Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

CAB: ಹಿಂಸಾಚಾರವೂ, ಹಠಮಾರಿ ಕೇಂದ್ರವೂ!

CAB: ಹಿಂಸಾಚಾರವೂ, ಹಠಮಾರಿ ಕೇಂದ್ರವೂ!
CAB: ಹಿಂಸಾಚಾರವೂ

December 16, 2019
Share on FacebookShare on Twitter

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪೌರತ್ವ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಯ ಕಾವು ತಾರಕಕ್ಕೇರುತ್ತಿದೆ. ಪಶ್ಚಿಮ ಬಂಗಾಳ, ಅಸ್ಸಾಂ ಸೇರಿದಂತೆ ಮತ್ತಿತರೆ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಸ್ವರೂಪ ಪಡೆದುಕೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಹೆಚ್ಚು ಓದಿದ ಸ್ಟೋರಿಗಳು

‘Nudity Not Obscene by Default’: Kerala HC Quashes Case Against Rehana Fathima : ”ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು”: ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!

ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌

ಕುಸ್ತಿಪಟುಗಳು ಪರೋಕ್ಷ ಪ್ರಭುತ್ವಕ್ಕೆ ಗುಲಾಮರಾಗಬೇಕೆ? ಅನ್ಯಾಯದ ವಿರುದ್ಧ ದನಿ ಎತ್ತಬಾರದೇ?

ನೀವು ಎಷ್ಟೇ ಪ್ರತಿಭಟನೆ ಮಾಡಿ, ನಾವು ಮಾಡುವುದನ್ನೇ ಮಾಡುವುದು ಎಂಬ ಧೋರಣೆಯಲ್ಲಿರುವ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಉದ್ದೇಶಿತ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ ಮತ್ತು ಹಿಂಸಾಚಾರಗಳು ನಡೆಯುತ್ತಿದ್ದರೂ ಸಂಬಂಧಪಟ್ಟ ರಾಜ್ಯಗಳ ಜತೆಗೆ ಅಥವಾ ಪ್ರತಿಭಟನೆ ನಡೆಸುತ್ತಿರುವ ಸಂಘ ಸಂಸ್ಥೆಗಳ ಜತೆಗೆ ಮಾತುಕತೆ ನಡೆಸುವ ಗೋಜಿಗೇ ಹೋಗುತ್ತಿಲ್ಲ.

ಪೌರತ್ವ ತಿದ್ದುಪಡಿ ಕಾಯ್ದೆ 2019 ನ್ನು ವಿರೋಧಿಸಿ ಪಶ್ಚಿಮಬಂಗಾಳದಲ್ಲಿ ಪ್ರತಿಭಟನೆಯು ಇಡೀ ರಾಜ್ಯವನ್ನು ಆವರಿಸುತ್ತಿದೆ. ಎಷ್ಟೇ ಬಿಗಿ ಭದ್ರತೆ ಒದಗಿಸಿದ್ದರೂ ಪ್ರತಿಭಟನೆ ಹಿಂಸಾರೂಪ ಪಡೆಯುತ್ತಿದೆ ಮತ್ತು ಹೆಚ್ಚಾಗುತ್ತಲೇ ಇದೆ. ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ.

ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರತಿಭಟನೆಗಳು ವ್ಯಾಪಕವಾಗುತ್ತಿವೆ. ಈ ಪ್ರತಿಭಟನೆಗಳಿಗೆ ಆಡಳಿತಾರೂಢ ಪಕ್ಷಗಳೇ ಪರೋಕ್ಷವಾಗಿ ಬೆಂಬಲ ನೀಡುತ್ತಿವೆ. ಈ ಮೂಲಕ ಕಾಯ್ದೆಯನ್ನು ವಾಪಸ್ ಪಡೆಯಬೇಕು ಅಥವಾ ಇತರೆ ಅಲ್ಪಸಂಖ್ಯಾತ ನಿರಾಶ್ರಿತರಿಗೂ ವಿಸ್ತರಣೆ ಮಾಡಬೇಕೆಂಬ ಒತ್ತಡವನ್ನು ಕೇಂದ್ರ ಸರ್ಕಾರದ ಮೇಲೆ ಹಾಕುವ ಪ್ರಯತ್ನಗಳನ್ನು ಈ ರಾಜ್ಯ ಸರ್ಕಾರಗಳು ಮಾಡುತ್ತಿವೆ.

ಕೇಂದ್ರ ಸರ್ಕಾರ ಧರ್ಮದ ಆಧಾರದಲ್ಲಿ ಪೌರತ್ವ ನೀಡಲೆಂದೇ ಈ ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದಿದೆ. ಈ ಮೂಲಕ ಮುಸ್ಲಿಂರನ್ನು ಕಡೆಗಣಿಡುತ್ತಿದೆ ಎಂಬ ಆರೋಪಗಳು ಬಲವಾಗಿ ಕೇಳಿ ಬರುತ್ತಿವೆ. ಈ ಕಾರಣದಿಂದಲೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡನ್ ಅಜೆಂಡಾದ ವಿರುದ್ಧ ಸೆಡ್ಡು ಹೊಡೆದು ನಿಂತಿರುವ ರಾಜ್ಯಗಳು ಒಂದು ವೇಳೆ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ಕಾನೂನಾಗಿ ಜಾರಿಗೆ ತಂದಲ್ಲಿ ತಮ್ಮ ರಾಜ್ಯಗಳಲ್ಲಿ ಮಾತ್ರ ಇದನ್ನು ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತಾ ಬಂದಿವೆ.

ಈಶಾನ್ಯ ರಾಜ್ಯಗಳಾದ ಅಸ್ಸಾಂ, ತ್ರಿಪುರಾ, ಮೇಘಾಲಯದಲ್ಲಿ ಜನರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ, ಇಲ್ಲಿ ಕೇಂದ್ರ ಸರ್ಕಾರ ಭದ್ರತೆಗಾಗಿ ಅರೆಸೇನಾ ಪಡೆಗಳನ್ನು ಕಳುಹಿಸಿಕೊಟ್ಟಿದೆ. ಆದರೆ, ಜನರ ಆಕ್ರೋಶ ಮಾತ್ರ ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ.

ಇನ್ನು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯದ ಮಾಲ್ಡಾ, ಮುರ್ಶಿದಾಬಾದ್, ಉತ್ತರ ದೀನಜ್ ಪುರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಎಷ್ಟೇ ಬಿಗಿ ಬಂದೋಬಸ್ತ್ ಮಾಡಿದ್ದರೂ ಪ್ರತಿಭಟನಾಕಾರರು ಮಣಿಯುತ್ತಿಲ್ಲ. ಮೊದಲು ಉದ್ದೇಶಿತ ಕಾಯ್ದೆಯ ನಿರ್ಧಾರದಿಂದ ಕೇಂದ್ರ ಸರ್ಕಾರ ಹೊರಬರಬೇಕು. ಎಲ್ಲರನ್ನೂ ಸರಿ ಸಮಾನರಂತೆ ಕಾಣಬೇಕು. ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ರೀತಿಯಲ್ಲಿರುವ ಈ ಕಾಯ್ದೆ ಬೇಡವೇ ಬೇಡ ಎಂದು ಪಟ್ಟು ಹಿಡಿದು ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಅಲ್ಲಲ್ಲಿ ಕಲ್ಲುತೂರಾಟ ನಡೆದಿದ್ದು, ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಇದರ ಪರಿಣಾಮ ಹಲವಾರು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.

ಮತ್ತೊಂದೆಡೆ, ದೇಶದ ರಾಜಧಾನಿ ದೆಹಲಿಗೂ ಪ್ರತಿಭಟನೆ ವಿಸ್ತಾರಗೊಂಡಿದೆ. ದಕ್ಷಿಣ ದೆಹಲಿಯಲ್ಲಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿ ಸಂಘಟನೆಗಳು ಬಸ್ಸುಗಳಿಗೆ ಬೆಂಕಿ ಹಚ್ಚಿದ್ದರಿಂದ ವಿವಿಯಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಎಲ್ಲಾ ಪ್ರತಿಭಟನೆಗಳು, ಪರ-ವಿರೋಧಗಳ ಹೋರಾಟಗಳ ನಡೆಯುತ್ತಿರುವ ಈ ಸಂದರ್ಭದಲ್ಲಿ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜನಾಂದೋಲನ ನಡೆಸುವ ನಿಟ್ಟಿನಲ್ಲಿ `ಭಾರತ ಉಳಿಸಿ’ ಆಂದೋಲನಕ್ಕೆ ಚಾಲನೆ ನೀಡಿದೆ. ಇದೇ ವೇಳೆ ಪ್ರಗತಿಪರ ಸಂಘಟನೆಗಳು ದೇಶಾದ್ಯಂತ ಈ ವಿವಾದಿತ ಕಾಯ್ದೆ ವಿರುದ್ಧ ಜನಾಭಿಪ್ರಾಯ ಸಂಗ್ರಹಿಸಲೆಂದು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ.

ಕೇಂದ್ರ ಸರ್ಕಾರದ ಹಠಮಾರಿ ಧೋರಣೆ

ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದರೂ, ಇದೊಂದು ವಿವಾದವಾಗುತ್ತದೆ ಎಂಬ ಅರಿವಿದ್ದರೂ ಕೇಂದ್ರ ಸರ್ಕಾರ ಹಠಕ್ಕೆ ಬಿದ್ದು ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿದೆ. ಯಾರು ಎಷ್ಟೇ ಪ್ರತಿಭಟನೆಗಳನ್ನು ನಡೆಸಿದರೂ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರ ಕಾಯ್ದೆ ಜಾರಿಗೆ ಮುನ್ನಡಿ ಇಡುತ್ತಿದೆ. ಇದಕ್ಕೆ ಬೇಕಾದ ಅಂದರೆ, ತಿದ್ದುಪಡಿ ಕಾಯ್ದೆಯಲ್ಲಿ ಪ್ರಸ್ತಾಪ ಮಾಡಿರುವ ಆರು ಧರ್ಮಗಳ ನಿರಾಶ್ರಿತರಿಗೆ ಪೌರತ್ವ ನೀಡಲು ಬೇಕಾದ ಎಲ್ಲಾ ಪ್ರಕ್ರಿಯೆಗಳನ್ನು ಆರಂಭಿಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಈ ಕಾಯ್ದೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಮುಖ ರೂವಾರಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ `ನಿರಾಶ್ರಿತರಿಗೆ ಪೌರತ್ವವನ್ನು ನೀಡುವ ಕಾಯ್ದೆ ಇದಾಗಿದೆಯೇ ಹೊರತು, ವಾಪಸ್ ಪಡೆಯಲು ಮಂಡಿಸಿರುವ ಕಾಯ್ದೆಯಲ್ಲ’ ಎಂದು ಹೇಳುವ ಮೂಲಕ ಪ್ರತಿಭಟನೆಯ ಕಿಚ್ಚು ಹೆಚ್ಚು ಹೊತ್ತಿ ಉರಿಯುವಂತೆ ಮಾಡಿದ್ದಾರೆ.

ಒಂದು ವೇಳೆ ಈ ಕಾಯ್ದೆ ಕಾನೂನಾಗಿ ತಕ್ಷಣಕ್ಕೆ ಜಾರಿಗೆ ಬಂದರೆ ಸದ್ಯಕ್ಕೆ 35 ಸಾವಿರ ಅಕ್ರಮ ವಲಸಿಗರಿಗೆ ಭಾರತೀಯ ಪೌರತ್ವ ಸಿಗಲಿದೆ. ಇವರಲ್ಲಿ 25 ಸಾವಿರ ಹಿಂದೂಗಳು, 5.5 ಸಾವಿರ ಸಿಖ್ಖರು ಮತ್ತು ಉಳಿದಂತೆ ಕ್ರಿಶ್ಚಿಯನ್ನರು, ಪಾರ್ಸಿಗಳು ಹಾಗೂ ಬೌದ್ಧರಿಗೆ ಪೌರತ್ವ ಸಿಗಲಿದೆ. ಈ ಎಲ್ಲಾ 35 ಸಾವಿರ ವಲಸಿಗರ ಮಾಹಿತಿಯನ್ನು ಕೇಂದ್ರ ಸರ್ಕಾರ ತರಿಸಿಕೊಂಡಿದ್ದು, ಪೌರತ್ವ ನೀಡುವ ಪ್ರಕ್ರಿಯೆಯನ್ನು ಸದ್ಯದಲ್ಲೇ ಆರಂಭಿಸುವ ಸಾಧ್ಯತೆಗಳಿವೆ.

RS 500
RS 1500

SCAN HERE

Pratidhvani Youtube

«
Prev
1
/
4568
Next
»
loading
play
H.Vishwanath; ಗ್ಯಾರಂಟಿ ಯೋಜನೆಗಳನ್ನ ಸಿಕ್ಕ ಸಿಕ್ಕವರಿಗೆ ನೀಡಲಾಗುವುದಿಲ್ಲ | Congress guarantee | CM
play
H.Vishwanath; ಡಿ.ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ MLC H. ವಿಶ್ವನಾಥ್ ಭಾಗಿ|Devarajaarasu
«
Prev
1
/
4568
Next
»
loading

don't miss it !

12 ವರ್ಷ ಮೇಲ್ಪಟ್ಟ ಹಸುಗಳ ವಧೆಗೆ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ
ರಾಜಕೀಯ

12 ವರ್ಷ ಮೇಲ್ಪಟ್ಟ ಹಸುಗಳ ವಧೆಗೆ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

by Prathidhvani
June 5, 2023
BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!
Top Story

BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!

by ಪ್ರತಿಧ್ವನಿ
May 30, 2023
Actress Rachita Ram : ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ನಟಿ ರಚಿತಾ ರಾಮ್..!
Top Story

Actress Rachita Ram : ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ನಟಿ ರಚಿತಾ ರಾಮ್..!

by ಪ್ರತಿಧ್ವನಿ
May 31, 2023
ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ
ಸಿನಿಮಾ

ಅಭಿಷೇಕ್​ ಅಂಬರೀಶ್​ – ಅವಿವಾ ಬಿಡಪ ವಿವಾಹದ ಎಕ್ಸ್​ಕ್ಲೂಸಿವ್​ ಫೋಟೋಸ್​ ಇಲ್ಲಿದೆ ನೋಡಿ

by Prathidhvani
June 5, 2023
ಬೇರೆ ರಾಜ್ಯಗಳ ಚುನಾವಣೆಯಲ್ಲಿ ”ಕರ್ನಾಟಕ ಮಾಡೆಲ್” ಅಸ್ತ್ರ ಬಳಸಲಿದ್ಯಾ ಕಾಂಗ್ರೆಸ್.!?
Top Story

ಬೇರೆ ರಾಜ್ಯಗಳ ಚುನಾವಣೆಯಲ್ಲಿ ”ಕರ್ನಾಟಕ ಮಾಡೆಲ್” ಅಸ್ತ್ರ ಬಳಸಲಿದ್ಯಾ ಕಾಂಗ್ರೆಸ್.!?

by ಪ್ರತಿಧ್ವನಿ
June 6, 2023
Next Post
15 ಆನೆಗಳ ಜಾಗದಲ್ಲಿ 25 ಆನೆ

15 ಆನೆಗಳ ಜಾಗದಲ್ಲಿ 25 ಆನೆ, ಸಕ್ರೆಬೈಲ್‌ ಬಿಡಾರದ ಕಣ್ಣೀರ ಕಥೆ

ಟ್ವಿಟ್ಟರ್‌ನಲ್ಲಿ #ResignAmitShah ಹ್ಯಾಶ್‌ಟ್ಯಾಗ್‌ 63 ಸಾವಿರ ದಾಟುತ್ತಿದೆ

ಟ್ವಿಟ್ಟರ್‌ನಲ್ಲಿ #ResignAmitShah ಹ್ಯಾಶ್‌ಟ್ಯಾಗ್‌ 63 ಸಾವಿರ ದಾಟುತ್ತಿದೆ

ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ

ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist