PSI ನೇಮಕಾತಿ ಅಕ್ರಮದ ಹಿನ್ನೆಲೆ ಪರೀಕ್ಷೆಯನ್ನೇ ರದ್ದು ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಅರಗಜ್ಞಾನೇಂದ್ರಗೆ 8 ಶಾಸಕರು ಪತ್ರ ಬರೆದಿದ್ದಾರೆ.
ಹೌದು, ಕೆಲವರು ಮಾಡಿದ ತಪ್ಪಿನಿಂದಾಗಿ ಸಂಪೂರ್ಣ ಪಿಎಸ್ ಐ ಪರೀಕ್ಷೆಯನ್ನೇ ರದ್ದು ಮಾಡಿರುವುದು ಸರಿಯಲ್ಲ. ಸರ್ಕಾರದ ಈ ನಿರ್ಧಾರದಿಂದ ಬಡ ಮಕ್ಕಳಿಗೆ ಅನ್ಯಾಯವಾಗಿದೆ. ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ ಶಿಕ್ಷೆ ಆಗಬೇಕು. ಜೊತೆಗೆ ಬಡಮಕ್ಕಳಿಗೆ ಅನ್ಯಾಯವಾಗದ ರೀತಿ ನೋಡಿಕೊಳ್ಳಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರಗೆ ಶಾಸಕರಾದ ಕೆ.ಎಸ್. ಲಿಂಗೇಶ್, ಪಿ.ರಾಜೇಶ್, ಸುನಿಲ್ ನಾಯ್ಕ್, ರಘುಪತಿ ಭಟ್, ರಾಜುಕುಮಾರ್ ತೇಲ್ಕೂರ್, ಹರೀಶ್ ಪೂಂಜಾ. ಲಾಲಾಜಿ ಮೆಂಡನ್, ಜೆ.ಎನ್. ಗಣೇಶ್. ರಾಘವೇಂದ್ರ ಹಿಟ್ನಾಳ್ ಪತ್ರ ಬರೆದಿದ್ದಾರೆ.

ತನಿಖೆ ಪೂರ್ಣಗೊಳ್ಳುವ ಮೊದಲೇ PSI ಪರೀಕ್ಷೆ ರದ್ದು ಮಾಡಿರುವುದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಪ್ರಾಮಾಣಿಕರಿಗೆ ನ್ಯಾಯ ಸಿಗಬೇಕು ಎಂದು ಗೃಹ ಸಚಿವ ಅರಗಜ್ಞಾನೇಂದ್ರಗೆ 8 ಶಾಸಕರು ಪತ್ರದ ಮೂಲಕ ಮನವಿ ಮಾಡಿದ್ದಾರೆ.