ಬರುವ ಪಂಜಾಬ್ ಚುನಾವಣೆ ನಿಮಿತ್ತ ಇಂದು ಕೊಟ್ಕಾಪುರದಲ್ಲಿ ಪ್ರಚಾರ ನಡೆಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ ನಾನು ನನ್ನ ತಮ್ಮನಿಗಾಗಿ ಪ್ರಾಣ ನೀಡಲು ಸಿದ್ದ ಎಂದು ಹೇಳಿದ್ದಾರೆ.
ಇತ್ತೀಚಿಗೆ ಬಿಜೆಪಿಯು ಪ್ರಚಾರ ಸಭೆಯೊಂದರಲ್ಲಿ ಅಕ್ಕ-ತಮ್ಮನ ತಿಕ್ಕಾಟದಿಂದಾಗಿ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸೋಲಲಿದೆ ಎಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದರು. ಇದಕ್ಕೆ ಉತ್ತರಿಸಿದ ಪ್ರಿಯಾಂಕ ನಮ್ಮ ನಡುವೆ ಸಂಘರ್ಷ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ಮುಂದುವರೆದು, ಘರ್ಷಣೆಯು ಯೋಗಿ ಅವರ ಮನಸ್ಸಿನಲ್ಲಿದೆ. ಬಿಜೆಪಿಯಲ್ಲಿನ ಭಿನ್ನಾಬಿಪ್ರಾಯದಿಂದಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.