

ಇವೆಲ್ಲಾ ಹೇಳಿಕೆಗಳು ಕೇಂದ್ರ ಸರ್ಕಾರದ ವಿರುದ್ದ ದೇಶದ ಜನರಲ್ಲಿ ಇರುವ ಆಕ್ರೋಶವನ್ನು ಮತ್ತಷ್ಟು ಹೆಚ್ಚಾಗಿಸುತ್ತಿವೆ. ಪ್ರತಿಭಟನಾಕಾರರು ಬೆದರಿಸಿದಷ್ಟು ಬಲಿಷ್ಟರಾಗುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ 25ಕ್ಕೂ ಹೆಚ್ಚು ಜನರ ಸಾವು ಸಂಭವಿಸಿದರೂ, ಕರ್ನಾಟಕದ ಮಂಗಳೂರಿನಲ್ಲಿ ಇಬ್ಬರು ಮೃತಪಟ್ಟರೂ, ಪ್ರತಿಭಟನೆಗಳ ಕಾವು ಇನ್ನೂ ಇಳಿದಿಲ್ಲ. ಅದರ ಮೇಲೆ, ಬೆಂಕಿಗೆ ತುಪ್ಪ ಸುರಿದಂತೆ ಬಿಜೆಪಿ ನಾಯಕರ ಹೇಳಿಕೆಗಳು ಬರುತ್ತಿವೆ. ಪ್ರತಿಭಟಿಸುವ ಹಕ್ಕನ್ನು ಕಸಿಯುವ ಷಡ್ಯಂತ್ರ ಮತ್ತಷ್ಟು ಪ್ರಬಲವಾಗುತ್ತಿವೆ.

Tags: BJPDilip GhoshUttar PradeshWest Bengal Assembly Electionಉತ್ತರ ಪ್ರದೇಶ ಸರ್ಕಾರದಿಲೀಪ್ ಘೋಷ್ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಬಿಜೆಪಿ
Previous Post

ಜಾಮಿಯಾ ಗುಂಡಿನ ಸದ್ದು ಬೇರೆಲ್ಲೂ ಕೇಳಿಸದಿರಲಿ!

Next Post

ಪಿಸ್ತೂಲ್ ಖರೀದಿಗಿಂತ ರೆಸ್ಟಾರಂಟ್‌ ತೆರೆಯಲು ಹೆಚ್ಚು ದಾಖಲೆ ಸಲ್ಲಿಸಬೇಕು! 

Related Posts

Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
0

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ, ಪರಿಶೀಲನೆ, ಜಿಲ್ಲೆಯ 130 ಮನೆಗಳಿಗೆ ಭಾಗಶಃ ಹಾನಿ, ಜಿಲ್ಲಾಡಳಿತದಿಂದ ತ್ವರಿತ ಪರಿಹಾರ...

Read moreDetails

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

June 13, 2025

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

June 13, 2025

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

June 13, 2025

ಕರ್ನಾಟಕದ AI-ಸಿದ್ಧ ಭವಿಷ್ಯವನ್ನು ಎತ್ತಿ ತೋರಿಸಿದ ಪ್ರಿಯಾಂಕ್ ಖರ್ಗೆ

June 13, 2025
Next Post
ಪಿಸ್ತೂಲ್ ಖರೀದಿಗಿಂತ ರೆಸ್ಟಾರಂಟ್‌ ತೆರೆಯಲು ಹೆಚ್ಚು ದಾಖಲೆ ಸಲ್ಲಿಸಬೇಕು! 

ಪಿಸ್ತೂಲ್ ಖರೀದಿಗಿಂತ ರೆಸ್ಟಾರಂಟ್‌ ತೆರೆಯಲು ಹೆಚ್ಚು ದಾಖಲೆ ಸಲ್ಲಿಸಬೇಕು! 

Please login to join discussion

Recent News

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ
Top Story

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ

by ನಾ ದಿವಾಕರ
June 14, 2025
Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
Top Story

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

by ಪ್ರತಿಧ್ವನಿ
June 13, 2025
Top Story

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

by ಪ್ರತಿಧ್ವನಿ
June 13, 2025
Top Story

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

by ಪ್ರತಿಧ್ವನಿ
June 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ

ಆಧುನಿಕ ನಾಗರಿಕತೆಯ ಕರಾಳ ಚಹರೆಯ ಅನಾವರಣ

June 14, 2025

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

June 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada