• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
September 1, 2026
in Top Story
0
ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?
Share on WhatsAppShare on FacebookShare on Telegram

ಬೆಂಗಳೂರಿನ ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (IISc) ತಜ್ಞರ ತಂಡ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರೊ. ಆಶೀಶ್ ವರ್ಮಾ ನೇತೃತ್ವದ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಆರು ತಜ್ಞರ ತಂಡ, ಯೋಜನೆಯಿಂದ ಸಂಚಾರ ದಟ್ಟಣೆ, ಪ್ರವಾಹದ ಅಪಾಯ ಹಾಗೂ ಪರಿಸರ ಹಾನಿ ಉಂಟಾಗುವ ಸಾಧ್ಯತೆ ಇದೆ ಎಂದು ರಾಜ್ಯಪಾಲರಿಗೆ ವರದಿ ಸಲ್ಲಿಸಿದೆ.

ADVERTISEMENT

 

ಹೆಬ್ಬಾಳದಿಂದ ಮೇಕ್ರಿ ಸರ್ಕಲ್ ಹಾಗೂ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಉದ್ದೇಶಿಸಿರುವ ಸುರಂಗ ಮಾರ್ಗದ ಕುರಿತು ಸಮಗ್ರ ಅಧ್ಯಯನ ನಡೆಸಿರುವ ತಜ್ಞರು, ಯೋಜನೆಯಿಂದ ಸಂಚಾರ ಸಮಸ್ಯೆ ಮತ್ತಷ್ಟು ಬಿಗಡಾಯಿಸಬಹುದು ಎಂದು ಎಚ್ಚರಿಸಿದ್ದಾರೆ. ವಿಶೇಷವಾಗಿ ಮೇಕ್ರಿ ಸರ್ಕಲ್ ಮತ್ತು ಹೆಬ್ಬಾಳ ಫ್ಲೈಓವರ್ ಅಂತ್ಯಭಾಗಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.ಹೆಬ್ಬಾಳ ತಗ್ಗು ಪ್ರದೇಶವಾಗಿರುವುದರಿಂದ ಭಾರಿ ಮಳೆಯ ಸಂದರ್ಭದಲ್ಲಿ ಸುರಂಗದಲ್ಲಿ ನೀರು ನುಗ್ಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗುವ ಅಪಾಯವಿದೆ. ಅಲ್ಲದೆ, ಯೋಜನೆಯಿಂದ ಹೆಬ್ಬಾಳ ಕೆರೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕ ಉದ್ಯಾನವನಗಳ ಮೇಲೆ ಪರಿಸರ ಪರಿಣಾಮ ಉಂಟಾಗಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಯೋಜನೆಯ ಮೂಲ ಅಂದಾಜು ವೆಚ್ಚಕ್ಕೆ ಹೋಲಿಸಿದರೆ ನಿರ್ಮಾಣ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ ಸಾರ್ವಜನಿಕರ ತೆರಿಗೆ ಹಣದ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ ಎಂದು ತಂಡ ಅಭಿಪ್ರಾಯಪಟ್ಟಿದೆ.ಇದರ ಜೊತೆಗೆ ಸುರಂಗ ರಸ್ತೆಯಲ್ಲಿ ವಿಧಿಸಲಾಗುವ ಹೆಚ್ಚಿನ ಟೋಲ್ ಸಾಮಾನ್ಯ ಜನರಿಗೆ ಹೊರೆಯಾಗುವ ಸಾಧ್ಯತೆಯಿದ್ದು, ರಸ್ತೆ ಬಳಕೆ ಶ್ರೀಮಂತ ವರ್ಗಕ್ಕೆ ಮಾತ್ರ ಸೀಮಿತವಾಗುವ ಆತಂಕವನ್ನೂ ತಜ್ಞರು ವ್ಯಕ್ತಪಡಿಸಿದ್ದಾರೆ.

DK Shivakumar : ಗದಗ ಜಿಲ್ಲೆಯ ಬರಪರಿಸ್ಥಿತಿ ಕುರಿತಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಭೆ..!

ತಮ್ಮ ವೈಜ್ಞಾನಿಕ ವಿಶ್ಲೇಷಣೆಯ ಆಧಾರದ ಮೇಲೆ ಯೋಜನೆಗೆ ‘E’ ಮತ್ತು ‘F’ ರೇಟಿಂಗ್‌ಗಳು ಬಂದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸಮರ್ಪಕ ತಾಂತ್ರಿಕ ಸಿದ್ಧತೆಗಳಿಲ್ಲದೆ ಟೆಂಡರ್ ಪ್ರಕ್ರಿಯೆ ಆರಂಭಿಸಿರುವುದಕ್ಕೂ ತಜ್ಞರು ಪ್ರಶ್ನೆ ಎತ್ತಿದ್ದಾರೆ.ಈ ಎಲ್ಲ ಅಂಶಗಳನ್ನು ಪರಿಗಣಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಹೆಬ್ಬಾಳ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದ ಟೆಂಡರ್ ಸೇರಿದಂತೆ ಸಂಪೂರ್ಣ ಯೋಜನೆಯನ್ನು ರದ್ದುಗೊಳಿಸುವಂತೆ IISc ತಜ್ಞರ ತಂಡ ರಾಜ್ಯಪಾಲರಿಗೆ ಮನವಿ ಮಾಡಿದೆ.

Tags: #BengaluruTraffic#FloodRisk ##karnataka#TunnelRoadbengaluruEnvironmenthebbalHebbalTunnelRoadIIScinfrastructure
Previous Post

ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!

Related Posts

ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!
Top Story

ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!

by ಪ್ರತಿಧ್ವನಿ
September 1, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 12ರಂದು ರಾಜ್ಯ ರಾಜಕೀಯದಲ್ಲಿ...

Read moreDetails
ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

September 1, 2026
ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

September 1, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

September 1, 2026
ಜಾತಿ ದೌರ್ಜನ್ಯ ಅಸ್ಪೃಶ್ಯತೆ ಮತ್ತು ರಾಜಕೀಯ

ಜಾತಿ ದೌರ್ಜನ್ಯ ಅಸ್ಪೃಶ್ಯತೆ ಮತ್ತು ರಾಜಕೀಯ

September 1, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada