• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕ್ಯಾಬ್ ಚಾಲಕನ ಬಂಧನ

ನೀಲಿ by ನೀಲಿ
September 23, 2021
in ಕರ್ನಾಟಕ
0
ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕ್ಯಾಬ್ ಚಾಲಕನ ಬಂಧನ
Share on WhatsAppShare on FacebookShare on Telegram

ಸೆಪ್ಟೆಂಬರ್ 22 ರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಮಹಿಳೆ ತಾನು ಬುಕ್ ಮಾಡಿದ ಕ್ಯಾಬ್ ಚಾಲಕ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಮಹಿಳೆ ದೂರನ್ನು ಆಧರಿಸಿ ಜೀವನ್ ಭೀಮ್ ನಗರ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.

ADVERTISEMENT

ಎಸ್ಪಿ ಶರಣಪ್ಪ, ಪೊಲೀಸ್ ಉಪ ಆಯುಕ್ತರು (ಪೂರ್ವ) ದೂರು ದಾಖಲಾದ ತಕ್ಷಣ ಮೂರು ತಂಡಗಳನ್ನು ರಚಿಸಿ ಕಾರ್ಯಚರಣೆ ನಡೆಸಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶ ಮೂಲದ ದೇವರಾಜುಲು ಎಂದು ಗುರುತಿಸಿ ಆತನನ್ನು ಬಂಧಿಸಿದ್ದಾರೆ.

ಮುರುಗೇಶಪಾಳ್ಯದಲ್ಲಿ ವಾಸಿಸುತ್ತಿರುವ ಮಹಿಳೆ ನಗರದ ಪ್ರತಿಷ್ಠಿತ  ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದು, ತಾನು ಎಚ್ಎಸ್ಆರ್ ಲೇಔಟ್ನಿಂದ ಮುರುಗೇಶಪಾಳ್ಯವರೆಗಿನ taxi aggregatorರಿಂದ ಕ್ಯಾಬ್ ಬುಕ್ ಮಾಡಿದ್ದಾಗಿ ಹೇಳಿದ್ದಾರೆ. ಆಕೆಯ ಮನೆಯ ಮುಂದೆಯೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯಿಂದ ಸಂತ್ರಸ್ತೆ ಮತ್ತು ಚಾಲಕನ ನಡುವೆ ವಾಗ್ವಾದ ನಡೆದಿರುವುದು ಕಂಡುಬರುತ್ತದೆ. ದೇವರಾಜುಲು ತಾನು ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ ಎಂದು ಹೇಳಿಕೊಂಡಿದ್ದಾನೆ. ಈ ಘಟನೆಯ ಬಗ್ಗೆ ಪೊಲೀಸರಿಗೆ ಹಲವು ಅನುಮಾನಗಳಿದ್ದು, ಮಹಿಳೆ ಚಾಲಕನ ವಿರುದ್ದ ಕೂಗಾಡುವುದನ್ನು ಯಾಕೆ ಯಾರೂ ಕೇಳಲಿಲ್ಲ ಅಥವಾ ಕೇಳಿಸಿಕೊಂಡು ಏನಾಗಿದೆ ಎಂದು ನೋಡಿಲ್ಲ. ಪ್ರಯಾಣದ ದುಡ್ಡಿನ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆಯೇ ಎಂದು ತನಿಖೆಯ ಮೂಲಕ ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಎಸ್. ಮುರುಗನ್, ಹೆಚ್ಚುವರಿ ಪೊಲೀಸ್ ಆಯುಕ್ತರು (ಪೂರ್ವ), “ಮುರುಘೇಶಪಾಳ್ಯದಲ್ಲಿ ಮುಂಜಾನೆ 3.30 ರಿಂದ 4 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಆಕೆ ತನ್ನ ಸ್ನೇಹಿತನ ಮನೆಯಿಂದ ಮನೆಗೆ ಮರಳಲು ಕ್ಯಾಬ್ ಬುಕ್ ಮಾಡಿದ್ದಳು. ಒಂದು ಪ್ರಕರಣ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ದಾಖಲಾಗಿದೆ- ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ, ತನಿಖೆಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಆರೋಪಿಯು ಕಾರಿನ ಮಾಲೀಕರೊಂದಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಅವರು taxi aggregatorಗೆ ವಾಹನವನ್ನು ಸೇರಿಸಿದ್ದು ಅವರು 2020ರ ಆರಂಭದಿಂದಲೂ ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ಆರೋಪಿ ಕೂಡ ಪರೀಕ್ಷೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವು ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಜನಪ್ರಿಯ ಪ್ರವಾಸಿ ತಾಣ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಆಕೆಯ ಸ್ನೇಹಿತನ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದರು. ಕರ್ನಾಟಕ ಪೊಲೀಸರು ರೈಲು ಟಿಕೆಟ್ ನಂತಹ ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ಐವರು ಅಪರಾಧಿಗಳನ್ನು ಬಂಧಿಸಿದ್ದರು. ತರುವಾಯ, ಅವರು ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ ದತ್ತಾಂಶ ಪ್ರಕಾರ, 2020  ಕರ್ನಾಟಕದಲ್ಲಿ 3,246 ಹಲ್ಲೆ ಪ್ರಕರಣಗಳು ಮತ್ತು 446 ಲೈಂಗಿಕ ಕಿರುಕುಳ ಪ್ರಕರಣಗಳನ್ನು ವರದಿಯಾಗಿದೆ ಎಂದು ಬಹಿರಂಗಪಡಿಸಿದೆ. ಒಟ್ಟು 17,003 ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಆಂಧ್ರಪ್ರದೇಶವು 1,009 ಪ್ರಕರಣಗಳನ್ನು ಹೊಂದಿದೆ; ಏತನ್ಮಧ್ಯೆ, ತೆಲಂಗಾಣದಲ್ಲಿ 2,520 ಮಹಿಳೆಯರ ಮೇಲೆ ಹಲ್ಲೆ ಪ್ರಕರಣಗಳು ಮತ್ತು 737 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದೆ.

ದಕ್ಷಿಣ ಭಾರತದ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡು ಒಟ್ಟು 3,054 ಪ್ರಕರಣಗಳನ್ನು ದಾಖಲಿಸಿದ್ದು, ಇದರಲ್ಲಿ ಕೇರಳ 2,353 ಮತ್ತು ತಮಿಳುನಾಡು 701 ಪ್ರಕರಣಗಳನ್ನು ದಾಖಲಿಸಿದೆ. ಎರಡು ರಾಜ್ಯಗಳಲ್ಲಿ 1,193 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಯು 25 ಹಲ್ಲೆ ಪ್ರಕರಣ ಮತ್ತು ಲೈಂಗಿಕ ಕಿರುಕುಳದ ಶೂನ್ಯ ಪ್ರಕರಣಗಳನ್ನು ದಾಖಲಿಸಿದೆ ಎಂದು ಡೇಟಾ ಬಹಿರಂಗಪಡಿಸಿದೆ.

Tags: CABCab DriversHarassmentinvestigationPoliceSexual HarassmentTaxi driverstaxi&bus
Previous Post

ದಸರಾ, ದೀಪಾವಳಿ ಹಬ್ಬಕ್ಕೆ KSRTCಯಿಂದ 1,000 ಹೆಚ್ಚುವರಿ ಬಸ್

Next Post

ತಾಲಿಬಾನ್ ಬೆಂಬಲಿಸುವುದು ದೇಶದ್ರೋಹಕ್ಕೆ ಸಮ: ಯೋಗಿ ಆದಿತ್ಯನಾಥ್

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ತಾಲಿಬಾನ್ ಬೆಂಬಲಿಸುವುದು ದೇಶದ್ರೋಹಕ್ಕೆ ಸಮ: ಯೋಗಿ ಆದಿತ್ಯನಾಥ್

ತಾಲಿಬಾನ್ ಬೆಂಬಲಿಸುವುದು ದೇಶದ್ರೋಹಕ್ಕೆ ಸಮ: ಯೋಗಿ ಆದಿತ್ಯನಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada